July 27, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಕೆ.ಸಿ ರೋಡ್ ಶಾಖೆಯ 3ನೇ ವಾರ್ಷಿಕೋತ್ಸವ ಹಾಗೂ ಗ್ರಾಹಕರ ಸಭೆ

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಕೆ.ಸಿ.ರೋಡ್ ಶಾಖೆಯ ತೃತೀಯ ವಾರ್ಷಿಕೋತ್ಸವ ಹಾಗೂ ಗ್ರಾಹಕರ ಸಭೆಯು ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ರವರ ಅಧ್ಯಕ್ಷತೆಯಲ್ಲಿ ಕೆ.ಸಿ ರೋಡ್ ಶಾಖೆಯಲ್ಲಿ ಜರುಗಿತು.

ಸಂಘದ ಸದಸ್ಯರುಗಳಾದ ಎಚ್ ಸೀತರಾಮ ರೈ, ರಾಮಕೃಷ್ಣ, ಸೈಯ್ಯದ್ ಅಹಮ್ಮದ್ ಬಾವ, ಚಂದ್ರಶೇಖರ್, ಎಚ್ ಅಶ್ವಿತಾ, ಹಾಗೂ ಜಯಂತಿ ರವರು ದೀಪ ಪ್ರಜ್ವಲನೆ ಮಾಡುವುದರ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು.

ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ಸೌಮ್ಯ ವಿಜಯ್ ಮಾತನಾಡಿ, “ಸಂಘದ ಕೆ.ಸಿ ರೋಡ್ ಶಾಖೆಯಲ್ಲಿ ಗ್ರಾಹಕರ ಸಹಕಾರದಿಂದ ಉತ್ತಮ ರೀತಿಯಲ್ಲಿ ನಿರಖು ಠೇವಣಿ ಹಾಗೂ ಆಭರಣ ಸಾಲವನ್ನು ನೀಡಲಾಗಿದೆ. ಶಾಖೆಯ ವಾರ್ಷಿಕೋತ್ಸವದ ಪ್ರಯುಕ್ತ 100 ದಿನಗಳ ಠೇವಣಿಗಳಿಗೆ ವಿಶೇಷ ಬಡ್ಡಿ ದರ ಶೇ. 8.50, 500 ದಿನಗಳ ಠೇವಣಿಗಳಿಗೆ ವಿಶೇಷ ಬಡ್ಡಿ ದರ ಶೇ. 10 ಹಾಗೂ 1000 ದಿನಗಳ ಠೇವಣಿಗಳಿಗೆ ವಿಶೇಷ ಬಡ್ಡಿ ದರ ಶೇ. 10.50 ವನ್ನು ನೀಡಲಾಗುತ್ತಿದ್ದು, ಚಿನ್ನಾಭರಣ ಸಾಲಗಳಿಗೆ ಪ್ರತಿ ಗ್ರಾಂ ಗೆ ಗರಿಷ್ಟ ಮೌಲ್ಯ ರೂ. 12,000/- ರವರೆಗೆ ಯಾವುದೇ ಸೇವಾ ಶುಲ್ಕವಿಲ್ಲದೆ ಸಾಲವನ್ನು ಸದಸ್ಯರಿಗೆ ನೀಡಲಾಗುವುದು.

ನಮ್ಮ ಎಲ್ಲಾ ಶಾಖೆಗಳಲ್ಲಿ ಇ-ಮುದ್ರಾಂಕ, ನೆಫ್ಟ್, ಆರ್‌ಟಿಜಿಎಸ್ ಸೇವೆಯು ವ್ಯವಹಾರದ ಸಮಯದಲ್ಲಿ ಲಭ್ಯವಿದ್ದು, ಅದೇ ರೀತಿ ವಿಮಾ ಪಾಲಿಸಿಗಳಾದ ಎಲ್‌ಐಸಿ, ಕೇರ್, ಇಫ್ಕೋಟೋಕಿಯ, ಜನರಲ್ ಇನ್ಸುರೆನ್ಸ್ ಕಂಪೆನಿ ಮುಂತಾದ ಕಂಪೆನಿಗಳ ವಿಮಾ ಸೌಲಭ್ಯಗಳು ಲಭ್ಯವಿರುತ್ತದೆ. ಎಲ್ಲಾ ಗ್ರಾಹಕರು ಇದರ ಪ್ರಯೋಜನ ಪಡೆಯಬೇಕೆಂದು ವಿನಂತಿಸಿದರು. ಮುಂದಿನ ಏಪ್ರಿಲ್ ತಿಂಗಳಲ್ಲಿ ಕೆ.ಸಿ ರೋಡ್ ಶಾಖೆಯಲ್ಲಿ ವ್ಯವಸ್ಥಿತವಾಗಿ ಆರೋಗ್ಯ ಶಿಬಿರವನ್ನು ಆಯೋಜನೆ ಮಾಡಲಾಗುವುದು. ಎಲ್ಲಾ ಸಂಘದ ಗ್ರಾಹಕರು ಹಾಗೂ ಸಾರ್ವಜನಿಕರು ಇದರ ಸದುಪಯೋಗ ಪಡೆಯುವಂತೆ ತಿಳಿಸಿದರು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸಂಘದ ಸದಸ್ಯರಾದ ಶ್ರೀ ಎಚ್ ಸೀತರಾಮ ರೈ ರವರು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಸಿಬ್ಬಂದಿಗಳು ಗ್ರಾಹಕ ಸ್ನೇಹಿ ನಗುಮುಖದ ಸೇವೆಯನ್ನು ನೀಡುತ್ತಿದ್ದಾರೆ ಎಂದು ಸಂಘದ ಸೇವೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಸದಸ್ಯರಾದ ಎಚ್ ಅಶ್ವಿತಾ ಮಾತನಾಡಿ “ಸಿಬ್ಬಂದಿಗಳು ಗ್ರಾಹಕರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದು, ಸಂಘದಲ್ಲಿ ಲಭ್ಯವಿರುವ ಎಲ್ಲಾ ಸೇವೆಗಳ ಬಗ್ಗೆ ಉತ್ತಮ ರೀತಿಯಲ್ಲಿ ಮಾಹಿತಿ ನೀಡುತ್ತಾ ಇದ್ದಾರೆ” ಎಂದು ತಿಳಿಸಿದರು.

ಅಧ್ಯಕ್ಷತೆ ವಹಿಸಿದ್ದ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ರವರು ಮಾತನಾಡಿ , “ಗ್ರಾಹಕರ ಪ್ರೋತ್ಸಾಹದಿಂದ ಸಂಘವು ಉತ್ತಮ ಪ್ರಗತಿಯನ್ನು ಹೊಂದಲು ಸಾಧ್ಯವಾಗಿದೆ. ಸಂಸ್ಥೆಯು ಕೇವಲ ಬ್ಯಾಂಕಿಂಗ್ ಮಾತ್ರವಲ್ಲದೆ ಜೀವ ವಿಮೆ, ಆರೋಗ್ಯ ವಿಮೆ, ಮತ್ತು ವಾಹನ ವಿಮಾ ಸೌಲಭ್ಯಗಳನ್ನು ಹೊಂದಿರುತ್ತದೆ. ಸಹಕಾರಿ ಸಂಘದ ಸದಸ್ಯರಿಗೆ ಯಶಸ್ವಿನಿ ಆರೋಗ್ಯ ವಿಮೆಯ ನೋಂದಣಿಯ ಪ್ರಯೋಜನ ಸಂಘದ ಎಲ್ಲಾ ಶಾಖೆಗಳಲ್ಲಿ ಲಭ್ಯವಿದ್ದು, ಇದರ ಪ್ರಯೋಜನ ಪಡೆಯಬೇಕೆಂದು ವಿನಂತಿಸಿದರು. ಮುಂದಿನ ದಿನಗಳಲ್ಲಿ ಜಪುö್ಪ ಮಾರ್ಕೆಟ್ ಮತ್ತು ಮೂಡಬಿದ್ರೆಯಲ್ಲಿ ಹೊಸ ಶಾಖೆ ತೆರೆಯುವ ಯೋಜನೆಯನ್ನು ತಿಳಿಸಿ, ಇನ್ನೂ ಮುಂದೆಯು ಇದೇ ರೀತಿ ನಿಮ್ಮ ಸಹಕಾರವಿರಲಿ ಎಂದು ತಿಳಿಸಿದರು.
ಈ ಕಾರ್ಯಕ್ರಮದಲ್ಲಿ ಸಂಘದ ನಿರ್ದೇಶಕರುಗಳಾದ ಆನಂದ್ ಎಸ್. ಕೊಂಡಾಣ ಮತ್ತು ಗೋಪಾಲ್ ಎಮ್ ರವರು ಉಪಸ್ಥಿತಿರಿದ್ದರು.

ಶಾಖೆಯ ಸಿಬ್ಬಂದಿ ರತಿಕಾ ರವರು ಸ್ವಾಗತಿಸಿ, ಸಿಬ್ಬಂದಿ ವಿಶಾಲ್ ಕುಮಾರ್ ಸುವರ್ಣ ವಂದಿಸಿದರು. ಶಾಖೆಯ ಶಾಖಾಧಿಕಾರಿ ಶಿವರಾಮ ಕಾರ್ಯಕ್ರಮ ನಿರೂಪಿಸಿದರು.

Related posts

ಬಂಗೇರ ಕುಟುಂಬಸ್ಥರಿಂದ ಸಿ. ಎಂ, ಡಿ. ಸಿ. ಎಂ ಭೇಟಿ – ಕೃತಜ್ಞತೆ ಸಲ್ಲಿಕೆ

Suddi Udaya

ಗುಂಡೂರಿ: ಬ್ರಹ್ಮೋಪದೇಶದ ಪ್ರಯುಕ್ತ ಸೇವಾಶ್ರಮದಲ್ಲಿ ಆಶ್ರಮ‌ವಾಸಿಗಳಿಗೆ ಉಟೋಪಚಾರ, ಪ್ರತಿಭಾವಂತ ವಿದ್ಯಾರ್ಥಿನಿಗೆ ಗೌರವ ಧನ ವಿತರಣೆ

Suddi Udaya

ಮೊಗ್ರು: ಜೈ ಶ್ರೀ ರಾಮ್ ಫ್ರೆಂಡ್ಸ್ ಕ್ಲಬ್ ಅಲೆಕ್ಕಿ–ಮುಗೇರಡ್ಕ ಇದರ 25 ನೇ ವರ್ಷದ ರಜತ ಪಥ ಪ್ರಯುಕ್ತ ಕಟೀಲು ಶ್ರೀ ದುರ್ಗಾಪರಮೇಶ್ವರಿ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿಯವರಿಂದ ಶ್ರೀ ದೇವಿ ಮಹಾತ್ಮೆ

Suddi Udaya

ಉಜಿರೆ ಎಸ್. ಡಿ. ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya

ಮೂರುಗೋಳಿ ಶ್ರೀ ಪಾಂಡುರಂಗ ಭಜನಾ ಮಂದಿರದ ನೂತನ ಕಟ್ಟಡ ನಿರ್ಮಾಣದ ಬಗ್ಗೆ ಪೂರ್ವಭಾವಿ ಸಭೆ

Suddi Udaya

ಬೆಳ್ತಂಗಡಿ ಚರ್ಚ್ ಅಂಗನವಾಡಿ ಕೇಂದ್ರದಲ್ಲಿ ಗಾಂಧಿ ಜಯಂತಿ ಆಚರಣೆ

Suddi Udaya
error: Content is protected !!