26.1 C
ಪುತ್ತೂರು, ಬೆಳ್ತಂಗಡಿ
September 10, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಆಳ್ವಾಸ್‌ನಲ್ಲಿ ಮಹಿಳಾ ದಿನಾಚರಣೆಯ ಅಂಗವಾಗಿ ‘ಖೇಲ್ ಕೂದ್ ಮಹೋತ್ಸವ’

ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಸಕ್ಷಮ ಮಹಿಳಾ ಸಂಘದ ವತಿಯಿಂದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಆಳ್ವಾಸ್‌ನ ಮಹಿಳಾ ಸಿಬ್ಬಂದಿಗಳಿಗಾಗಿ “ಖೇಲ್ ಕೂದ್ ಮಹೋತ್ಸವ” ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.  

ಕಳೆದ ಒಂದು ವರ್ಷದ ಅವಧಿಯಲ್ಲಿ ಪ್ರತೀ ಶನಿವಾರ ಮಧ್ಯಾಹ್ನ ಶಿಕ್ಷಕ ಹಾಗೂ ಶಿಕ್ಷಕೇತರ ಮಹಿಳಾ ಸಿಬ್ಬಂದಿಗಳಿಗಾಗಿ ಕ್ರೀಡಾ ಚಟುವಟಿಕೆಗಳನ್ನು ನಿಯಮಿತವಾಗಿ ನಡೆಸಲಾಗುತ್ತಿದ್ದು, ಅದರ ಸಮಾರೋಪವಾಗಿ ಈ ಖೇಲ್ ಕೂದ್ ಮಹೋತ್ಸವವನ್ನು ಆಚರಿಸಲಾಯಿತು.

ನೋವೊ ಟ್ರೀ ಮೈಂಡ್ಸ್ ಸಂಸ್ಥೆಯ ಸಹನಾ ನಾಗರಾಜ್ ಮುಖ್ಯ ಅತಿಥಿಯಾಗಿ ಆಗಮಿಸಿ ಮಾತನಾಡಿ, ಮಹಿಳೆಯರು ಪರಸ್ಪರ  ಒಬ್ಬರನ್ನೊಬ್ಬರು ಬೆಂಬಲಿಸಿ ಕರ‍್ಯನಿರ್ವಹಿಸಿದರೆ  ನಿಜವಾದ ಸಬಲೀಕರಣ ಸಾಧ್ಯ ಎಂದು  ಅಭಿಪ್ರಾಯಪಟ್ಟರು. ಕಾರ್ಯಕ್ರಮವನ್ನು ಕಬಡ್ಡಿ ವಿಶ್ವಕಪ್‌ನ ಚಿನ್ನದ ಪದಕ ವಿಜೇತೆ ಹಾಗೂ ಭಾರತವನ್ನು ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರತಿನಿಧಿಸಿದ ಧನಲಕ್ಷ್ಮಿ ಉದ್ಘಾಟಿಸಿದರು. ಸಕ್ಷಮಾ ವತಿಯಿಂದ ಅವರನ್ನು ಸನ್ಮಾನಿಸಲಾಯಿತು.

ಸಕ್ಷಮಾ ಸಂಚಾಲಕಿ ಡಾ. ಗ್ರೀಷ್ಮಾ ಆಳ್ವ ಕಾರ್ಯಕ್ರಮದ ಯಶಸ್ವಿ ಆಯೋಜನೆಗೆ ಶ್ರಮಿಸಿದ ತಂಡದ ಪರಿಶ್ರಮವನ್ನು ಪ್ರಶಂಸಿಸಿ, ಮುಂದಿನ ದಿನಗಳಲ್ಲಿ ಮಹಿಳೆಯರಿಗಾಗಿ ಇನ್ನಷ್ಟು ಅರ್ಥಪೂರ್ಣ ಹಾಗೂ ಪರಿಣಾಮಕಾರಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಉದ್ದೇಶವಿದೆ ಎಂದರು.

ಸಕ್ಷಮಾ ಅಧ್ಯಕ್ಷೆ ಡಾ. ಅರ್ಚನಾ ಪ್ರಭಾತ್ ಸ್ವಾಗತಿಸಿದರು. ಕಾರ್ಯದರ್ಶಿ ಡಾ. ದೀಪಾ ಕೊಠಾರಿ ಮಹಿಳಾ ದಿನಾಚರಣೆಯ ಅಂಗವಾಗಿ ನಡೆದ ವಿವಿಧ ಚಟುವಟಿಕೆಗಳ ವರದಿಯನ್ನು ಮಂಡಿಸಿದರು. ಕಾರ್ಯಕ್ರಮವನ್ನು ನಿಯತಿ ನಿರೂಪಿಸಿ, ಸಕ್ಷಮಾ ಕ್ರೀಡಾ ಕಾರ್ಯದರ್ಶಿ ದಿವ್ಯಾ ಭಂಡಾರಿ  ವಂದಿಸಿದರು.

ಮಹಿಳಾ ದಿನಾಚರಣೆ ಅಂಗವಾಗಿ ಒಂದು ತಿಂಗಳ ಕಾಲ ವಿವಿಧ ಸಾಹಿತ್ಯ, ಸಾಂಸ್ಕೃತಿಕ ಹಾಗೂ ಮನರಂಜನಾ ಸ್ಪರ್ಧೆಗಳನ್ನು ಸಿಬ್ಬಂದಿ ಮತ್ತು ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾಗಿತ್ತು.

ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಸಂಸ್ಥೆಯ ಹಿರಿಯ ವಿದ್ಯಾರ್ಥಿನಿ ಜೀವಿತಾ ಶಂಕರ್ ಮುಖ್ಯ ಅತಿಥಿಯಾಗಿ ಆಗಮಿಸಿ, ಮಹಿಳಾ ಸಿಬ್ಬಂದಿಯ ಉತ್ಸಾಹ ಹಾಗೂ ತಂಡ ಮನೋಭಾವವನ್ನು ಮೆಚ್ಚಿ, ಆರೋಗ್ಯ ಮತ್ತು ಏಕತೆಯನ್ನು ಉತ್ತೇಜಿಸುವ ಇಂತಹ ಚಟುವಟಿಕೆಗಳಲ್ಲಿ ಹೆಚ್ಚೆಚ್ಚು ನಡೆಯಬೇಕು ಎಂದರು. 

Related posts

ವಾಣಿ ಕಾಲೇಜಿನಲ್ಲಿ ಕಾನೂನು ಅರಿವು ಕಾರ್ಯಕ್ರಮ

Suddi Udaya

ಕೊಕ್ಕಡ: ಹೊಲಿಗೆ ತರಬೇತಿ ಕೇಂದ್ರದ ಸಮಾರೋಪ ಸಮಾರಂಭ

Suddi Udaya

ನಾಳೆ ಬೆಳ್ತಂಗಡಿಗೆ ಜಿಲ್ಲಾಧಿಕಾರಿ ಭೇಟಿ

Suddi Udaya

ಉಜಿರೆ: ಕುಂಜರ್ಪ ನಿವಾಸಿ ಆನಂದ ಪೂಜಾರಿ ನಿಧನ

Suddi Udaya

ಸಿಎಸ್ಇಇಟಿ ಪರೀಕ್ಷೆ: ಉಜಿರೆ ಎಸ್‌ಡಿಎಂ ಪಿಯು ಕಾಲೇಜಿನ ಇಬ್ಬರು ವಿದ್ಯಾರ್ಥಿಗಳ ಸಾಧನೆ

Suddi Udaya

ನ್ಯಾಯಾಲಯಕ್ಕೆ ಹಾಜರಾಗದ ವಾರಂಟು ಆರೋಪಿಯನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

Suddi Udaya
error: Content is protected !!