July 27, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಮಾ.14-19: ಕೊಯ್ಯೂರು ಶ್ರೀ ಪಂಚದುರ್ಗಾಪರಮೇಶ್ವರಿ ದೇವಸ್ಥಾನದ ಪ್ರತಿಷ್ಠಾ ವರ್ಧಂತಿ ಮತ್ತು ವರ್ಷಾವಧಿ ಜಾತ್ರೆ

ಕೊಯ್ಯೂರು: ಮಾ.14 ರಿಂದ 19 ರವರೆಗೆ ಶ್ರೀ ವೇದಮೂರ್ತಿ ನಂದಕುಮಾರ ತಂತ್ರಿ ನೇತೃತ್ವದಲ್ಲಿ ಕೊಯ್ಯೂರು ಶ್ರೀ ಪಂಚದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಪ್ರತಿಷ್ಠಾ ವರ್ಧಂತಿ ಮತ್ತು ವರ್ಷಾವಧಿ ಜಾತ್ರೆ ಜರುಗಲಿರುವುದು.

ಮಾ.14ರಂದು ಬೆಳಿಗ್ಗೆ ಪ್ರಾರ್ಥನೆ, ಪ್ರಶ್ನಾಚಿಂತನೆ, ತೋರಣ ಮುಹೂರ್ತ, ಕಲಶಾಭಿಷೇಕ, ಧ್ವಜಾರೋಹಣ, ಮಹಾಪೂಜೆ, ರಾತ್ರಿ ಉತ್ಸವ, ಮಹಾಪೂಜೆ, ಬಲಿ. ಮಾ.15ರಂದು ಬೆಳಿಗ್ಗೆ ಉತವ, ಕಲಶಾಭಿಷೇಕ, ಮಹಾಪೂಜೆ, ಸಂಜೆ ಶ್ರೀ ಪಂಚದುರ್ಗಾ ಯಕ್ಷಗಾನ ಕಲಾಸಂಘ ಕೊಯ್ಯೂರು ಮತ್ತು ಅತಿಥಿ ಕಲಾವಿದರ ಕೂಡುವಿಕೆಯಿಂದ ಯಕ್ಷಗಾನ ತಾಳಮದ್ದಳೆ, ರಾತ್ರಿ ಉತ್ಸವ, ಪಡಿಯಕ್ಕಿ, ಮಹಾಪೂಜೆ, ಬಲಿ, ಮಾ.16ರಂದು ಬೆಳಿಗ್ಗೆ ದರ್ಶನ ಬಲಿ, ಕಲಶಾಭಿಷೇಕ, ಮಹಾಪೂಜೆ, ಚಂಡಿಕಾ ಹೋಮ, ಮಧ್ಯಾಹ್ನ ಸಾರ್ವಜನಿಕ ಅನ್ನಸಂತರ್ಪಣೆ, ರಾತ್ರಿ ಕೊಟ್ಟಿಗೆ ಕೆಲಸ, ಮಹಾರಥೋತ್ಸವ ಮಹಾಪೂಜೆ, ಭೂತಬಲಿ, ಕವಾಟ ಬಂಧನ, ಕೊಯ್ಯರು ದೇವಸ್ಥಾನ ಶಾಲಾ ಮಕ್ಕಳಿಂದ ಯಕ್ಷಗಾನ ಬಯಲಾಟ, ಮಾ.೧೭ರಂದು ಬೆಳಿಗ್ಗೆ ಕವಾಟ ಉದ್ಘಾಟನೆ, ಅಭಿಷೇಕ, ಪ್ರಸನ್ನ ಪೂಜೆ ಮೂಲಸ್ಥಾನ ಗುಂಡದಿAದ ಭಂಡಾರದ ಆಗಮನ, ಮಹಾಪೂಜೆ, ನಾಸಿಕ್ ಬ್ಯಾಂಡ್, ಬಣ್ಣದ ಕೊಡೆಗಳು, ಭಜನಾ ತಂಡಗಳು, ಕೀಲುಕುದುರೆ-ವಿಶೇಷ ಆಕರ್ಷಣೆ, ಭಜನಾ ಶ್ರೀ ಪಂಚದುರ್ಗಾ ಭಜನಾ ತಂಡದವರಿಂದ ಭಜನಾ ಕಾರ್ತಕ್ರಮ, ಮಧ್ಯಾಹ್ನ ಸಾರ್ವಜನಿಕ ಅನ್ನಸಂತರ್ಪಣೆ, ರಾತ್ರಿ ಬೆಳ್ತಂಗಡಿ ಶೆಟ್ಟಿ ಆರ್ಟ್ ಗಿರಿಧರ ಶೆಟ್ಟಿ ಬಳಗದವರಿಂದ ವಿನೂತನ ಶೈಲಿತ ನೃತ್ಯ, ಅಜ್ಜೆರ್ ಅಂಚಿ-ಅಜ್ಜಿ ಇಂಚಿ ತುಳು ಹಾಸ್ಯ ಸಾಂಸಾರಿಕ ನಾಟಕ, ರಾತ್ರಿ ಧರ್ಮದೈವಗಳ ನೇಮೋತ್ಸವ, ಶ್ರೀ ದೇವರ ಉತ್ಸವ, ಶ್ರೀ ಉಳ್ಳಾಲ್ತಿ ನೇಮೋತ್ಸವ, ಮಾಹಾಪೂಜೆ, ಕೊಳ್ಳೂರು ಭಾಸ್ಕರ ಮತ್ತು ಬಳಗದವರಿಂದ ವಿಶೇಷ ಚೆಂಡೆ ಸೇವೆ, ಜಿಲ್ಲಾ ಪ್ರಶಸ್ತಿ ವಿಜೇತ ಶ್ರೀ ಹರಿದಾಸ ಡೋಗ್ರ ಇವರಿಂದ ಸ್ಯಾಕ್ಸ್ಫೋನ್ ವಾದನ, ಮಾ.18ರಂದು ಬೆಳಿಗ್ಗೆ ಕಲಶಾಭಿಷೇಕ, ಮಾಹಾಪೂಜೆ, ರಾತ್ರಿ ಅವಭೃತ, ಸ್ನಾನ, ಧ್ವಜಾವರೋಹಣ, ಮಹಾಪೂಜೆ, ರಾತ್ರಿ ಕಲ್ಕಡ ಕಲ್ಲುರ್ಟಿ ನೇಮೋತ್ಸವ, ಮಾ.19ರಂದು ಸಂಪ್ರೋಕಣೆ-ಮಹಾಪೂಜೆ, ಮಾ.24ರಂದು ಜಾತ್ರಾ ಪ್ರಯುಕ್ತ ಮೇಳದವರಿಂದ “ಬನತ ಬೆಮ್ಮೆರ್” ಯಕ್ಷಗಾನ ಬಯಲಾಟ ನಡೆಯಲಿದೆ.

Related posts

ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಮಾನವ ಆರೋಗ್ಯ, ಸಮುದಾಯ ಆರೋಗ್ಯ ಮತ್ತು ವೈಯಕ್ತಿಕ ನೈರ್ಮಲ್ಯದ ಕುರಿತು ಜಾಗೃತಿ ಕಾರ್ಯಕ್ರಮ

Suddi Udaya

ಮಾಲಾಡಿ: ಬೆನ್ನುನೋವಿನ ಸಮಸ್ಯೆಯಿಂದ ಮನನೊಂದು ವ್ಯಕ್ತಿ ನೇಣುಬಿಗಿದು ಆತ್ಮಹತ್ಯೆ

Suddi Udaya

ಬಾಜಾರು-ಜೋಡುಕಟ್ಟೆ, ಕೊಡಿಬೆಟ್ಟು-ದೇವರಗುಡ್ಡೆ, ದೇವರಗುಡ್ಡೆ-ತೆಕ್ಕಾರು ರಸ್ತೆ ದುರಸ್ತಿಗೆ ಆಗ್ರಹ

Suddi Udaya

ರಾಷ್ಟ್ರೀಯ ಕರಾಟೆ ಪಂದ್ಯಾಟ: ಬೆಳ್ತಂಗಡಿಯ ಶೊರಿನ್ ರಿಯೊ ಕರಾಟೆ ಅಶೋಷಿಯೇಶನ್ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿ

Suddi Udaya

ಲಾಯಿಲ: ಕುಂಟಿನಿ ಅಲ್ ಬುಖಾರಿ ಜುಮ್ಮಾ ಮಸೀದಿಯಲ್ಲಿ ಈದುಲ್ ಫಿತರ್ ಆಚರಣೆ

Suddi Udaya

ಬೈಂದೂರು ಉತ್ಸವ: ಸೇವಾಭಾರತಿ ತಂಡ ಭಾಗಿ

Suddi Udaya
error: Content is protected !!