September 17, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಸಮಸ್ಯೆ

ನಾವೂರು ಕೈಕಂಬ-ಹತ್ಯಡ್ಕ-ಸಂಪರ್ಕ ರಸ್ತೆ ಹಾಗೂ ಸೇತುವೆ ನಿರ್ಮಾಣಕ್ಕೆ ರೂ. 300ಲಕ್ಷ ಮಂಜೂರಿಗೆ ಕ್ರಮ ಕೈಗೊಳ್ಳುವಂತೆ ತಾ.ಪಂ ಇ.ಒ ಪತ್ರ: ಸಮಸ್ಯೆ ಬಗ್ಗೆ ಬೆಳಕು ಚೆಲ್ಲಿದ ಸುದ್ದಿ ‘ಉದಯ ಪತ್ರಿಕೆ’

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ನಾವೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ನಾವೂರು ಕೈಕಂಬ-ಹತ್ಯಡ್ಕ-ನಡ ಸಂಪರ್ಕ ರಸ್ತೆಗೆ ಡಾಮರೀಕರಣ ಮತ್ತು ನಾವೂರು ಕೈಕಂಬ ಎಂಬಲ್ಲಿ ಸೇತುವೆ ರಚನೆಗಾಗಿ ಅಗತ್ಯವಿರುವ ಅಂದಾಜು 300.೦೦ಲಕ್ಷ ರೂ.ಗಳ ಅನುದಾನವನ್ನು ಮಂಜೂರು ಮಾಡಲು ಕ್ರಮ ಕೈಗೊಳ್ಳುವಂತೆ ಬೆಳ್ತಂಗಡಿ ತಾ.ಪಂ ಕಾರ್ಯನಿರ್ವಹಣಾಧಿಕಾರಿಯವರು ದ.ಕ ಜಿಲ್ಲಾ ಪಂಚಾಯತದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಪತ್ರ ಬರೆದಿದ್ದಾರೆ.

ಸುದ್ದಿ ಉದಯ ಪತ್ರಿಕೆಯಲ್ಲಿ “ಕುಸಿಯುವ ಮೊದಲು ಹೊಸ ಸೇತುವೆ ನಿರ್ಮಾಣವಾಗುವುದೇ-ಚುನಾವಣೆ ಬಹಿಷ್ಕಾರ ಹಾಕಿದರೂ ಕ್ಯಾರೇ ಅನ್ನದ ಅಧಿಕಾರಿಗಳು” ಎಂಬ ಶಿರೋನಾಮೆಯಲ್ಲಿ ಈ ವಾರ ಪ್ರಕಟಿಸಲಾದ ವರದಿಯನ್ನು ಪರಿಗಣಿಸಿ ತಾ.ಪಂ ಕಾರ್ಯನಿರ್ವಹಣಾಧಿಕಾರಿಗಳು ಈ ಪತ್ರವನ್ನು ಬರೆದಿದ್ದಾರೆ.

ಬೆಳ್ತಂಗಡಿ ತಾಲೂಕಿನ ನಾವೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ನಾವೂರು ಕೈಕಂಬ-ಹತ್ಯಡ್ಕ-ನಡ ಸಂಪರ್ಕ ರಸ್ತೆಗೆ ಡಾಮರೀಕರಣ ಮತ್ತು ನಾವೂರು ಕೈಕಂಬ ಎಂಬಲ್ಲಿ ೧೯೮೧ರಲ್ಲಿ ರಚಿಸಲ್ಪಟ್ಟ ಕಿರುಸೇತುವೆಯು ತೀರಾ ಜೀರ್ಣಾವಸ್ಥೆಯಲ್ಲಿದ್ದು, ಕುಸಿಯುವ ಹಂತದಲ್ಲಿರುವುದರಿಂದ ಸದ್ರಿ ಕಿರುಸೇತುವೆಯ ಬದಲಿಗೆ ಹೊಸ ಸೇತುವೆಯನ್ನು ರಚಿಸುವಂತೆ ಹಲವಾರು ವರ್ಷಗಳಿಂದ ಗ್ರಾಮಸ್ಥರು ಒತ್ತಾಯಿಸಿ ಕಳೆದ ಲೋಕಸಭಾ ಚುನಾವಣೆಯಲ್ಲಿ ಮತದಾನವನ್ನು ಬಹಿಷ್ಕರಿಸುವುದಾಗಿ ಸದ್ರಿ ಸ್ಥಳದಲ್ಲಿ ಬ್ಯಾನರ್ ಅಳವಡಿಸಿ ಬೇಡಿಕೆಯನ್ನು ಸಲ್ಲಿಸಿದ್ದರು.

ಆ ಸಂದರ್ಭ ಸ್ಥಳಕ್ಕೆ ಭೇಟಿ ನೀಡಿದ ಅಧಿಕಾರಿಗಳು ಜನರ ಮನವೊಲಿಸಿ ಇಲ್ಲಿಗೆ ಸೇತುವೆ ಮಂಜೂರು ಮಾಡಿಸುವ ಭರವಸೆ ನೀಡಿದ್ದರು. ಬಳಿಕ ಸದ್ರಿ ರಸ್ತೆಗೆ ಡಾಮರೀಕರಣ ಹಾಗೂ ಸೇತುವೆ ರಚನೆ ಬಗ್ಗೆ ಸ್ಥಳ ಪರಿಶೀಲನೆ ನಡೆಸಿದ ಸಹಾಯಕ ಕಾರ್ಯಪಾಲಕ ಇಂಜಿನಿಯರ್, ಪಂಚಾಯತ್ ರಾಜ್ ಇಂಜಿನಿಯರಿಂಗ್ ಉಪವಿಭಾಗ ಬೆಳ್ತಂಗಡಿಯ ಅಧಿಕಾರಿಗಳು ರೂ. ೩೦೦ ಲಕ್ಷದ ಅಂದಾಜು ಪಟ್ಟಿಯನ್ನು ತಯಾರಿಸಿ ಸಲ್ಲಿಸಿದ್ದರು. ಆದರೆ ಇದುವರೆಗೂ ಇಲ್ಲಿಗೆ ಅನುದಾನ ಮಂಜೂರುಗೊಂಡಿಲ್ಲ. ಆದ್ದರಿಂದ ಮುಂದಿನ ಚುನಾವಣೆಯನ್ನು ಬಹಿಷ್ಕಾರಿಸುವ ನಿರ್ಧಾರವನ್ನು ಇಲ್ಲಿಯ ಜನರು ತೆಗೆದುಕೊಳ್ಳಲು ಚಿಂತನೆ ನಡೆಸುತ್ತಿದ್ದಾರೆ.

ಇದೀಗ ತಾ.ಪಂ ಕಾರ್ಯನಿರ್ವಾಹಣಾಧಿಕಾರಿಯವರು ಜಿ.ಪಂ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳಿಗೆ ಪತ್ರ ಬರೆದು, ಸದ್ರಿ ಸಂಪರ್ಕ ರಸ್ತೆಯು ಸುಮಾರು ೩೫ ಪರಿಶಿಷ್ಟ ಜಾತಿ ಕುಟುಂಬಗಳಿಗೆ ಅನುಕೂಲಕರವಾಗಿದ್ದು, ರಸ್ತೆಯು ತೀರಾ ನಾದುರಸ್ಥಿಯಲ್ಲಿದ್ದು, ರಸ್ತೆ ಮತ್ತು ಸೇತುವೆ ಕಾಮಗಾರಿಗೆ ಅಗತ್ಯವಿರುವ ಅಂದಾಜು ೩೦೦.೦೦ಲಕ್ಷ ರೂ.ಗಳ ಅನುದಾನವನ್ನು ಮಂಜೂರು ಮಾಡಲು ಸೂಕ್ತ ಕ್ರಮ ವಹಿಸುವಂತೆ ಪತ್ರದಲ್ಲಿ ವಿನಂತಿಸಿದ್ದಾರೆ.

Related posts

ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನದ ಪೀಠಾಧೀಶರಾದ ಸದ್ಗರು ಶ್ರೀ ಬ್ರಹ್ಮಾನಂದ
ಸರಸ್ವತಿ ಸ್ವಾಮೀಜಿಯವರಿಂದ ಸುದ್ದಿ ಉದಯ ವಾರಪತ್ರಿಕೆ ಬಿಡುಗಡೆ

Suddi Udaya

ತೆಂಕಕಾರಂದೂರು: ತೆಂಗಿನ ಮರ ಬಿದ್ದು ಮನೆಗೆ ಹಾನಿ: ಪ್ರಾಣಾಪಾಯದಿಂದ ಪಾರು

Suddi Udaya

ಉಜಿರೆ ಬೆನಕ ಹೆಲ್ತ್ ಸೆಂಟರ್ ವತಿಯಿಂದ ನಿವೃತ್ತ ಯೋಧ ಡಾ. ಗೋಪಾಲಕೃಷ್ಣ ಕಾಂಚೋಡುರಿಗೆ ಸನ್ಮಾನ

Suddi Udaya

ಬೆಳ್ತಂಗಡಿ ಆನ್ ಸಿಲ್ಕ್ ಆಷಾಢ ಬಂಪರ್ ಸೇಲ್ ಕೆಲ ದಿನಗಳವರೆಗೆ ವಿಸ್ತರಣೆ: ಶೇ.50 ಖರೀದಿಗಾಗಿ ಜನರ ಬಾರಿ ಬೆಂಬಲ

Suddi Udaya

8 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ್ದ ಬೆಳ್ತಂಗಡಿ ಪೊಲೀಸರು

Suddi Udaya

ನ್ಯಾಯತರ್ಪು ಜಾರಿಗೆಬೈಲು ನಿವಾಸಿ ಕೆ.ಎಂ. ಅಬೂಬಕ್ಕರ್ ರವರ ಬ್ಯಾಂಕ್ ಖಾತೆಯಿಂದ ಅಪರಿಚಿತ ಇಬ್ಬರು ವ್ಯಕ್ತಿಗಳಿಂದ ಹಣ ಕಳವು

Suddi Udaya
error: Content is protected !!