July 27, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಿಕ್ಷಣ ಸಂಸ್ಥೆ

ಎಸ್.ಡಿ.ಎಂ ಸ್ವಾಯತ್ತ ಕಾಲೇಜು : ಬಿವೋಕ್ ವಿದ್ಯಾರ್ಥಿಗಳಿಂದ ಶೈಕ್ಷಣಿಕ ಭೇಟಿ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನ ಬಿವೋಕ್ ರಿಟೇಲ್ ಮತ್ತು ಸಪ್ಲೈ ಚೈನ್ ಮ್ಯಾನೇಜ್ಮೆಂಟ್‌ನ ವಿಭಾಗದ ವತಿಯಿಂದ ಸ್ಟಾರ್ಟಪ್ಸ್ ಇಂನ್ ಸೈಟ್ಸ್ ಎಕ್ಸ್ಪ್ಲೋರಿಂಗ್ ಇನ್ನೋವೇಶನ್ ಆಂಡ್ ಇನ್ ಕ್ಯೂಬಿಷನ್ ಕಾರ್ಯಕ್ರಮದಡಿಯಲ್ಲಿ ಮಂಗಳೂರಿನ ಸಹ್ಯಾದ್ರಿ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಅಂಡ್ ಮ್ಯಾನೇಜ್ಮೆಂಟ್‌ಗೆ ಪ್ರಾಯೋಗಿಕ ಅಧ್ಯಯನಕ್ಕಾಗಿ ವಿದ್ಯಾರ್ಥಿಗಳ ತಂಡ ಶೈಕ್ಷಣಿಕ ಭೇಟಿ ನೀಡಿದರು.

ಪ್ರಾಧ್ಯಾಪಕರೊಂದಿಗೆ ತೆರಳಿದ ತಂಡವು ಸಂಸ್ಥೆಯ ಇಂಕ್ಯೂಬೇಶನ್ ಸೆಂಟರ್‌ಗೆ ಭೇಟಿ ನೀಡಿ ಸ್ಟಾರ್ಟ್‌ಅಪ್ ಪರಿಸರ, ನವೀನತಾ ಪ್ರಕ್ರಿಯೆಗಳು ಮತ್ತು ವಿದ್ಯಾರ್ಥಿಗಳ ನೇತೃತ್ವದ ಉದ್ಯಮಶೀಲತಾ ಪ್ರಯತ್ನಗಳ ಬಗ್ಗೆ ಪ್ರಾಯೋಗಿಕ ಅರಿವು ಮತ್ತು ಅನುಭವವನ್ನು ಪಡೆದರು. ಇಂಕ್ಯೂಬೇಶನ್ ಮಾರ್ಗದರ್ಶಕರೊಂದಿಗೆ ಸಂವಾದ ನಡೆಸಿ, ನಡೆಯುತ್ತಿರುವ ಸ್ಟಾರ್ಟ್‌ಅಪ್ ಯೋಜನೆಗಳನ್ನು ಅವಲೋಕಿಸಿದರು.

ಕಾರ್ಯಕ್ರಮವು ವಿದ್ಯಾರ್ಥಿಗಳಿಗೆ ಉದ್ಯಮೋನ್ಮುಖ ಅಧ್ಯಯನದ ಮೌಲ್ಯಯುತ ಅನುಭವವನ್ನು ನೀಡಿದ್ದು, ನವೀನತೆ ಮತ್ತು ಇಂಕ್ಯೂಬೇಶನ್ ಕ್ರಮಗಳ ಬಗ್ಗೆ ಪ್ರಾಯೋಗಿಕ ಅರಿವು ಮತ್ತಷ್ಟು ಬಲಪಡಿಸಿತು ಎಂದು ವಿದ್ಯಾರ್ಥಿಗಳು ಅನಿಸಿಕೆಯನ್ನು ಹಂಚಿಕೊಂಡರು. ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಾಯೋಗಿಕ ಅಧ್ಯಯನ ಭೇಟಿಯನ್ನು ಬಿವೋಕ್ ವಿಭಾಗದ ಸಹಾಯಕ ಪ್ರಾಧ್ಯಾಪಕ ಪ್ರವೀಣ್ ಸಂಯೋಜಿಸಿದರು. ಭೇಟಿ ವೇಳೆ ಕಾಲೇಜಿನ ಇತರೆ ಉಪನ್ಯಾಸಕರು ಭಾಗಿಯಾಗಿದ್ದರು.

Related posts

ಶಾಂತಿವನ ಟ್ರಸ್ಟ್ ಶ್ರೀ ಕ್ಷೇತ್ರ ಧರ್ಮಸ್ಥಳ ವತಿಯಿಂದ ನಡೆಯುವ ತಾಲೂಕು ಮಟ್ಟದ ಜ್ಞಾನ ದರ್ಶಿನಿ ಮತ್ತು ಜ್ಞಾನ ವರ್ಷಿಣಿ ಮೌಲ್ಯ ಶಿಕ್ಷಣ ಪುಸ್ತಕ ಆಧಾರಿತ ಸ್ಪರ್ಧೆ ಉದ್ಘಾಟನೆ

Suddi Udaya

ಬೆಳ್ತಂಗಡಿ ಜೈನಪೇಟೆಯಲ್ಲಿರುವ ರತ್ನತ್ರಯ ತೀರ್ಥಕ್ಷೇತ್ರದಲ್ಲಿ ದಿ| ಉದಯಕುಮಾರ್ ಸ್ಮರಣಾರ್ಥ “ಸೂರ್ಯೋದಯ” ಕೃತಿ ಬಿಡುಗಡೆ

Suddi Udaya

ಎ. 5-6 : ಮದ್ದಡ್ಕದಲ್ಲಿ ಬಿಡ್ಡಿಂಗ್ ಮಾದರಿಯ ಹೊನಲು ಬೆಳಕಿನ ಅಂಡರ್ ಆರ್ಮ್ ಕ್ರಿಕೆಟ್ ಪಂದ್ಯಾಟ: ಎಂಪಿಎಲ್ ಸೀಸನ್ 6

Suddi Udaya

ಆ 21: ಜೆಸಿಐ ಭಾರತದ ರಾಷ್ಟ್ರೀಯ ಅಧ್ಯಕ್ಷ ಸಿ.ಆರ್ ರಿಕೇಶ್ ಶರ್ಮಾ ಬೆಳ್ತಂಗಡಿಗೆ

Suddi Udaya

ಆಮಂತ್ರಣ ದಶಮಾನೋತ್ಸವ ; ಅರುವಶ್ರೀ ಪ್ರಶಸ್ತಿ ಪ್ರಕಟ

Suddi Udaya

ಉಜಿರೆ : ಬೆನಕ ಹೆಲ್ತ್ ಸೆಂಟರ್ ನಲ್ಲಿ ಯಶಸ್ವಿನಿ ಯೋಜನೆಯಲ್ಲಿ ಯಶಸ್ವಿ ಮೊಣಕಾಲಿನ ಬದಲಿ ಶಸ್ತ್ರ ಚಿಕಿತ್ಸೆ

Suddi Udaya
error: Content is protected !!