23.9 C
ಪುತ್ತೂರು, ಬೆಳ್ತಂಗಡಿ
June 16, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳ್ತಂಗಡಿ: ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

ಬೆಳ್ತಂಗಡಿ: ದಿನಾಂಕ 24.03.2022 ರಂದು ರಾತ್ರಿ, ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಮನೆಗಳ್ಳತನ ಪ್ರಕರಣದಲ್ಲಿ (ಅ ಕ್ರ ಸಂಖ್ಯೆ: 22/2022 ಕಲಂ 457, 380 ಐಪಿಸಿ) ಆರೋಪಿಯಾಗಿ, ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಬೆಳ್ತಂಗಡಿ ನೆರಿಯ ನಿವಾಸಿ ಶರತ್ ಎಸ್ (24) ಎಂಬಾತನನ್ನು ಬೆಳ್ಳಾರೆ ಠಾಣಾ ಪಿ.ಎಸ್.ಐ ರವರು ಹಾಗೂ ಸಿಬ್ಬಂದಿಗಳು ಬಂಧಿಸಿದ್ದಾರೆ.

ನ್ಯಾಯಾಲಯದ ನ್ಯಾಯಾದೀಶ ಶಿವಣ್ಣ ಹೆಚ್ ಆರ್ ರವರು ಪ್ರಕರಣದಲ್ಲಿ ಆರೋಪಿಗೆ ಕಲಂ 457 ಐಪಿಸಿ ರಲ್ಲಿ 6 ತಿಂಗಳ ಸಾದಾರಣ ಸಜೆ ಹಾಗೂ 500 ದಂಡ, ಕಲಂ 380 ಐಪಿಸಿ ಯಲ್ಲಿ 10 ತಿಂಗಳ ಸಾದಾರಣ ಸಜೆ ಹಾಗೂ 500 ದಂಡವನ್ನು ವಿಧಿಸಿದ್ದು, ದಂಡ ಪಾವತಿಸದಿದ್ದರೆ 10 ದಿನಗಳ ಸಜೆಯನ್ನು ನೀಡಿ ಆದೇಶಿಸಿರುತ್ತಾರೆ.ಪ್ರಕರಣದ ತನಿಖಾಧಿಕಾರಿಗಳಾಗಿ ಸಂತೋಷ ಬಿ ಪಿ, ಪಿ ಎಸ್ ಐ ರವರು ಅಗತ್ಯ ಸಾಕ್ಷಿಗಳನ್ನು ಕಲೆಹಾಕಿ ಮಾನ್ಯ ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಸಿದ್ದು, ಸಹಾಯಕ ಸರ್ಕಾರಿ ಅಭಿಯೋಜಕರಾಗಿ ಪ್ರೀತಿ ಎಂ ಸಿ ರವರು ಸಮರ್ಥ ವಾದ ಮಂಡನೆ ನಡೆಸಿರುತ್ತಾರೆ.

ಸದ್ರಿ ಆರೋಪಿತನ ವಿರುದ್ಧ ಭಾರತೀಯ ನ್ಯಾಯ ಸಂಹಿತೆ ಕಲಂ 269 ರ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ನ್ಯಾಯಾಲಯದಲ್ಲಿ ಮಾನ್ಯ ನ್ಯಾಯಾದೀಶರಾದ ರೂ 1000 ದಂಡ ಅಥವಾ 10 ದಿನಗಳ ಕಾರಾಗೃಹ ವಾಸ ವಿಧಿಸಿ ಆದೇಶಿಸಿರುತ್ತದೆ.

Related posts

ಎಸ್.ಕೆ.ಎಸ್.ಎಸ್.ಎಫ್ ಬೊಳ್ಮನಾರ್ ಶಾಖೆಯ ವತಿಯಿಂದ ಕೆಮ್ಮಟೆ ಸ.ಹಿ. ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya

ಗುರುವಾಯನಕೆರೆ: ವಿದ್ವತ್ ಪಿಯು ಕಾಲೇಜಿನ ವಿದ್ಯಾರ್ಥಿಗಳಿಂದ ವಿಶಿಷ್ಟ ರೀತಿಯಲ್ಲಿ “ಶಿಕ್ಷಕರ ದಿನ” ಆಚರಣೆ

Suddi Udaya

ಬೆಳ್ತಂಗಡಿ: ಮಗುವಿನ ನೆರವಿಗಾಗಿ ರಾಜಕೇಸರಿ ಸೇವಾ ಟ್ರಸ್ಟ್ ನಿಂದ ಪೆನ್ನು ಮಾರಾಟ

Suddi Udaya

ಮುಂಡಾಜೆ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಕೂಕ್ರಬೆಟ್ಟು ಸರ್ಕಾರಿ ಶಾಲೆಗೆ ರೂ.1.10 ಕೋಟಿ ವೆಚ್ಚದಲ್ಲಿ ಸುಸಜ್ಜಿತ ಕಟ್ಟಡ ನಿರ್ಮಾಣ: ಫೆ.17: ಕಟ್ಟಡ ಲೋಕಾರ್ಪಣಾ ಸಮಾರಂಭ

Suddi Udaya

ತಾಲೂಕಿನ ಬಡ ಮುಸ್ಲಿಂರನ್ನು ಅಜ್ಮೀರ್‌ಗೆ ಕಳುಹಿಸುವ ಪಿತೂರಿ: ಮತದಾರರು ಜಾಗೃತರಾಗಬೇಕು: ಸಲೀಂ ಗುರುವಾಯನಕರೆ

Suddi Udaya
error: Content is protected !!