September 17, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳ್ತಂಗಡಿ: ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

ಬೆಳ್ತಂಗಡಿ: ದಿನಾಂಕ 24.03.2022 ರಂದು ರಾತ್ರಿ, ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಮನೆಗಳ್ಳತನ ಪ್ರಕರಣದಲ್ಲಿ (ಅ ಕ್ರ ಸಂಖ್ಯೆ: 22/2022 ಕಲಂ 457, 380 ಐಪಿಸಿ) ಆರೋಪಿಯಾಗಿ, ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಬೆಳ್ತಂಗಡಿ ನೆರಿಯ ನಿವಾಸಿ ಶರತ್ ಎಸ್ (24) ಎಂಬಾತನನ್ನು ಬೆಳ್ಳಾರೆ ಠಾಣಾ ಪಿ.ಎಸ್.ಐ ರವರು ಹಾಗೂ ಸಿಬ್ಬಂದಿಗಳು ಬಂಧಿಸಿದ್ದಾರೆ.

ನ್ಯಾಯಾಲಯದ ನ್ಯಾಯಾದೀಶ ಶಿವಣ್ಣ ಹೆಚ್ ಆರ್ ರವರು ಪ್ರಕರಣದಲ್ಲಿ ಆರೋಪಿಗೆ ಕಲಂ 457 ಐಪಿಸಿ ರಲ್ಲಿ 6 ತಿಂಗಳ ಸಾದಾರಣ ಸಜೆ ಹಾಗೂ 500 ದಂಡ, ಕಲಂ 380 ಐಪಿಸಿ ಯಲ್ಲಿ 10 ತಿಂಗಳ ಸಾದಾರಣ ಸಜೆ ಹಾಗೂ 500 ದಂಡವನ್ನು ವಿಧಿಸಿದ್ದು, ದಂಡ ಪಾವತಿಸದಿದ್ದರೆ 10 ದಿನಗಳ ಸಜೆಯನ್ನು ನೀಡಿ ಆದೇಶಿಸಿರುತ್ತಾರೆ.ಪ್ರಕರಣದ ತನಿಖಾಧಿಕಾರಿಗಳಾಗಿ ಸಂತೋಷ ಬಿ ಪಿ, ಪಿ ಎಸ್ ಐ ರವರು ಅಗತ್ಯ ಸಾಕ್ಷಿಗಳನ್ನು ಕಲೆಹಾಕಿ ಮಾನ್ಯ ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಸಿದ್ದು, ಸಹಾಯಕ ಸರ್ಕಾರಿ ಅಭಿಯೋಜಕರಾಗಿ ಪ್ರೀತಿ ಎಂ ಸಿ ರವರು ಸಮರ್ಥ ವಾದ ಮಂಡನೆ ನಡೆಸಿರುತ್ತಾರೆ.

ಸದ್ರಿ ಆರೋಪಿತನ ವಿರುದ್ಧ ಭಾರತೀಯ ನ್ಯಾಯ ಸಂಹಿತೆ ಕಲಂ 269 ರ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ನ್ಯಾಯಾಲಯದಲ್ಲಿ ಮಾನ್ಯ ನ್ಯಾಯಾದೀಶರಾದ ರೂ 1000 ದಂಡ ಅಥವಾ 10 ದಿನಗಳ ಕಾರಾಗೃಹ ವಾಸ ವಿಧಿಸಿ ಆದೇಶಿಸಿರುತ್ತದೆ.

Related posts

ಗುರುವಾಯನಕೆರೆ ಪ್ರಮೀಳಾ ಜ್ಯುವೆಲ್ಲರ್ಸ್ ನ ಮಾಲಕ ಹರಿಶ್ಚಂದ್ರ ಆಚಾರ್ಯ ನೈಕುಳಿ ನಿಧನ

Suddi Udaya

ಕಳೆಂಜ ನಡುಜಾರು ಸ.ಕಿ.ಪ್ರಾ. ಶಾಲೆಯಲ್ಲಿ ಕಣ್ಣಿನ ಉಚಿತ ತಪಾಸಣಾ ಶಿಬಿರ

Suddi Udaya

ಸರಗಳ್ಳತನದ ಆರೋಪಿಯನ್ನು ಬಂಧಿಸಿ, ರೂ 5,05,000 ಮೌಲ್ಯದ ಸೊತ್ತನ್ನು ವಶಪಡಿಸಿದ ಉಪ್ಪಿನಂಗಡಿ ಠಾಣಾ ಪೊಲೀಸರು

Suddi Udaya

ಧರ್ಮಸ್ಥಳ: ಮೃತ ದೇಹಗಳನ್ನು ಹೂತು ಹಾಕಿದ ದೂರು ಪ್ರಕರಣ ಕೇಸ್ ಫೈಲ್ ಪಡೆಯಲು ಧರ್ಮಸ್ಥಳ ಠಾಣೆಗೆ ಬಂದ ಎಸ್.ಐ.ಟಿ. ತನಿಖಾಧಿಕಾರಿ ಜಿತೇಂದ್ರ ದಯಾಮ

Suddi Udaya

ಮಲೆಕುಡಿಯ ಕಾಲನಿ ರಸ್ತೆಯ ಅವ್ಯವಸ್ಥೆಗೆ ತೀವ್ರ ಆಕ್ರೋಶ: ಧರ್ಮಸ್ಥಳ ಗ್ರಾಮದ ಮುಳಿಕ್ಕಾರು ಚುನಾವಣಾ ಬಹಿಷ್ಕಾರದ ಕೂಗು…

Suddi Udaya

ಬೆಳ್ತಂಗಡಿ: ವಾಣಿ ಕಾಲೇಜಿನಲ್ಲಿ ವಾರ್ಷಿಕ ಸಾಂಸ್ಕೃತಿಕ ದಿನಾಚರಣೆ

Suddi Udaya
error: Content is protected !!