24.5 C
ಪುತ್ತೂರು, ಬೆಳ್ತಂಗಡಿ
June 11, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಮಾ.14-19: ಶ್ರೀ ಕ್ಷೇತ್ರ ಪಡ್ಡ್ಯಾರಬೆಟ್ಟದಲ್ಲಿ ವರ್ಷಾವಧಿ ಜಾತ್ರೋತ್ಸವ

ವೇಣೂರು: ಇತಿಹಾಸ ಪ್ರಸಿದ್ಧ ಪೆರಿಂಜೆಯ ಶ್ರೀ ಕ್ಷೇತ್ರ ಪಡ್ಡ್ಯಾರಬೆಟ್ಟ ಶ್ರೀ ಕೊಡಮಣಿತ್ತಾಯ ದೈವದ ಮೂಲಸ್ಥಾನದಲ್ಲಿ ಮಾ.14ರಿಂದ 19ರ ಪರ್ಯಂತ ವರ್ಷಾವಧಿ ಜಾತ್ರೆ, ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮವು ಜರಗಲಿದೆ ಎಂದು ಶ್ರೀ ಕ್ಷೇತ್ರ ಪಡ್ಡ್ಯಾರಬೆಟ್ಟದ ಅನುವಂಶೀಯ ಆಡಳಿತದಾರ ಎ. ಜೀವಂಧರ ಕುಮಾರ್ ಅವರು ತಿಳಿಸಿರುತ್ತಾರೆ.

ತುಳುನಾಡಿನ ಆಚಾರ-ವಿಚಾರ ಅತ್ಯಂತ ಶ್ರೀಮಂತವಾದುದು. ಶ್ರೀ ಕ್ಷೇತ್ರ ಪಡ್ಯಾರಬೆಟ್ಟದಲ್ಲಿ ನಡೆಯುವ ವರ್ಷಾವಧಿ ಜಾತ್ರೆಗೆ ನಾಡಿನ ವಿವಿಧ ಕಡೆಗಳಿಂದ ಭಕ್ತರು ಬಂದು ದೈವದ ಗಂಧಪ್ರಸಾದ ಸ್ವೀಕರಿಸುತ್ತಾರೆ.ಈಗಾಗಲೇ ಜಾತ್ರಾ ಮಹೋತ್ಸವಕ್ಕೆ ಸಕಲ ಸಿದ್ದತೆಗಳು ನಡೆಯುತ್ತಿದೆ ಎಂದು ಹೇಳಿದ್ದಾರೆ.

ಮಾ.14ರಂದು ಮಧ್ಯಾಹ್ನ ಪೆರಿಂಜೆ ಶ್ರೀ ಪುಷ್ಪದಂತ ಸ್ವಾಮಿ ಬಸದಿಯಲ್ಲಿ ದೇವರಿಗೆ ಪಂಚಾಮೃತಾಭಿಷೇಕ, ಶ್ರೀ ಅಮ್ಮನವರಿಗೆ ವರಹ ಪೂಜೆ, ರಾತ್ರಿ ಪಡ್ಡ್ಯೋಡಿಗುತ್ತಿನಲ್ಲಿ ಉಪಹಾರ, ಪಡ್ಡ್ಯೋಡಿಗುತ್ತಿನಿಂದ ಶ್ರೀ ಕೊಡಮಣಿತ್ತಾಯ ದೈವದ ಭಂಡಾರ ಇಳಿಯುವುದು, ಪಡ್ಯಾರಬೆಟ್ಟಕ್ಕೆ ಆಗಮನ, ಧ್ವಜಾರೋಹಣ, ಬಲಿ, ಚೆಂಡು ಜರುಗುವುದು.

ಮಾ.15ರಂದು ಭೂತಬಲಿ ಉತ್ಸವ ಜರುಗುವುದು. ಮಾ.16ರಂದು ಅಂಬೋಡಿ, ಬಲಿ, ಉತ್ಸವ ಹೂವಿನ ಪೂಜೆ, ರಥಾರೋಹಣ ಜರುಗುವುದು. ಮಾ.17ರಂದು ವರ್ಷಾವಧಿ ಜಾತ್ರೋತ್ಸವ, ಮಧ್ಯಾಹ್ನ ರಥದಲ್ಲಿ ಮಹಾಪೂಜೆ, ರಥೋತ್ಸವ, ಹೂವಿನ ಪೂಜೆ ಮಧ್ಯಾಹ್ನದಿಂದ ಸಂಜೆ ತನಕ ಮಹಾ ಅನ್ನಸಂತರ್ಪಣೆ, ರಾತ್ರಿ ಕೊಡಮಣಿತ್ತಾಯ ದೈವದ ನೇಮೋತ್ಸವ ವಿಜೃಂಭಣೆಯಿAದ ಜರುಗುವುದು.

ಮಾ.18ರಂದು ಧ್ವಜ ಅವರೋಹಣ, ಸಂಪ್ರೋಕ್ಷಣೆ ಪಡ್ಯೋಡಿಗುತ್ತಿಗೆ ಭಂಡಾರ ಹಿಂದಿರುಗುವುದು. ಮಾ ೧೯ರಂದು ರಾತ್ರಿ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ದಕ್ಷಿಣ ಭಾರತದ ಹೆಸರಾಂತ ಕಲಾವಿದ ಗಾನಪ್ರವೀಣ ಬಳ್ಳಪ್ಪದವು ಯೋಗೀಶ ಶರ್ಮ ಮತ್ತು ಬಳಗದವರಿಂದ ನಾದ ತರಂಗಭಕ್ತಿ ಸಂಗೀತ ಕಾರ್ಯಕ್ರಮ, ಹೂವಿನ ಪೂಜೆ, ಕೊಡಮಣಿತ್ತಾಯ ದೈವದ ಕುರುಸಂಬಿಲ ನೇಮ, ತುಲಾಭಾರ ಸೇವೆ, ಪ್ರತಿ ಸಂಕ್ರಮಣ ಮತ್ತು ಜಾತ್ರಾ ಸಮಯದ ೫ ದಿನಗಳು ಅನ್ನಸಂತರ್ಪಣೆ ಸೇವೆ ನಡೆಯಲಿರುವುದು.

ಪುಣ್ಯಪ್ರದ ಮಹೋತ್ಸವಕ್ಕೆ ಆದರದ ಸ್ವಾಗತ:
ಶ್ರೀ ಕ್ಷೇತ್ರದಲ್ಲಿ ಶ್ರೀ ಕೊಡಮಣಿತ್ತಾಯ ದೈವದ ವರ್ಷಾವಧಿ ಜಾತ್ರೆಯು ಅನಾದಿ ಕಾಲದಿಂದಲೂ ನಡೆದುಕೊಂಡು ಬಂದಿರುವ ರೀತಿ ರಿವಾಜು ಕಟ್ಟು ಕಟ್ಟಳೆಗಳ ಪ್ರಕಾರ ಮಾರೂರು ಖಂಡಿಗದ ವೇ.ಮೂ. ರಾಮದಾಸ ಅಸ್ರಣ್ಣರ ಪೌರೋಹಿತ್ಯದಲ್ಲಿ ವಿಧ್ಯುಕ್ತವಾಗಿ ನಡೆಯಲಿದೆ. ಈ ಪುಣ್ಯಪ್ರದ ಮಹೋತ್ಸವಕ್ಕೆ ಭಕ್ತರು ತಮ್ಮ ಇಷ್ಟ ಮಿತ್ರ ಬಂಧು ಭಾಂದವರೊಡನೆ ಚಿತ್ತೆöÊಸಿ ಈ ಸತ್ಕಾರ್ಯದಲ್ಲಿ ಭಾಗವಹಿಸಿ, ಪವಿತ್ರ ಕ್ಷೇತ್ರದ ಪರಮ ಪಾವನ ಸಿರಿಮುಡಿ ಗಂಧ-ಪ್ರಸಾದ ಸ್ವೀಕರಿಸಿ ಶ್ರೀ ದೈವದ ಕೃಪಾಕಟಾಕ್ಷಕ್ಕೆ ಪಾತ್ರರಾಗಬೇಕಾಗಿ ಅಪೇಕ್ಷಿಸುತ್ತೇನೆ. ಎ. ಜೀವಂಧರ ಕುಮಾರ್ ಪಡ್ಯೋಡಿಗುತ್ತು, ಅನುವಂಶೀಯ ಆಡಳಿತದಾರರು, ಶ್ರೀ ಕ್ಷೇತ್ರ ಪಡ್ಯಾರಬೆಟ್ಟ

Related posts

ಬೆಳ್ತಂಗಡಿ ಟೀಂ ಅಭಯಹಸ್ತ ಇದರ ಸಮಾಲೋಚನಾ ಸಭೆ

Suddi Udaya

ಲಾಯಿಲ: ಕುಂಟಿನಿ ಅಂಗನವಾಡಿ ಕೇಂದ್ರದಲ್ಲಿ ಪೋಲಿಯೋ ಲಸಿಕಾ ಅಭಿಯಾನ

Suddi Udaya

ಉಜಿರೆ ಹಳೆ ಪೇಟೆಯ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಕಟ್ಟಡ ಕುಸಿತ

Suddi Udaya

ಕುವೆಟ್ಟು, ಉಜಿರೆ, ಇಳಂತಿಲ ಗ್ರಾಪಂ 3 ಸದಸ್ಯ ಸ್ಥಾನಕ್ಕೆ ಉಪಚುನಾವಣೆ: ಕಾಂಗ್ರೆಸ್ ಬೆಂಬಲಿತ 3 ಅಭ್ಯರ್ಥಿಗಳ ಜಯ

Suddi Udaya

ಸುಳ್ಳು ಆರೋಪ ಹೊರಿಸಿ, ಕ್ಷೇತ್ರದ ಮಾನಹಾನಿ ಮಾಡುವ ಸ್ಥಾಪಿತ ಹಿತಾಸಕ್ತಿಗಳ ವಿರುದ್ಧ ಅಗತ್ಯ ಕಾನೂನು ಕ್ರಮಕ್ಕೆ ಒತ್ತಾಯಿಸಿ ಮಾ.27 ರಂದು ಧರ್ಮಸ್ಥಳದಲ್ಲಿ ಒಂದು ದಿನದ ಹರತಾಳ ಮತ್ತು ಪ್ರತಿಭಟನಾ ಸಭೆ

Suddi Udaya

ಕುತ್ಲೂರು ಸ.ಉ.ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದ ಪ್ರಯುಕ್ತ ಹಳೆ ವಿದ್ಯಾರ್ಥಿಗಳಿಂದ ಮಕ್ಕಳಿಗೆ ಐಡಿ ಕಾರ್ಡ್ ಮತ್ತು ಪ್ರೋತ್ಸಾಹ ಧನ ವಿತರಣೆ

Suddi Udaya
error: Content is protected !!