August 2, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳ್ತಂಗಡಿ: ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

ಬೆಳ್ತಂಗಡಿ: ದಿನಾಂಕ 24.03.2022 ರಂದು ರಾತ್ರಿ, ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಮನೆಗಳ್ಳತನ ಪ್ರಕರಣದಲ್ಲಿ (ಅ ಕ್ರ ಸಂಖ್ಯೆ: 22/2022 ಕಲಂ 457, 380 ಐಪಿಸಿ) ಆರೋಪಿಯಾಗಿ, ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಬೆಳ್ತಂಗಡಿ ನೆರಿಯ ನಿವಾಸಿ ಶರತ್ ಎಸ್ (24) ಎಂಬಾತನನ್ನು ಬೆಳ್ಳಾರೆ ಠಾಣಾ ಪಿ.ಎಸ್.ಐ ರವರು ಹಾಗೂ ಸಿಬ್ಬಂದಿಗಳು ಬಂಧಿಸಿದ್ದಾರೆ.

ನ್ಯಾಯಾಲಯದ ನ್ಯಾಯಾದೀಶ ಶಿವಣ್ಣ ಹೆಚ್ ಆರ್ ರವರು ಪ್ರಕರಣದಲ್ಲಿ ಆರೋಪಿಗೆ ಕಲಂ 457 ಐಪಿಸಿ ರಲ್ಲಿ 6 ತಿಂಗಳ ಸಾದಾರಣ ಸಜೆ ಹಾಗೂ 500 ದಂಡ, ಕಲಂ 380 ಐಪಿಸಿ ಯಲ್ಲಿ 10 ತಿಂಗಳ ಸಾದಾರಣ ಸಜೆ ಹಾಗೂ 500 ದಂಡವನ್ನು ವಿಧಿಸಿದ್ದು, ದಂಡ ಪಾವತಿಸದಿದ್ದರೆ 10 ದಿನಗಳ ಸಜೆಯನ್ನು ನೀಡಿ ಆದೇಶಿಸಿರುತ್ತಾರೆ.ಪ್ರಕರಣದ ತನಿಖಾಧಿಕಾರಿಗಳಾಗಿ ಸಂತೋಷ ಬಿ ಪಿ, ಪಿ ಎಸ್ ಐ ರವರು ಅಗತ್ಯ ಸಾಕ್ಷಿಗಳನ್ನು ಕಲೆಹಾಕಿ ಮಾನ್ಯ ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಸಿದ್ದು, ಸಹಾಯಕ ಸರ್ಕಾರಿ ಅಭಿಯೋಜಕರಾಗಿ ಪ್ರೀತಿ ಎಂ ಸಿ ರವರು ಸಮರ್ಥ ವಾದ ಮಂಡನೆ ನಡೆಸಿರುತ್ತಾರೆ.

ಸದ್ರಿ ಆರೋಪಿತನ ವಿರುದ್ಧ ಭಾರತೀಯ ನ್ಯಾಯ ಸಂಹಿತೆ ಕಲಂ 269 ರ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ನ್ಯಾಯಾಲಯದಲ್ಲಿ ಮಾನ್ಯ ನ್ಯಾಯಾದೀಶರಾದ ರೂ 1000 ದಂಡ ಅಥವಾ 10 ದಿನಗಳ ಕಾರಾಗೃಹ ವಾಸ ವಿಧಿಸಿ ಆದೇಶಿಸಿರುತ್ತದೆ.

Related posts

ಮುಂಡಾಜೆ: ರಾಷ್ಟ್ರೀಯ ಹೆದ್ದಾರಿ ಬದಿ ತ್ಯಾಜ್ಯ ರಾಶಿ

Suddi Udaya

ನಾಪತ್ತೆಯಾದ ಬೆಳಾಲಿನ ಯುವತಿ ಮದುವೆಯಾಗಿ ಧರ್ಮಸ್ಥಳ ಪೊಲೀಸ್ ಠಾಣೆಗೆ ಹಾಜರು

Suddi Udaya

ಬೆಂಗಳೂರಿನ ಸಪ್ನ ಪುಸ್ತಕ ಮಳಿಗೆಯಲ್ಲಿ ಪದ್ಮಲತಾ ಮೋಹನ್ ನಿಡ್ಲೆ ಅವರ ಕಾದಂಬರಿ ‘ಮೃತ್ಯು ಚುಂಬನ’ ಕೃತಿ ಬಿಡುಗಡೆ

Suddi Udaya

ರಾಜ್ಯಮಟ್ಟದ ಬಾಲಕರ ಟೆಕ್ವಾಂಡೋ ಸ್ಪರ್ಧೆ: ಶ್ರೀ ಗುರುದೇವ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಕೀರ್ತೇಶ್ ತೃತೀಯ ಸ್ಥಾನ

Suddi Udaya

ಬೆಳ್ತಂಗಡಿ ವಾಣಿ ಶಿಕ್ಷಣ ಸಂಸ್ಥೆಯಿಂದ ನಿವೃತ್ತ ಶಿಕ್ಷಕ ದಿ| ದೇವಪ್ಪ ಗೌಡರಿಗೆ ಸಂತಾಪ

Suddi Udaya

ಮೋಹನ್ ಕುಮಾರ್ ಸಂಚಾಲಕತ್ವದ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ಉಜಿರೆ ಹಾಗೂ ರೋಟರಿ ಕ್ಲಬ್ ಬೆಳ್ತಂಗಡಿ ಇದರ ಆಶ್ರಯದಲ್ಲಿ ಬೆಳಾಲು ಪೆರಿಯಡ್ಕ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಅಭಿವೃದ್ಧಿ ಕಾರ್ಯಗಳ ಹಸ್ತಾಂತರ ಕಾರ್ಯಕ್ರಮ

Suddi Udaya
error: Content is protected !!