August 2, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಶಿಶಿಲ ಭಗವಾನ್ 1008 ಶ್ರೀ ಚಂದ್ರನಾಥ ಸ್ವಾಮಿ ಜಿನಮಂದಿರದ ವಾರ್ಷಿಕ ಮಹೋತ್ಸವ

ಶಿಶಿಲ: ಕಾರ್ಕಳ ಶ್ರೀ ಜೈನಮಠದ ಸ್ವಸ್ತಿಶ್ರೀ ಧ್ಯಾನಯೋಗಿ ಲಲಿತಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮಿಗಳ ಮಾರ್ಗದರ್ಶನ ಹಾಗೂ ಡಾ.ಡಿ. ವೀರೇಂದ್ರ ಹೆಗ್ಗಡೆಯವರು ಮತ್ತು ಹೇಮಾವತಿ ವೀ. ಹೆಗ್ಗಡೆಯವರ ಪ್ರೇರಣೆ, ಮಾರ್ಗದರ್ಶನದೊಂದಿಗೆ ಹಾಗೂ ಊರ ಪರಊರ ಸಹೃದಯಿ ಧರ್ಮಾಭಿಮಾನಿ ಸದ್ದರ್ಮ ಬಂಧುಗಳ, ಶಿಶುಗಲಿ ರಾಣಿ ಕಾಳಲಾ ದೇವಿ ಜೈನ ಮಹಿಳಾ ಸಮಾಜದ ಸಹಕಾರದೊಂದಿಗೆ ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲದ ಭಗವಾನ್ 1008 ಶ್ರೀ ಚಂದ್ರನಾಥ ಸ್ವಾಮಿ ಜಿನಮಂದಿರದ ವಾರ್ಷಿಕ ಮಹೋತ್ಸವವು ಬಹಳ ವಿಜೃಂಭಣೆಯಿಂದ ನಡೆಯಿತು.

ವಿಮಾನಶುದ್ಧಿ, 24 ಕಲಶ ಅಭಿಷೇಕ, ಪಂಚಾಮೃತ ಅಭಿಷೇಕ, ಶ್ರೀ ಸಮ್ಮೇದಗಿರಿ ಸಿದ್ಧ ಕ್ಷೇತ್ರಾ ಆರಾಧನೆ, ಮಹಾಮಾತೆ ಪದ್ಮಾವತಿ ದೇವಿಗೆ ಶೋಡಶೋಪಚಾರ, ಮುಂತಾದ ಧಾರ್ಮಿಕ ಪೂಜಾ ಕಾರ್ಯಕ್ರಮ, ಉತ್ಸವವು ನಡೆಯಿತು.

ಈ ಸಂಧರ್ಭದಲ್ಲಿ ಸಾಧನೆ ಗೈದ ಸಾಧಕರಿಗೆ, ಅತಿ ಹೆಚ್ಚಿನ ಅಂಕಗಳನ್ನು ಪಡೆದ ಸಂಘದ ಸದಸ್ಯರ ಮಕ್ಕಳನ್ನು ಸನ್ಮಾನಿಸಿ ಗೌರವಿಸಲಾಯಿತು. ಅಪಾರ ಸಂಖ್ಯೆಯಲ್ಲಿ ಬಾಗವಹಿಸಿ ಬಂಧುಗಳು ಕಾರ್ಯಕ್ರಮಕ್ಕೆ ಸಹಕಾರ ನೀಡಿದರು. ಆಡಳಿತ ಮಂಡಳಿಯ ಪದಾಧಿಕಾರಿಗಳು ಹಾಗೂ ಸದಸ್ಯರು ಸಹಕರಿಸಿದರು.

Related posts

ಬಿಲ್ಲು ಇಲ್ಲದೆ ಅಡಿಕೆ ಸಾಗಾಟ ವಾಹನ ವಶಕ್ಕೆ: ವಾಣಿಜ್ಯ ತೆರಿಗೆ ಇಲಾಖೆಯಿಂದ ದಂಡ

Suddi Udaya

ಬೆಳ್ತಂಗಡಿ ಮಹಿಳಾ ವೃಂದದ ಆಶ್ರಯದಲ್ಲಿ ಮಕ್ಕಳ ದಿನಾಚರಣೆ

Suddi Udaya

ಬೆಳ್ತಂಗಡಿ : ಆಡಳಿತ ಸೌಧದಲ್ಲಿ ಸರ್ವಜ್ಞ ಜಯಂತಿ ಆಚರಣೆ

Suddi Udaya

ಯಕ್ಷಭಾರತಿ ಕನ್ಯಾಡಿ ವತಿಯಿಂದ ವಿಶ್ವ ಯೋಗ ದಿನಾಚರಣೆ

Suddi Udaya

ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ ಮಂತ್ರಿಮಂಡಲ ಚುನಾವಣೆ

Suddi Udaya

ಧರ್ಮಸ್ಥಳದಲ್ಲಿ ಯಾತ್ರಾರ್ಥಿಯ ಬ್ಯಾಗ್‌ನಲ್ಲಿದ್ದ ನಗದು ಸಹಿತ ರೂ.2 ಲಕ್ಷ ಸೊತ್ತು ಕಳವು: ದೇವರ ದರ್ಶನಕ್ಕೆ ಹೋಗಿದ್ದಾಗ ಕಾರಿನ ಗಾಜು ಒಡೆದು ಕೃತ್ಯ

Suddi Udaya
error: Content is protected !!