July 28, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕರ್ನಾಟಕ ರಾಜ್ಯ ಓಪನ್ ರೀಲೆ ಸ್ಪರ್ಧೆಯಲ್ಲಿ ಸರ್ವಜಿತ್ ಪೂಜಾರಿ ಮರೋಡಿಯವರಿಗೆ ಚಿನ್ನದ ಪದಕ

ಬೆಳ್ತಂಗಡಿ: ಬೆಂಗಳೂರಿನ ಶ್ರೀ ಕಂಠೀರವ ಕ್ರೀಡಾಂಗಣದಲ್ಲಿ ಮಾ. 7ರಂದು ನಡೆದ ಕರ್ನಾಟಕ ಅಥ್ಲೆಟಿಕ್ಸ್ ಅಸೋಸಿಯೇಷನ್ ಆಯೋಜನೆಯ ಕರ್ನಾಟಕ ರಾಜ್ಯ 1st ಓಪನ್ ರೀಲೆ ಸ್ಪರ್ಧೆಯಲ್ಲಿ ಸರ್ವಜಿತ್ ಪೂಜಾರಿ ಇವರು ಚಿನ್ನದ ಪದಕವನ್ನು ಪಡದು ಮಾ 28ರಂದು ಚಂಡಿಗಡ್ ನಲ್ಲಿ ನಡೆಯುವ 3rd national (open )ಓಪನ್ ರಿಲೇಗೆ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

ಬೆಳ್ತಂಗಡಿ ತಾಲೂಕಿನ ಮರೋಡಿ ಗ್ರಾಮದ ಪಲಾರಗೋಳಿ ಕಲ್ಲೊಟ್ಟು ಹಾರ್ದಿತ್ತಿಲ್ ಸ್ವರ್ಣ ಕೇದಗೆ ನಿವಾಸದ ಜಯಾನಂದ ಪೂಜಾರಿ ಮತ್ತು ಪವಿತ್ರ ದಂಪತಿ ಸುಪುತ್ರ ಸರ್ವಜಿತ್ ಪೂಜಾರಿ ಇವರು ಹೋಲಿ ಏಂಜಲ್ ಶಿರ್ತಾಡಿಯಲ್ಲಿ ತನ್ನ ಪ್ರಾಥಮಿಕ ಶಿಕ್ಷಣವನ್ನು ಪಡೆದು 7 ನೇ ತರಗತಿಯಲ್ಲಿ ರಾಜ್ಯಮಟ್ಟದಲ್ಲಿ ತುಮಕೂರು 100 ಮೀಟರ್ ಭಾಗವಹಿಸುತ್ತಾರೆ. ನಂತರ ಆಳ್ವಾಸ್ ವಿದ್ಯಾಸಂಸ್ಥೆಯಲ್ಲಿ ಹೈಸ್ಕೂಲ್ ಶಿಕ್ಷಣವನ್ನು ಪಡೆದಿರುತ್ತಾರೆ .

ತರಬೇತುದಾರರಾದ ಶಾಂತಾರಾಮ್ , ತಿಲಕ್ ಹಾಗೂ ಆನಂದ ನೇತೃತ್ವದಲ್ಲಿ ಅಭ್ಯಾಸ ನಡೆಸಿರುತ್ತಾರೆ. ತಾಲೂಕು,ಜಿಲ್ಲೆ,ರಾಜ್ಯಮಟ್ಟದ ಪ್ರಶಸ್ತಿ ಪಡೆದಿರುತ್ತಾರೆ. ಪ್ರಸ್ತುತ ಆಳ್ವಾಸ್ ವಿದ್ಯಾಸಂಸ್ಥೆಯಲ್ಲಿ ಪದವಿ ವ್ಯಾಸಂಗ ಪಡೆಯುತ್ತಿದ್ದು ರಾಜ್ಯಮಟ್ಟ ಹಾಗೂ ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿ ಪ್ರಶಸ್ತಿ ಪಡೆದಿದ್ದಾರೆ.

ಆಂಧ್ರಪ್ರದೇಶದ ಗುಂಟೂರಿನಲ್ಲಿ ನಡೆದ 36 ನೇ ದಕ್ಷಿಣ ವಲಯದ ಕಿರಿಯ ಅಥ್ಲೆಟಿಕ್ ಚಾಂಪಿಯನ್ ಶಿಪ್ 2025 ರಲ್ಲಿ ನಡೆದ 4×100 ಮೀ ರಿಲೇ ಸ್ಪರ್ಧೆಯಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿ ಚಿನ್ನದ ಪದಕ ಗಳಿಸಿರುತ್ತಾರೆ ಹಾಗೂ ಒಡಿಸ್ಸಾ ರಾಜ್ಯದ ಭುವನೇಶ್ವರಿದಲ್ಲಿ ನಡೆದ 4×100 ಮೀ ರಿಲೇ ಸ್ಪರ್ಧೆಯಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿ ಚಿನ್ನದ ಪದಕ ಗೆದ್ದಿದ್ದಾರೆ. ಹಾಗೂ ಆಲ್ ಇಂಡಿಯಾ ಯೂನಿವರ್ಸಿಟಿಗೆ ಆಯ್ಕೆಯಾಗಿರುತ್ತಾರೆ.

Related posts

ತೋಟತ್ತಾಡಿ : ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಗ್ರಾಮ ಸಮಿತಿಯಿಂದ ಸ್ವಜಾತಿ ಬಾಂಧವರ ವಾರ್ಷಿಕ ಕ್ರೀಡಾಕೂಟ

Suddi Udaya

ಮಚ್ಚಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಹಾಸಭೆ: ರೂ. 65ಲಕ್ಷ ಲಾಭ, ಶೇ.15 ಡಿವಿಡೆಂಟ್

Suddi Udaya

ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಗೆ ಹುಟ್ಟುಹಬ್ಬದ ಸಂಭ್ರಮ ತಾಲೂಕಿನ ನಂಬರ್ 1 ವಾರಪತ್ರಿಕೆ ಸುದ್ದಿ ಉದಯ ಬಳಗದಿಂದ ಗೌರವಾರ್ಪಣೆ

Suddi Udaya

ಕೂಕ್ರಬೆಟ್ಟು, ಕೊಕ್ರಾಡಿ ಶಾಲೆಗಳ ನೂತನ ಕಟ್ಟಡಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ತಲಾ ₹ 2 ಲಕ್ಷ ಮಂಜೂರು

Suddi Udaya

ಆನೆ ದಾಳಿಯಿಂದ ಮೃತಪಟ್ಟ ಬಾಲಕೃಷ್ಣ ಶೆಟ್ಟಿಯವರ ಮನೆಗೆ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಘಟಕದ ಅಧ್ಯಕ್ಷ ನಾಗೇಶ್ ಕುಮಾರ್ ಗೌಡ ಭೇಟಿ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಮಕ್ಕಳ ದಿನಾಚರಣೆ

Suddi Udaya
error: Content is protected !!