March 12, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಮಾ.14-19: ಕೊಯ್ಯೂರು ಶ್ರೀ ಪಂಚದುರ್ಗಾಪರಮೇಶ್ವರಿ ದೇವಸ್ಥಾನದ ಪ್ರತಿಷ್ಠಾ ವರ್ಧಂತಿ ಮತ್ತು ವರ್ಷಾವಧಿ ಜಾತ್ರೆ

ಕೊಯ್ಯೂರು: ಮಾ.14 ರಿಂದ 19 ರವರೆಗೆ ಶ್ರೀ ವೇದಮೂರ್ತಿ ನಂದಕುಮಾರ ತಂತ್ರಿ ನೇತೃತ್ವದಲ್ಲಿ ಕೊಯ್ಯೂರು ಶ್ರೀ ಪಂಚದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಪ್ರತಿಷ್ಠಾ ವರ್ಧಂತಿ ಮತ್ತು ವರ್ಷಾವಧಿ ಜಾತ್ರೆ ಜರುಗಲಿರುವುದು.

ಮಾ.14ರಂದು ಬೆಳಿಗ್ಗೆ ಪ್ರಾರ್ಥನೆ, ಪ್ರಶ್ನಾಚಿಂತನೆ, ತೋರಣ ಮುಹೂರ್ತ, ಕಲಶಾಭಿಷೇಕ, ಧ್ವಜಾರೋಹಣ, ಮಹಾಪೂಜೆ, ರಾತ್ರಿ ಉತ್ಸವ, ಮಹಾಪೂಜೆ, ಬಲಿ. ಮಾ.15ರಂದು ಬೆಳಿಗ್ಗೆ ಉತವ, ಕಲಶಾಭಿಷೇಕ, ಮಹಾಪೂಜೆ, ಸಂಜೆ ಶ್ರೀ ಪಂಚದುರ್ಗಾ ಯಕ್ಷಗಾನ ಕಲಾಸಂಘ ಕೊಯ್ಯೂರು ಮತ್ತು ಅತಿಥಿ ಕಲಾವಿದರ ಕೂಡುವಿಕೆಯಿಂದ ಯಕ್ಷಗಾನ ತಾಳಮದ್ದಳೆ, ರಾತ್ರಿ ಉತ್ಸವ, ಪಡಿಯಕ್ಕಿ, ಮಹಾಪೂಜೆ, ಬಲಿ, ಮಾ.16ರಂದು ಬೆಳಿಗ್ಗೆ ದರ್ಶನ ಬಲಿ, ಕಲಶಾಭಿಷೇಕ, ಮಹಾಪೂಜೆ, ಚಂಡಿಕಾ ಹೋಮ, ಮಧ್ಯಾಹ್ನ ಸಾರ್ವಜನಿಕ ಅನ್ನಸಂತರ್ಪಣೆ, ರಾತ್ರಿ ಕೊಟ್ಟಿಗೆ ಕೆಲಸ, ಮಹಾರಥೋತ್ಸವ ಮಹಾಪೂಜೆ, ಭೂತಬಲಿ, ಕವಾಟ ಬಂಧನ, ಕೊಯ್ಯರು ದೇವಸ್ಥಾನ ಶಾಲಾ ಮಕ್ಕಳಿಂದ ಯಕ್ಷಗಾನ ಬಯಲಾಟ, ಮಾ.೧೭ರಂದು ಬೆಳಿಗ್ಗೆ ಕವಾಟ ಉದ್ಘಾಟನೆ, ಅಭಿಷೇಕ, ಪ್ರಸನ್ನ ಪೂಜೆ ಮೂಲಸ್ಥಾನ ಗುಂಡದಿAದ ಭಂಡಾರದ ಆಗಮನ, ಮಹಾಪೂಜೆ, ನಾಸಿಕ್ ಬ್ಯಾಂಡ್, ಬಣ್ಣದ ಕೊಡೆಗಳು, ಭಜನಾ ತಂಡಗಳು, ಕೀಲುಕುದುರೆ-ವಿಶೇಷ ಆಕರ್ಷಣೆ, ಭಜನಾ ಶ್ರೀ ಪಂಚದುರ್ಗಾ ಭಜನಾ ತಂಡದವರಿಂದ ಭಜನಾ ಕಾರ್ತಕ್ರಮ, ಮಧ್ಯಾಹ್ನ ಸಾರ್ವಜನಿಕ ಅನ್ನಸಂತರ್ಪಣೆ, ರಾತ್ರಿ ಬೆಳ್ತಂಗಡಿ ಶೆಟ್ಟಿ ಆರ್ಟ್ ಗಿರಿಧರ ಶೆಟ್ಟಿ ಬಳಗದವರಿಂದ ವಿನೂತನ ಶೈಲಿತ ನೃತ್ಯ, ಅಜ್ಜೆರ್ ಅಂಚಿ-ಅಜ್ಜಿ ಇಂಚಿ ತುಳು ಹಾಸ್ಯ ಸಾಂಸಾರಿಕ ನಾಟಕ, ರಾತ್ರಿ ಧರ್ಮದೈವಗಳ ನೇಮೋತ್ಸವ, ಶ್ರೀ ದೇವರ ಉತ್ಸವ, ಶ್ರೀ ಉಳ್ಳಾಲ್ತಿ ನೇಮೋತ್ಸವ, ಮಾಹಾಪೂಜೆ, ಕೊಳ್ಳೂರು ಭಾಸ್ಕರ ಮತ್ತು ಬಳಗದವರಿಂದ ವಿಶೇಷ ಚೆಂಡೆ ಸೇವೆ, ಜಿಲ್ಲಾ ಪ್ರಶಸ್ತಿ ವಿಜೇತ ಶ್ರೀ ಹರಿದಾಸ ಡೋಗ್ರ ಇವರಿಂದ ಸ್ಯಾಕ್ಸ್ಫೋನ್ ವಾದನ, ಮಾ.18ರಂದು ಬೆಳಿಗ್ಗೆ ಕಲಶಾಭಿಷೇಕ, ಮಾಹಾಪೂಜೆ, ರಾತ್ರಿ ಅವಭೃತ, ಸ್ನಾನ, ಧ್ವಜಾವರೋಹಣ, ಮಹಾಪೂಜೆ, ರಾತ್ರಿ ಕಲ್ಕಡ ಕಲ್ಲುರ್ಟಿ ನೇಮೋತ್ಸವ, ಮಾ.19ರಂದು ಸಂಪ್ರೋಕಣೆ-ಮಹಾಪೂಜೆ, ಮಾ.24ರಂದು ಜಾತ್ರಾ ಪ್ರಯುಕ್ತ ಮೇಳದವರಿಂದ “ಬನತ ಬೆಮ್ಮೆರ್” ಯಕ್ಷಗಾನ ಬಯಲಾಟ ನಡೆಯಲಿದೆ.

Related posts

ಎಸ್.ಡಿ.ಎಂ. ವಸತಿ ಪಪೂ ಕಾಲೇಜಿನ ‘ಸ್ಮೃತಿ’ ದ್ವೈ ವಾರ್ಷಿಕ ಸಂಚಿಕೆ ಬಿಡುಗಡೆ

Suddi Udaya

ಮಾತೃ ವೇದಿಕೆ ಉದನೆ ವಲಯ ಸಾಂಸ್ಕೃತಿಕ ಮತ್ತು ಕ್ರೀಡಾ ಕೂಟ: ನೆಲ್ಯಾಡಿ ಸಂತ ಅಲ್ಫೋನ್ಸ ಚರ್ಚ್ ಗೆ ಸಮಗ್ರ ಪ್ರಶಸ್ತಿ

Suddi Udaya

ಮುಂಡಾಜೆ ವಿವೇಕಾನಂದ ವಿದ್ಯಾವರ್ಧಕ ಅನುದಾನಿತ ಪ್ರೌಢ ಶಾಲೆಯಲ್ಲಿ ನಶಾಮುಕ್ತ ಭಾರತ ಅಭಿಯಾನದಡಿ ವಿದ್ಯಾರ್ಥಿಗಳಿಂದ ಪ್ರತಿಜ್ಞಾವಿಧಿ ಸ್ವೀಕಾರ

Suddi Udaya

” ಗೃಹಲಕ್ಷ್ಮಿ” ಯೋಜನೆಯ ನೋಂದಾವಣೆ : ರಜಾ ದಿನದಲ್ಲೂ ಕಾರ್ಯನಿರ್ವಹಿಸಿದ ಕಳಿಯ ಗ್ರಾ.ಪಂ.

Suddi Udaya

ಮಡಂತ್ಯಾರು: ಶ್ರೀಕೃಷ್ಣ ಜನ್ನಾಷ್ಟಮಿ ಸಮಿತಿಯಿಂದ 35 ನೇ ವರ್ಷದ ಮೊಸರು ಕುಡಿಕೆ ಉತ್ಸವ

Suddi Udaya

ವೇಣೂರು ಟೈಲರ್ ಅಸೋಸಿಯೇಷನ್ ನ ಸಮಿತಿಯ ಪದಾಧಿಕಾರಿಗಳು ಹಾಗೂ ಊರವರ ಸಹಕಾರದೊಂದಿಗೆ ಧನಸಹಾಯ ಹಸ್ತಾಂತರ

Suddi Udaya
error: Content is protected !!