September 17, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಶಿಶಿಲ ಭಗವಾನ್ 1008 ಶ್ರೀ ಚಂದ್ರನಾಥ ಸ್ವಾಮಿ ಜಿನಮಂದಿರದ ವಾರ್ಷಿಕ ಮಹೋತ್ಸವ

ಶಿಶಿಲ: ಕಾರ್ಕಳ ಶ್ರೀ ಜೈನಮಠದ ಸ್ವಸ್ತಿಶ್ರೀ ಧ್ಯಾನಯೋಗಿ ಲಲಿತಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮಿಗಳ ಮಾರ್ಗದರ್ಶನ ಹಾಗೂ ಡಾ.ಡಿ. ವೀರೇಂದ್ರ ಹೆಗ್ಗಡೆಯವರು ಮತ್ತು ಹೇಮಾವತಿ ವೀ. ಹೆಗ್ಗಡೆಯವರ ಪ್ರೇರಣೆ, ಮಾರ್ಗದರ್ಶನದೊಂದಿಗೆ ಹಾಗೂ ಊರ ಪರಊರ ಸಹೃದಯಿ ಧರ್ಮಾಭಿಮಾನಿ ಸದ್ದರ್ಮ ಬಂಧುಗಳ, ಶಿಶುಗಲಿ ರಾಣಿ ಕಾಳಲಾ ದೇವಿ ಜೈನ ಮಹಿಳಾ ಸಮಾಜದ ಸಹಕಾರದೊಂದಿಗೆ ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲದ ಭಗವಾನ್ 1008 ಶ್ರೀ ಚಂದ್ರನಾಥ ಸ್ವಾಮಿ ಜಿನಮಂದಿರದ ವಾರ್ಷಿಕ ಮಹೋತ್ಸವವು ಬಹಳ ವಿಜೃಂಭಣೆಯಿಂದ ನಡೆಯಿತು.

ವಿಮಾನಶುದ್ಧಿ, 24 ಕಲಶ ಅಭಿಷೇಕ, ಪಂಚಾಮೃತ ಅಭಿಷೇಕ, ಶ್ರೀ ಸಮ್ಮೇದಗಿರಿ ಸಿದ್ಧ ಕ್ಷೇತ್ರಾ ಆರಾಧನೆ, ಮಹಾಮಾತೆ ಪದ್ಮಾವತಿ ದೇವಿಗೆ ಶೋಡಶೋಪಚಾರ, ಮುಂತಾದ ಧಾರ್ಮಿಕ ಪೂಜಾ ಕಾರ್ಯಕ್ರಮ, ಉತ್ಸವವು ನಡೆಯಿತು.

ಈ ಸಂಧರ್ಭದಲ್ಲಿ ಸಾಧನೆ ಗೈದ ಸಾಧಕರಿಗೆ, ಅತಿ ಹೆಚ್ಚಿನ ಅಂಕಗಳನ್ನು ಪಡೆದ ಸಂಘದ ಸದಸ್ಯರ ಮಕ್ಕಳನ್ನು ಸನ್ಮಾನಿಸಿ ಗೌರವಿಸಲಾಯಿತು. ಅಪಾರ ಸಂಖ್ಯೆಯಲ್ಲಿ ಬಾಗವಹಿಸಿ ಬಂಧುಗಳು ಕಾರ್ಯಕ್ರಮಕ್ಕೆ ಸಹಕಾರ ನೀಡಿದರು. ಆಡಳಿತ ಮಂಡಳಿಯ ಪದಾಧಿಕಾರಿಗಳು ಹಾಗೂ ಸದಸ್ಯರು ಸಹಕರಿಸಿದರು.

Related posts

ಉಜಿರೆ ಟಿ.ಬಿ. ಕ್ರಾಸ್ ನಿವಾಸಿ ಸಂದೀಪ್ ಅಸೌಖ್ಯದಿಂದ ನಿಧನ

Suddi Udaya

ಬೆಳ್ತಂಗಡಿ: ಮುಳಿಯ ಜ್ಯುವೆಲ್ಸ್ ಮತ್ತು ಸುದ್ದಿ ಉದಯ ವಾರಪತ್ರಿಕೆಯಿಂದ “ಸ್ವಾತಂತ್ರೋತ್ಸವ” ಆಚರಣೆ

Suddi Udaya

ಚಾರ್ಮಾಡಿ : ನಾಗಬ್ರಹ್ಮ, ನಾಗಯಕ್ಷಿಣಿ ಹಾಗೂ ಶಿರಾಡಿ ದೈವ, ರುದ್ರಾಂಡಿ ದೈವ ಹಾಗೂ ಪರಿವಾರ ದೈವಗಳ ನೇಮೋತ್ಸವ: ವಾರ್ಷಿಕ ಜಾತ್ರಾ ಮಹೋತ್ಸವ

Suddi Udaya

ಕರ್ನಾಟಕ ರಾಜ್ಯ ವಕ್ಫ್ ಮಂಡಳಿಯಿಂದ ದ.ಕ. ಜಿಲ್ಲೆಯ 7 ಮಸೀದಿಗಳಿಗೆ ಮೃತದೇಹ ಸಂರಕ್ಷಣಾ ಫ್ರೀಝರ್ ಹಸ್ತಾಂತರ

Suddi Udaya

ಉಜಿರೆ ಎಸ್.ಡಿ.ಎಂ ಶಿಕ್ಷಣ ಸಂಸ್ಥೆಯಲ್ಲಿ ‘ ನಶಾ ಮುಕ್ತ ಭಾರತ’ ಬೃಹತ್ ಜಾಗೃತಿ ಕಾರ್ಯಕ್ರಮ

Suddi Udaya

ಜೇಸಿಐ ಕೊಕ್ಕಡ ಕಪಿಲಾ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!