March 12, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಮಾ.14-19: ಕೊಯ್ಯೂರು ಶ್ರೀ ಪಂಚದುರ್ಗಾಪರಮೇಶ್ವರಿ ದೇವಸ್ಥಾನದ ಪ್ರತಿಷ್ಠಾ ವರ್ಧಂತಿ ಮತ್ತು ವರ್ಷಾವಧಿ ಜಾತ್ರೆ

ಕೊಯ್ಯೂರು: ಮಾ.14 ರಿಂದ 19 ರವರೆಗೆ ಶ್ರೀ ವೇದಮೂರ್ತಿ ನಂದಕುಮಾರ ತಂತ್ರಿ ನೇತೃತ್ವದಲ್ಲಿ ಕೊಯ್ಯೂರು ಶ್ರೀ ಪಂಚದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಪ್ರತಿಷ್ಠಾ ವರ್ಧಂತಿ ಮತ್ತು ವರ್ಷಾವಧಿ ಜಾತ್ರೆ ಜರುಗಲಿರುವುದು.

ಮಾ.14ರಂದು ಬೆಳಿಗ್ಗೆ ಪ್ರಾರ್ಥನೆ, ಪ್ರಶ್ನಾಚಿಂತನೆ, ತೋರಣ ಮುಹೂರ್ತ, ಕಲಶಾಭಿಷೇಕ, ಧ್ವಜಾರೋಹಣ, ಮಹಾಪೂಜೆ, ರಾತ್ರಿ ಉತ್ಸವ, ಮಹಾಪೂಜೆ, ಬಲಿ. ಮಾ.15ರಂದು ಬೆಳಿಗ್ಗೆ ಉತವ, ಕಲಶಾಭಿಷೇಕ, ಮಹಾಪೂಜೆ, ಸಂಜೆ ಶ್ರೀ ಪಂಚದುರ್ಗಾ ಯಕ್ಷಗಾನ ಕಲಾಸಂಘ ಕೊಯ್ಯೂರು ಮತ್ತು ಅತಿಥಿ ಕಲಾವಿದರ ಕೂಡುವಿಕೆಯಿಂದ ಯಕ್ಷಗಾನ ತಾಳಮದ್ದಳೆ, ರಾತ್ರಿ ಉತ್ಸವ, ಪಡಿಯಕ್ಕಿ, ಮಹಾಪೂಜೆ, ಬಲಿ, ಮಾ.16ರಂದು ಬೆಳಿಗ್ಗೆ ದರ್ಶನ ಬಲಿ, ಕಲಶಾಭಿಷೇಕ, ಮಹಾಪೂಜೆ, ಚಂಡಿಕಾ ಹೋಮ, ಮಧ್ಯಾಹ್ನ ಸಾರ್ವಜನಿಕ ಅನ್ನಸಂತರ್ಪಣೆ, ರಾತ್ರಿ ಕೊಟ್ಟಿಗೆ ಕೆಲಸ, ಮಹಾರಥೋತ್ಸವ ಮಹಾಪೂಜೆ, ಭೂತಬಲಿ, ಕವಾಟ ಬಂಧನ, ಕೊಯ್ಯರು ದೇವಸ್ಥಾನ ಶಾಲಾ ಮಕ್ಕಳಿಂದ ಯಕ್ಷಗಾನ ಬಯಲಾಟ, ಮಾ.೧೭ರಂದು ಬೆಳಿಗ್ಗೆ ಕವಾಟ ಉದ್ಘಾಟನೆ, ಅಭಿಷೇಕ, ಪ್ರಸನ್ನ ಪೂಜೆ ಮೂಲಸ್ಥಾನ ಗುಂಡದಿAದ ಭಂಡಾರದ ಆಗಮನ, ಮಹಾಪೂಜೆ, ನಾಸಿಕ್ ಬ್ಯಾಂಡ್, ಬಣ್ಣದ ಕೊಡೆಗಳು, ಭಜನಾ ತಂಡಗಳು, ಕೀಲುಕುದುರೆ-ವಿಶೇಷ ಆಕರ್ಷಣೆ, ಭಜನಾ ಶ್ರೀ ಪಂಚದುರ್ಗಾ ಭಜನಾ ತಂಡದವರಿಂದ ಭಜನಾ ಕಾರ್ತಕ್ರಮ, ಮಧ್ಯಾಹ್ನ ಸಾರ್ವಜನಿಕ ಅನ್ನಸಂತರ್ಪಣೆ, ರಾತ್ರಿ ಬೆಳ್ತಂಗಡಿ ಶೆಟ್ಟಿ ಆರ್ಟ್ ಗಿರಿಧರ ಶೆಟ್ಟಿ ಬಳಗದವರಿಂದ ವಿನೂತನ ಶೈಲಿತ ನೃತ್ಯ, ಅಜ್ಜೆರ್ ಅಂಚಿ-ಅಜ್ಜಿ ಇಂಚಿ ತುಳು ಹಾಸ್ಯ ಸಾಂಸಾರಿಕ ನಾಟಕ, ರಾತ್ರಿ ಧರ್ಮದೈವಗಳ ನೇಮೋತ್ಸವ, ಶ್ರೀ ದೇವರ ಉತ್ಸವ, ಶ್ರೀ ಉಳ್ಳಾಲ್ತಿ ನೇಮೋತ್ಸವ, ಮಾಹಾಪೂಜೆ, ಕೊಳ್ಳೂರು ಭಾಸ್ಕರ ಮತ್ತು ಬಳಗದವರಿಂದ ವಿಶೇಷ ಚೆಂಡೆ ಸೇವೆ, ಜಿಲ್ಲಾ ಪ್ರಶಸ್ತಿ ವಿಜೇತ ಶ್ರೀ ಹರಿದಾಸ ಡೋಗ್ರ ಇವರಿಂದ ಸ್ಯಾಕ್ಸ್ಫೋನ್ ವಾದನ, ಮಾ.18ರಂದು ಬೆಳಿಗ್ಗೆ ಕಲಶಾಭಿಷೇಕ, ಮಾಹಾಪೂಜೆ, ರಾತ್ರಿ ಅವಭೃತ, ಸ್ನಾನ, ಧ್ವಜಾವರೋಹಣ, ಮಹಾಪೂಜೆ, ರಾತ್ರಿ ಕಲ್ಕಡ ಕಲ್ಲುರ್ಟಿ ನೇಮೋತ್ಸವ, ಮಾ.19ರಂದು ಸಂಪ್ರೋಕಣೆ-ಮಹಾಪೂಜೆ, ಮಾ.24ರಂದು ಜಾತ್ರಾ ಪ್ರಯುಕ್ತ ಮೇಳದವರಿಂದ “ಬನತ ಬೆಮ್ಮೆರ್” ಯಕ್ಷಗಾನ ಬಯಲಾಟ ನಡೆಯಲಿದೆ.

Related posts

ಸುವರ್ಣ ನ್ಯೂಸ್ ಮತ್ತು ಕನ್ನಡ ಪ್ರಭ ವತಿಯಿಂದ ಖ್ಯಾತ ಮೂತ್ರರೋಗ ತಜ್ಞ ಡಾ| ಸದಾನಂದ ಪೂಜಾರಿರವರಿಗೆ ಆರೋಗ್ಯ ಸೇವಾ ಶ್ರೇಷ್ಠತೆ ಪ್ರಶಸ್ತಿ

Suddi Udaya

ಪುಂಜಾಲಕಟ್ಟೆ: ಅಕ್ರಮ ಗೋಸಾಗಾಟ ಪ್ರಕರಣ ದಾಖಲು:ಜಾನುವಾರು ನೀಡಿದ ಮಾಲೀಕನ ಮನೆ ಮತ್ತು ಕೊಟ್ಟಿಗೆ ಒಪ್ತಿ

Suddi Udaya

ಮಚ್ಚಿನ: ಕಾಂಗ್ರೆಸ್ ಹಿರಿಯ ಕಾರ್ಯಕರ್ತ ಸೇಸು ಮೂಲ್ಯ ನಿಧನ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಭಜನಾ ಸಮಿತಿಯಿಂದ ಕಜೆಕಾರು ಶ್ರೀ ಮಹಾದೇವ ದೇವೇಶ್ವರ ದೇವಸ್ಥಾನದಲ್ಲಿ ನೂತನ ಕುಣಿತ ಭಜನಾ ತರಬೇತಿ ಉದ್ಘಾಟನೆ

Suddi Udaya

ಬೆಳ್ತಂಗಡಿ: ಎಸ್.ಎನ್. ಕಂಪ್ಯೂಟರ್ಸ್ ಮತ್ತು ಸೈಬರ್ ಕೇಂದ್ರ ಸ್ಥಳಾಂತರಗೊಂಡು ಪುನರಾರಂಭ

Suddi Udaya

ಮೇಲಂತಬೆಟ್ಟು ವಿಶೇಷಚೇತನರ ಸಮನ್ವಯ ಗ್ರಾಮಸಭೆ

Suddi Udaya
error: Content is protected !!