September 17, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳ್ತಂಗಡಿ: ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

ಬೆಳ್ತಂಗಡಿ: ದಿನಾಂಕ 24.03.2022 ರಂದು ರಾತ್ರಿ, ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಮನೆಗಳ್ಳತನ ಪ್ರಕರಣದಲ್ಲಿ (ಅ ಕ್ರ ಸಂಖ್ಯೆ: 22/2022 ಕಲಂ 457, 380 ಐಪಿಸಿ) ಆರೋಪಿಯಾಗಿ, ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಬೆಳ್ತಂಗಡಿ ನೆರಿಯ ನಿವಾಸಿ ಶರತ್ ಎಸ್ (24) ಎಂಬಾತನನ್ನು ಬೆಳ್ಳಾರೆ ಠಾಣಾ ಪಿ.ಎಸ್.ಐ ರವರು ಹಾಗೂ ಸಿಬ್ಬಂದಿಗಳು ಬಂಧಿಸಿದ್ದಾರೆ.

ನ್ಯಾಯಾಲಯದ ನ್ಯಾಯಾದೀಶ ಶಿವಣ್ಣ ಹೆಚ್ ಆರ್ ರವರು ಪ್ರಕರಣದಲ್ಲಿ ಆರೋಪಿಗೆ ಕಲಂ 457 ಐಪಿಸಿ ರಲ್ಲಿ 6 ತಿಂಗಳ ಸಾದಾರಣ ಸಜೆ ಹಾಗೂ 500 ದಂಡ, ಕಲಂ 380 ಐಪಿಸಿ ಯಲ್ಲಿ 10 ತಿಂಗಳ ಸಾದಾರಣ ಸಜೆ ಹಾಗೂ 500 ದಂಡವನ್ನು ವಿಧಿಸಿದ್ದು, ದಂಡ ಪಾವತಿಸದಿದ್ದರೆ 10 ದಿನಗಳ ಸಜೆಯನ್ನು ನೀಡಿ ಆದೇಶಿಸಿರುತ್ತಾರೆ.ಪ್ರಕರಣದ ತನಿಖಾಧಿಕಾರಿಗಳಾಗಿ ಸಂತೋಷ ಬಿ ಪಿ, ಪಿ ಎಸ್ ಐ ರವರು ಅಗತ್ಯ ಸಾಕ್ಷಿಗಳನ್ನು ಕಲೆಹಾಕಿ ಮಾನ್ಯ ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಸಿದ್ದು, ಸಹಾಯಕ ಸರ್ಕಾರಿ ಅಭಿಯೋಜಕರಾಗಿ ಪ್ರೀತಿ ಎಂ ಸಿ ರವರು ಸಮರ್ಥ ವಾದ ಮಂಡನೆ ನಡೆಸಿರುತ್ತಾರೆ.

ಸದ್ರಿ ಆರೋಪಿತನ ವಿರುದ್ಧ ಭಾರತೀಯ ನ್ಯಾಯ ಸಂಹಿತೆ ಕಲಂ 269 ರ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ನ್ಯಾಯಾಲಯದಲ್ಲಿ ಮಾನ್ಯ ನ್ಯಾಯಾದೀಶರಾದ ರೂ 1000 ದಂಡ ಅಥವಾ 10 ದಿನಗಳ ಕಾರಾಗೃಹ ವಾಸ ವಿಧಿಸಿ ಆದೇಶಿಸಿರುತ್ತದೆ.

Related posts

ರಾಜೇಶ್ ಎಂ.ಕೆ ಯವರ ಮೇಲೆ ನಡೆದ‌ ತಲ್ವಾರ್ ದಾಳಿ ಕೊಲೆ ಯತ್ನಕ್ಕೆ ಖಂಡನೆ: ದಲಿತ ದೌರ್ಜನ್ಯ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಲು : ಎಸ್ .ಟಿ ಮೋರ್ಚಾದ ಪ್ರಧಾನ ಕಾರ್ಯದರ್ಶಿ ವಿಠಲ ಕುಲೆ೯ ಆಗ್ರಹ

Suddi Udaya

ಪಂಚಾಯತ್‌ ನೌಕರರ ಮೂಲ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಬೆಂಗಳೂರುನಲ್ಲಿ ಗ್ರಾಮ ಪಂಚಾಯತ್ ನೌಕರರ ರಾಜ್ಯ ಮಟ್ಟದ ಬೃಹತ್ ಪ್ರತಿಭಟನೆ

Suddi Udaya

ನಾಳೆ (ಸೆ.17) ಲಾಯಿಲದಲ್ಲಿ ಶ್ರೀ ವಿಶ್ವಕರ್ಮ ಯಜ್ಞ ಮತ್ತು ಪೂಜೆ: ವಿಶ್ವಕರ್ಮ ಟ್ಯಾಲೆಂಟ್ ಶೋ-2026

Suddi Udaya

ಮಾ.9: ಲಾಯಿಲ ಶ್ರೀ ಗುರುರಾಘವೇಂದ್ರ ಸ್ವಾಮಿ ಮಠದ ಅಷ್ಠಬಂಧ ಬ್ರಹ್ಮಕಲಶೋತ್ಸವದ ಪೂರ್ವಭಾವಿ ಸಭೆ

Suddi Udaya

ಶ್ರೀ ಕ್ಷೇತ್ರ ಧ.ಗ್ರಾ.ಯೋಜನೆಯ ವತಿಯಿಂದ ಕನ್ಯಾಡಿಯ ನಾರಾಯಣ ಶೆಟ್ಟಿಗಾರ ರವರಿಗೆ ವಾತ್ಸಲ್ಯ ಕಿಟ್ ವಿತರಣೆ

Suddi Udaya

ಮುಂಡ್ರುಪ್ಪಾಡಿ ಸ. ಕಿ. ಪ್ರಾ. ಶಾಲೆಗೆ ಹರೀಶ್ ರಾವ್ ಮುಂಡ್ರುಪ್ಪಾಡಿಯವರಿಂದ 5 ಡೆಸ್ಕ್ ಕೊಡುಗೆ

Suddi Udaya
error: Content is protected !!