ಬೆಳ್ತಂಗಡಿ; ಶಿಬಾಜೆಯ ಶ್ರೀಧರ ಕೊಲೆ ಪ್ರಕರಣದ ದೂರುದಾರನಾಗಿದ್ದ ಹರೀಶ್ ಮೊಗೇರ ತಾನು ಆತ್ಮಹತ್ಯೆ ಮಾಡಿಕೊಳ್ಳು ಪ್ರಯತ್ನಿಸಿಲ್ಲ ಆಕಸ್ಮಿಕವಾಗಿ ಮದ್ಯದ ಬಾಟ್ಲಿಯೆಂದು ವಿಷ ಸೇವಿಸರುವುದಾಗಿ ಪೊಲೀಸರಿಗೆ ಹೇಳಿಕೆ ನೀಡಿರುವುದಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರು ಮಾಹಿತಿ ನೀಡಿದ್ದಾರೆ.
ಮಾ.11ರಂದು ಬೆಳ್ತಂಗಡಿ ಶಿಬಾಜೆ ನಿವಾಸಿ ಹರೀಶ್ ಮುಗೇರ ಎಂಬವರು ಅನಾರೋಗ್ಯಕ್ಕೀಡಾಗಿ ಮಂಗಳೂರಿನ ವೆನ್ಹಾಕ್ ಆಸ್ಪತ್ರೆಯಲ್ಲಿ ದಾಖಲಾಗಿರುವುದಾಗಿ ವೈದ್ಯಕೀಯ ಸೂಚನಾಪತ್ರ ಬಂದ ಹಿನ್ನೆಲೆಯಲ್ಲಿ, ಸದ್ರಿ ವ್ಯಕ್ತಿಯನ್ನು ವಿಚಾರಿಸಿ, ಪೊಲೀಸರು ವಿಡಿಯೋ ಹೇಳಿಕೆ ದಾಖಲಿಸಿದ್ದು, ಅದರಂತೆ ಆತ ಮನೆಯಲ್ಲಿ ತಂದಿರಿಸಿದ್ದ ಮದ್ಯವನ್ನು, ಸೇವಿಸುವುದಕ್ಕಾಗಿ ರಾತ್ರಿ ತೆಗೆಯುವಾಗ ಕಣ್ಡಪ್ಪಿನಿಂದ ಸದ್ರಿ ಮದ್ಯದ ಬಾಟಲಿಯ ಬಳಿಯಿದ್ದ ಕೀಟನಾಶಕವನ್ನು ತೆಗೆದು ಸೇವಿಸಿರುವುದಾಗಿದೆ. ಇದರಿಂದಾಗಿ ಆರೋಗ್ಯದಲ್ಲಿ ಏರುಪೇರಾದಾಗ ತನ್ನ ಪತ್ನಿ ಹಾಗೂ ಜೊತೆಯಲ್ಲಿ ಕೆಲಸ ಮಾಡುತ್ತಿದ್ದವರು ಆಸ್ಪತ್ರೆಗೆ ದಾಖಲಿಸಿರುತ್ತಾರೆ.
ತಾನು ಮದ್ಯದ ಬದಲು ಆಕಸ್ಮಿಕವಾಗಿ ಕೀಟನಾಶಕ ಸೇವಿಸಿದ್ದು, ಆದ್ದರಿಂದ ಈ ಬಗ್ಗೆ ಯಾವುದೇ ಕಾನೂನು ಕ್ರಮದ ಅಗತ್ಯವಿರುವುದಿಲ್ಲ ಎಂಬುದಾಗಿ ಹೇಳಿಕೆ ನೀಡಿರುತ್ತಾರೆ. ಈ ಬಗ್ಗೆ ಇನ್ನಷ್ಟು ಹೆಚ್ಚಿನ ವಿಚಾರಣೆ ನಡೆಸುವ ಸಲುವಾಗಿ, ಸದ್ರಿ ವ್ಯಕ್ತಿಗೆ ತಜ್ಞರಿಂದ ಆಪ್ತ ಸಮಾಲೋಚನೆ ನಡೆಸುವಂತೆ, ಜಿಲ್ಲಾ ವೈದ್ಯಾಧಿಕಾರಿಯವರಿಗೆ ಕೊರಲಾಗಿರುತ್ತದೆ.ಆತನ ಮುಂದಿನ ಹೇಳಿಕೆಯ ಬಳಿಕ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು. ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರು ತಿಳಿಸಿದ್ದಾರೆ.












