March 12, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಾಲಾಡಿ ಗ್ರಾ.ಪಂ. ನಲ್ಲಿ ಮಹಿಳಾ ದಿನಾಚರಣೆ ಮತ್ತು ಗ್ಯಾರಂಟಿ ಯೋಜನೆಗಳ ಅರಿವು ಕಾರ್ಯಕ್ರಮ

ಮಾಲಾಡಿ: ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಬೆಳ್ತಂಗಡಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಗ್ರಾಮ ಪಂಚಾಯತ್ ಮಾಲಾಡಿ, ಅಮೃತ ಸಂಜೀವಿನಿ ಒಕ್ಕೂಟ ಮಾಲಾಡಿ ಇವುಗಳ ಜಂಟಿ ಸಹಯೋಗದಲ್ಲಿ ತಾಲೂಕು ಕಾರ್ಯನಿರ್ವಾಹಣಾಧಿಕಾರಿ ಭವಾನಿ ಶಂಕರ್ ರವರ ನೇತೃತ್ವದಲ್ಲಿ ಮಹಿಳಾ ದಿನಾಚರಣೆ ಮತ್ತು ಗ್ಯಾರಂಟಿ ಯೋಜನೆಗಳ ಅರಿವು ಕಾರ್ಯಕ್ರಮ ಮಾ.11ರಂದು ಗ್ರಾಮ ಪಂಚಾಯತ್ ಮಾಲಾಡಿಯಲ್ಲಿ ಆಯೋಜಿಸಲಾಯಿತು.

ಹಿಂದುಳಿದ ವರ್ಗಗಳ ಆಯೋಗದ ಸದಸ್ಯೆ ಪ್ರತಿಭಾ ಕುಳಾಯಿ ಕಾರ್ಯಕ್ರಮ ಉದ್ಘಾಟಿಸಿ, ಮಹಿಳೆಯರು ಸ್ವಾವಲಂಬಿಯಾಗಿ ಬದುಕುವ ಜೀವನೋಪಾಯ ಚಟುವಟಿಕೆ ಬಗ್ಗೆ ಮಾತನಾಡಿದರು. ಪ್ರಿಯ ಆಗ್ನೇಸ್ ಶಿಶು ಅಭಿವೃದ್ಧಿ ಇಲಾಖೆಯ ಬಗ್ಗೆ ಮಾಹಿತಿ ನೀಡಿದರು.

ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕಿ ಪ್ರತಿಮಾ ಮಹಿಳಾ ದಿನಾಚರಣೆಯ, ಮಾಸಿಕ ಹಳ್ಳಿ ಸಂತೆ ಮತ್ತು ಸಂಜೀವಿನಿ ಸದಸ್ಯರು ನಡೆಸುವ ಕೃಷಿ ಮತ್ತು ಕೃಷಿಯೇತರ ಜೀವನೋಪಾಯ ಚಟುವಟಿಕೆಯ ಸಾಲ ಸೌಲಭ್ಯ ಗಳ ಬಗ್ಗೆ ಮಾಹಿತಿಯನ್ನು ನೀಡಿದರು. ಆರ್ಥಿಕ ಸಾಕ್ಷಾರತ ಸಮಾಲೋಚಕಿ ಉಷಾ ಕಾಮತ್ ಇನ್ಶೂರೆನ್ಸ್, ಪಿಂಚಣಿ, ಬ್ಯಾಂಕ್ ಸಾಲಗಳ ಬಗ್ಗೆ ಸಂಜೀವಿನಿ ಸದಸ್ಯರಿಗೆ ಮಾಹಿತಿ ನೀಡಿದರು.

ಹಿರಿಯ ಅಂಗನವಾಡಿ ಕಾರ್ಯಕರ್ತೆಯರನ್ನು ಸನ್ಮಾನಿಸಲಾಯಿತು. ಒಕ್ಕೂಟದ ಸಿಬ್ಬಂದಿಗಳನ್ನು ಶಾಲು ಹೊದಿಸಿ ಗೌರವಿಸಲಾಯಿತು.

ಕಾರ್ಯಕ್ರಮ ದಲ್ಲಿ ಗ್ರಾಮ ಪಂಚಾಯತ್ ನ ನಿಕಟ ಪೂರ್ವ ಅಧ್ಯಕ್ಷರು, ಉಪಾಧ್ಯಕ್ಷರು ಸದಸ್ಯರು, ಒಕ್ಕೂಟದ ಅಧ್ಯಕ್ಷರು, ಪದಾಧಿಕಾರಿಗಳು, ಅಂಗನವಾಡಿ ಕಾರ್ಯಕರ್ತೆಯರು, ಹಾಗೂ ಕಳಿಯ, ಬಳೆoಜ, ಕುವೆಟ್ಟು, ಮಚ್ಚಿನ, ಮಡಂತ್ಯಾರು ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟದ ಸಿಬ್ಬಂದಿಗಳು, ಗ್ರಾಮ ಪಂಚಾಯತ್ ಸಿಬ್ಬಂದಿಗಳು, ಒಕ್ಕೂಟದ ಸಿಬ್ಬಂದಿಗಳು ಮತ್ತು ಸ್ವಚ್ಛ ಸಂಕಿರ್ಣ ಘಟಕದ ಸಿಬ್ಬಂದಿಗಳು,ಸಂಜೀವಿನಿ ಸಂಘದ ಸದಸ್ಯರು ಉಪಸ್ಥಿತರಿದ್ದರು.

ವಲಯ ಮೇಲ್ವಿಚಾರಕ ಜಯಾನಂದ್ ಪ್ರಸ್ತಾವಿಸಿ, ಸಂಜೀವಿನಿ ಸಿಬ್ಬಂದಿಗಳು ನಾಡಗೀತೆ ಹಾಡಿದರು. ಕಾರ್ಯನಿರ್ವಾಹಣಾಧಿಕಾರಿ ಭವಾನಿ ಶಂಕರ್ ಸ್ವಾಗತಿಸಿದರು. ಒಕ್ಕೂಟದ ಕಾರ್ಯದರ್ಶಿ ಸುನಿತಾ ಐತಲ್ ವಂದಿಸಿದರು. ವಲಯ ಮೇಲ್ವಿಚಾರಕ ಜಯಾನಂದ್ ನಿರೂಪಿಸಿದರು.

Related posts

ಗುರುವಾಯನಕೆರೆ ಕಾರು ಪಲ್ಟಿಯಾಗಿ ಚಾಲಕ ಸಾವು: ಮೃತರ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಶ್ರೀ ರಾಧಾ ಸುರಭಿ ಗೋ ಮಂದಿರ, ರಾಷ್ಟ್ರೀಯ ಗೋ ಸೇವಾ ಸಂಸ್ಥಾನ, ಗೋ ಸೇವಾ ಗತಿವಿಧಿ ಕರ್ನಾಟಕ ಇದರ ಸಂಯುಕ್ತ ಆಶ್ರಯದಲ್ಲಿ ಅಕ್ಟೋಬರ್ 15,16,17 ರಂದು ವೇಣೂರು, ಬೆಳ್ತಂಗಡಿ,ಉಜಿರೆ ರಾಜ ಮಾರ್ಗದಲ್ಲಿ ಸಾಗಲಿದೆ ಗೋ ರಥಯಾತ್ರೆ

Suddi Udaya

ಸೆ.15 ರಂದು ನಡೆಯಲಿರುವ ಮಾನವ ಸರಪಳಿ ಕಾರ್ಯಕ್ರಮದ ಅಂಗವಾಗಿ ಪ.ಪಂ. ಅಧ್ಯಕ್ಷ ಜಯಾನಂದ ಗೌಡರಿಂದ ಪ್ರಚಾರಕ್ಕೆ ಚಾಲನೆ

Suddi Udaya

ಲಾಯಿಲ: ಪ್ರಸನ್ನ ಪ.ಪೂ. ಕಾಲೇಜಿನಲ್ಲಿ ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟ

Suddi Udaya

ಕಡಿರುದ್ಯಾವರ : ವಿದ್ಯುತ್ ಪರಿವರ್ತಕದಿಂದ ಕಿಡಿ ಸಿಡಿದು ವ್ಯಾಪಿಸಿದ ಬೆಂಕಿ

Suddi Udaya

ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ: ಸುಮಾರು 65 ಬಗೆಯ ವಿವಿಧ ಖಾದ್ಯಗಳು

Suddi Udaya
error: Content is protected !!