July 27, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಿಕ್ಷಣ ಸಂಸ್ಥೆ

ಉಜಿರೆ: ರತ್ನಮಾನಸದಲ್ಲಿ ಮಾತಾ -ಪಿತೃ ಪೂಜನ ಹಾಗೂ ಆಶೀರ್ವಾದ ಕಾರ್ಯಕ್ರಮ

ಉಜಿರೆ : ರತ್ನಮಾನಸ ವಿದ್ಯಾರ್ಥಿ ನಿಲಯದಲ್ಲಿ ಹತ್ತನೇ ತರಗತಿ ವಿದ್ಯಾರ್ಥಿಗಳ ಮಾತಾ -ಪಿತೃ ಪೂಜನ ಹಾಗೂ ಆಶೀರ್ವಾದ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಸಂಪನ್ಮೂಲ ವ್ಯಕ್ತಿ ಉಜಿರೆ ಪದವಿ ಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕ ಮಹಾವೀರ ಜೈನ್ ದೀಪವನ್ನು ಬೆಳಗಿಸಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ ಶಿಕ್ಷಣ ಹೊಟ್ಟೆಗೆ ಅನ್ನವನ್ನು ನೀಡಿದರೆ ಸಂಸ್ಕಾರ ಬದುಕಿಗೆ ಅರ್ಥವನ್ನು ನೀಡುತ್ತದೆ. .ಒಬ್ಬ ವಿದ್ಯಾರ್ಥಿ ಎತ್ತರಕ್ಕೆ ಬೆಳೆಯ ಬೇಕಾದರೆ ಬಣ್ಣ ,ಜಾತಿ ,ಸೌಂದರ್ಯ, ಹಣ ದಿಂದ ಸಾಧ್ಯವಿಲ್ಲ ಸಂಸ್ಕಾರದಿಂದ ಮಾತ್ರ ಸಾಧ್ಯ. ಶಿಕ್ಷಣ ಮತ್ತು ಸಂಸ್ಕಾರ ಎರಡು ರೆಕ್ಕೆ ಇದ್ದಂತೆ. ಇವೆರಡು ಇದ್ದರೆ ಜಗತ್ತಿನ ಯಾವ ದೇಶಕ್ಕೆ ಹೊಗಿ ಬದುಕಲು ಸಾಧ್ಯ . ಆಸಕ್ತಿ ಮತ್ತು ಏಕಾಗ್ರತೆ ಇದ್ದರೆ ಮಾತ್ರ ಜೀವನದಲ್ಲಿ ಯಶಸ್ಸನ್ನು ಪಡೆಯಲು ಸಾಧ್ಯ. ವಿದ್ಯಾರ್ಥಿ ಸಮಯದಲ್ಲಿ ವಿದ್ಯಾರ್ಥಿಗಳು ಯಾವ ದುಷ್ಚಟಗಳಿಗೆ ಬಲಿಯಾಗದೆ ಏಕಾಗ್ರತೆಯೊಂದಿಗೆ ಗುರಿಸಾಧಿಸಬೇಕು ಎಂದರು.

ಅಧ್ಯಕ್ಷತೆಯನ್ನು ವಹಿಸಿದ್ದ ರತ್ನಮಾನಸ ವಿದ್ಯಾರ್ಥಿ ನಿಲಯದ ಪಾಲಕ ಯತೀಶ್ ಕೆ ಬಳಂಜ ಮಾತನಾಡಿ ವಿದ್ಯಾರ್ಥಿಗಳು ತಮ್ಮನ್ನು ತಾವು ತೊಡಗಿಸಿ ಕೊಳ್ಳಬೇಕು. ನಮ್ಮ ತನವನ್ನು ಉಳಿಸಿಕೊಳ್ಳಬೇಕು. ಎಂದು ಶುಭಹಾರೈಸಿದರು.

ಈ ಸಂದರ್ಭದಲ್ಲಿಇತ್ತೀಚೆಗೆ ಡಾಕ್ಟರೇಟ್ ಪದವಿಯನ್ನು ಪಡೆದ ಮಹಾವೀರ ಜೈನ್ ರವರನ್ನು ರತ್ನಮಾನಸ ವಿದ್ಯಾರ್ಥಿ ನಿಲಯದ ವತಿಯಿಂದ ಸನ್ಮಾನಿಸಲಾಯಿತು.

ವಿದ್ಯಾರ್ಥಿಗಳು ತಮ್ಮ ತಂದೆ ತಾಯಿಗಳಿಗೆ ಪಾದ ಪೂಜೆಯನ್ನು ಮಾಡಿ ಆಶೀರ್ವಾದವನ್ನು ಪಡೆದರು. ಪೊಷಕರು ಮತ್ತು ವಿದ್ಯಾರ್ಥಿ ಪರಸ್ಪರ ಎದುರು ಕುಳಿತುಕೊಂಡು ಸಿಹಿಯನ್ನು ತಿನ್ನಿಸಿದರು. ವಿದ್ಯಾರ್ಥಿಗಳಾದ ನಿಶಿತ್ ಮತ್ತು ರಾಕೇಶ್ ಆರ್ ಹಾಗೂ ಪೊಷಕರು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದರು.

ನಿಲಯದ ಅಧ್ಯಾಪಕ ರವಿಚಂದ್ರ ಸ್ವಾಗತಿಸಿ, ವಿದ್ಯಾರ್ಥಿ ಕೌಶಿಕ್ ಮತ್ತು ರಾಕೇಶ್ ಡಿ ಆರ್ ಪ್ರಾರ್ಥಿಸಿ, ಅಧ್ಯಾಪಕರಾದ ದೀಪಕ್ ವಂದಿಸಿದರು. ಉದಯ ರಾಜ್ ಕಾರ್ಯಕ್ರಮ ನಿರೂಪಿಸಿದರು.

Related posts

ಕೊಕ್ಕಡ ಹಳ್ಳಿಗೇರಿ ಕಾಮಧೇನು ಗೋಶಾಲೆಗೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ | ಡಿ. ವೀರೇಂದ್ರ ಹೆಗ್ಗಡೆ ಹಾಗೂ ಇಸ್ಕಾನ್ ನ ಹರೀಶ್ ಭೇಟಿ

Suddi Udaya

ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವನಮಹೋತ್ಸವ ಆಚರಣೆ.

Suddi Udaya

ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ರ‍್ಯಾಂಕ್ ಪಡೆದ ಮಾಧುರ್ಯ ರವರಿಗೆ ಹವ್ಯಕ ಮಂಡಲದ ವತಿಯಿಂದ ಗೌರವ

Suddi Udaya

ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ರವರನ್ನು ಭೇಟಿಯಾಗಿ ವಿವಿಧ ಬೇಡಿಕೆಯನ್ನು ಸಲ್ಲಿಸಿದ ರಕ್ಷಿತ್ ಶಿವರಾಮ್

Suddi Udaya

ಗಂಡಿಬಾಗಿಲು: ಸಿಯೋನ್ ಆಶ್ರಮದಲ್ಲಿ 26ನೇ ವಾರ್ಷಿಕೋತ್ಸವ ಆಚರಣೆ

Suddi Udaya

Carotid body tumor ಎಂಬ ವಿಚಿತ್ರ ಖಾಯಿಲೆಯಿಂದ ಬಳಲುತ್ತಿರುವ ಮರೋಡಿಯ ಯುವಕ: ಶಸ್ತ್ರಚಿಕಿತ್ಸೆಗೆ ಬರೋಬ್ಬರಿ ರೂ. 8 ಲಕ್ಷದ ಅವಶ್ಯಕತೆ, ಬಡಕುಟುಂಬ ಸಹೃದಯ ದಾನಿಗಳ ಸಹಕಾರವನ್ನು ಎದುರು ನೋಡುತ್ತಿದೆ

Suddi Udaya
error: Content is protected !!