26.1 C
ಪುತ್ತೂರು, ಬೆಳ್ತಂಗಡಿ
June 12, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಹಿಳಾ ಶ್ರಮಿಕರ ಸಂಗಮ – 2026 ಕಾರ್ಯಕ್ರಮ

ಬೆಳ್ತಂಗಡಿ: ರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಭಾರತೀಯ ಮಜ್ದೂರು ಸಂಘ ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ ಸಹಯೋಗದಲ್ಲಿ ಆಶಾ ಕಾರ್ಯಕರ್ತೆಯರ ಮಜ್ದೂರು ಸಂಘ, ಬಂಟ್ವಾಳ ತಾಲೂಕು ಇವರ ನೇತೃತ್ವದಲ್ಲಿ “ಮಹಿಳಾ ಶ್ರಮಿಕರ ಸಂಗಮ – 2026” ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು.

ಕಾರ್ಯಕ್ರಮವನ್ನು ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ತಿಮ್ಮಯ್ಯ ಹೆಚ್.ಆರ್ ಉದ್ಘಾಟಿಸಿ ಮಾತನಾಡಿ, ಮಹಿಳೆಯರ ಆರೋಗ್ಯ ಮತ್ತು ಸಮಾಜದ ಆರೋಗ್ಯ ವ್ಯವಸ್ಥೆಯಲ್ಲಿ ಆಶಾ ಕಾರ್ಯಕರ್ತೆಯರ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ಹೇಳಿದರು.

ಮುಖ್ಯ ವಕ್ತಾರರಾದ ಸಾಮಾಜಿಕ ಕಾರ್ಯಕರ್ತೆ ಮೀನಾಕ್ಷಿ ಅವರು ಮಾತನಾಡಿ, ಸಮಾಜದ ಅಭಿವೃದ್ಧಿಯಲ್ಲಿ ಮಹಿಳೆಯರ ಪಾತ್ರ ಅಪಾರವಾಗಿದೆ ಎಂದರು.

ಭಾರತೀಯ ಮಜ್ದೂರು ಸಂಘ ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷರಾದ ವಕೀಲ ಅನಿಲ್ ಕುಮಾರ್ ಬೆಳ್ತಂಗಡಿ ಮಾತನಾಡಿ ಆರೋಗ್ಯ ಕ್ಷೇತ್ರದಲ್ಲಿ ಆಶಾ ಕಾರ್ಯಕರ್ತೆಯರ ಸೇವೆ ಸಮಾಜಕ್ಕೆ ಅಮೂಲ್ಯವಾಗಿದೆ.ಭಾರತೀಯ ಮಜ್ದೂರು ಸಂಘ ದೇಶದ ಅತಿ ದೊಡ್ಡ ಕಾರ್ಮಿಕ ಸಂಘಟನೆಯಾಗಿದ್ದು,ಕಾರ್ಮಿಕರ ಹಿತ, ರಾಷ್ಟ್ರಹಿತ ಮತ್ತು ಸಮಾಜ ಹಿತ ಎಂಬ ತತ್ವದ ಮೇಲೆ ಸಂಘಟನೆ ಕಾರ್ಯನಿರ್ವಹಿಸುತ್ತಿದ್ದು ದೇಶದ ಕೋಟ್ಯಾಂತರ ಕಾರ್ಮಿಕರ ಹಕ್ಕುಗಳಿಗಾಗಿ ಹೋರಾಟ ನಡೆಸುತ್ತಿದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಆಶಾ ಕಾರ್ಯಕರ್ತೆಯರ ಮಜ್ದೂರು ಸಂಘ ಕರ್ನಾಟಕ ರಾಜ್ಯ ಕಾರ್ಯದರ್ಶಿ ರೇವತಿ ವಹಿಸಿದ್ದರು.

ಈ ಸಂದರ್ಭದಲ್ಲಿ ಹಲವು ವರ್ಷಗಳಿಂದ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿರುವ ಹಿರಿಯ ಆಶಾ ಕಾರ್ಯಕರ್ತೆಯರನ್ನು ಸನ್ಮಾನಿಸಲಾಯಿತು.
ಆಶಾ ಕಾರ್ಯಕರ್ತೆಯರ ಮಜ್ದೂರು ಸಂಘ ಅಧ್ಯಕ್ಷೆ ತುಳಸಿ ದೇವರಾಜ್ ಸ್ವಾಗತಿಸಿದರು.ಸುಜಾತ ವಂದಿಸಿದರು.ಡೀಲಾಕ್ಷಿ ನಿರೂಪಿಸಿದರು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಮುಂಡಾಜೆ ಮಂಜುಶ್ರೀ ಭಜನಾ ಮಂಡಳಿಗೆ ಆರ್ಥಿಕ ನೆರವು

Suddi Udaya

ಪೆರ್ಲ ಬೈಪಾಡಿ ಸರಕಾರಿ ಪ್ರೌಢಶಾಲೆಯ ಹಿರಿಯ ವಿದ್ಯಾರ್ಥಿ ಸಂಘದ ವತಿಯಿಂದ ಶಾಲೆಗೆ ಕೊಡುಗೆಗಳ ಹಸ್ತಾಂತರ

Suddi Udaya

ನೇಹಾ ಹತ್ಯೆ ಖಂಡಿಸಿ ಪ್ರತಿಭಟಿಸಿದ್ದ ಉಜಿರೆಯ ಎಬಿವಿಪಿ ನಾಯಕರ ಮೇಲೆ ಎಫ್‌ಐಆರ್ ದಾಖಲು

Suddi Udaya

ಸೇವಾಭಾರತಿ ಬೆಳ್ತಂಗಡಿ ತಾಲೂಕು ಇದರ 20ನೇ ವರ್ಷದ ಸಂಭ್ರಮ ಹಾಗೂ ರಕ್ತದಾನ ಶಿಬಿರ, ಸಾಧನ ಸಲಕರಣೆಗಳ ವಿತರಣೆ, ಸಾಧಕರಿಗೆ ಗೌರವ ಸಮರ್ಪಣೆ ಮತ್ತು ನೂತನ ಟ್ರಸ್ಟಿಗಳ ಸೇರ್ಪಡೆ ಕಾರ್ಯಕ್ರಮ

Suddi Udaya

22ನೇ ಮಹಿಳಾ ಆಲ್ ಇಂಡಿಯಾ ಇಂಟರ್ ಝೋನಲ್ ನೆಟ್ಬಾಲ್ ಪಂದ್ಯಾಟ: ಎಸ್ ಡಿ ಎಂ ಕಾಲೇಜಿನ 2 ಕ್ರೀಡಾಪಟುಗಳಿಗೆ ಬೆಳ್ಳಿ ಪದಕ

Suddi Udaya

ಮಚ್ಚಿನ ಗ್ರಾ.ಪಂ. ಅಧ್ಯಕ್ಷರಾಗಿ ರುಕ್ಮಿಣಿ, ಉಪಾಧ್ಯಕ್ಷರಾಗಿ ಸೋಮಾವತಿ ಆಯ್ಕೆ

Suddi Udaya
error: Content is protected !!