July 27, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಸಂಘ-ಸಂಸ್ಥೆಗಳು

ಕೆನರಾ ಬ್ಯಾಂಕಿನಿಂದ ದ.ಕ ಹಾಲು ಒಕ್ಕೂಟಕ್ಕೆ ದ್ರುವಸಾರಜನಕ ಜಾಡಿ ಕೊಡುಗೆ

ಬೆಳ್ತಂಗಡಿ: ರಾಸುಗಳಲ್ಲಿ ಗರ್ಭಧಾರಣೆ ಫಲಿತಾಂಶವನ್ನು ಹೆಚ್ಚಿಸಲು ಸಹಾಯಕವಾಗುವ ನಿಟ್ಟಿನಲ್ಲಿ ಕೆನರಾ ಬ್ಯಾಂಕ್, ಪ್ರಾದೇಶಿಕ ಕಚೇರಿಯಿಂದ ದ.ಕ ಹಾಲು ಒಕ್ಕೂಟದ ಕೃತಕ ಗರ್ಭಧಾರಣಾ ಕೇಂದ್ರಗಳಿಗೆ ದ್ರವಸಾರಜನಕ ಜಾಡಿಗಳನ್ನು ಬ್ಯಾಂಕಿನ ಕಾರ್ಪೊರೇಟ್ ಸಾಮಾಜಿಕ ಜವಾಬ್ದಾರಿ ನಿಧಿಯಿಂದ ಮಾ.13ರಂದು ಹಸ್ತಾಂತರಿಸಲಾಯಿತು.

ದ.ಕ ಹಾಲು ಒಕ್ಕೂಟದ ಅಧ್ಯಕ್ಷ ರವಿರಾಜ ಹೆಗ್ಡೆ ಮಾತನಾಡಿ ಕೆನರಾ ಬ್ಯಾಂಕಿನ ಈ ಕೊಡುಗೆಯು ಹೈನುಗಾರ ರೈತರಿಗೆ ಪ್ರಯೋಜನಕಾರಿಯಾಗಿದೆ. ಕೆನರಾ ಬ್ಯಾಂಕಿನ ಉದಾರ ಕೊಡುಗೆಗೆ ಬ್ಯಾಂಕಿಗೆ ಕೃತಜ್ಞತೆಯನ್ನು ಸಲ್ಲಿಸಿದರು.

ಕೆನರಾ ಬ್ಯಾಂಕಿನ ಪ್ರಾದೇಶಿಕ ಮುಖ್ಯಸ್ಥೆ ಲತಾ ಪಿ ಕುರುಪ್ ಮಾತನಾಡಿ ಬ್ಯಾಂಕ್ ತನ್ನ ಆದಾಯದಲ್ಲಿ ಒಂದು ಭಾಗವನ್ನು ಸಮಾಜಕ್ಕೆ ಹಂಚಲು ಹರ್ಷಿಸುತ್ತದೆ ಹಾಗೂ ಗ್ರಾಮೀಣ ಭಾಗದ ರೈತರಿಗೆ ಈ ಕೊಡುಗೆಯು ಬಹಳಷ್ಟು ಉಪಯುಕ್ತವಾಗುವುದು ತಮಗೆ ತೃಪ್ತಿಯನ್ನು ನೀಡಿದೆ ಎಂದರು.

ಒಕ್ಕೂಟದ ಉಪಾಧ್ಯಕ್ಷ ಉದಯ ಕೋಟ್ಯಾನ್ , ನಿರ್ದೇಶಕರುಗಳು, ವ್ಯವಸ್ಥಾಪಕ ನಿರ್ದೇಶಕ ವಿವೇಕ್ ಡಿ. ಮತ್ತು ವ್ಯವಸ್ಥಾಪಕ ಡಾ| ರವಿರಾಜ್ ಉಡುಪ ಉಪಸ್ಥಿತರಿದ್ದರು. ಕೆನರಾ ಬ್ಯಾಂಕಿನ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು. ಕೃತಕ ಗರ್ಭಧಾರಣ ಕಾರ್ಯಕರ್ತರಿಗೆ ಸಾಂಕೇತಿಕವಾಗಿ ದ್ರವಸಾರಜನಕ ಜಾಡಿಗಳನ್ನು ಹಸ್ತಾಂತರಿಸಲಾಯಿತು.

Related posts

ಮಾ 31-ಎ 4: ತುಳುನಾಡಿನ ಸತ್ಯನಾಪುರದ ಸತ್ಯೋದ ಸಿರಿಯ ಮೂಲ ಆಲಡೆ ಕ್ಷೇತ್ರ ಕಾರಣಿಕದ ಮಣ್ಣು ಲೋಕನಾಡು ಶ್ರೀ ಲೋಕನಾಥೇಶ್ವರ ಕ್ಷೇತ್ರದಲ್ಲಿ ವಾರ್ಷಿಕ ಸಿರಿ ಜಾತ್ರೆ

Suddi Udaya

ಬೆಳಾಲು: ಮಾಯ ಮಹಾದೇವ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ರಚನೆ

Suddi Udaya

ಬೆಳ್ತಂಗಡಿಯ 5 ಮಂದಿ ಕೃಷಿಕರಿಗೆ ಅತ್ಯುತ್ತಮ ಸಾವಯವ ಪ್ರೋತ್ಸಾಹ ರೈತ ಪ್ರಶಸ್ತಿ

Suddi Udaya

ಮಡಂತ್ಯಾರು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಗ್ರಾಹಕರ ಸಭೆ

Suddi Udaya

ಪೆರ್ಲ ಬೈಪಾಡಿ ಸ.ಪ್ರೌ. ಶಾಲೆಯಲ್ಲಿ ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya

ಚಾರ್ಮಾಡಿಯಲ್ಲಿ ಕಾಡಾನೆ ಜೊತೆ ಸೆಲ್ಫಿ ತೆಗೆಯುವ ಸಾಹಸ ಸೂಕ್ತ ಕಾನೂನು ಕ್ರಮಕ್ಕೆ ಈಶ್ವರ್ ಖಂಡ್ರೆ ಸೂಚನೆ

Suddi Udaya
error: Content is protected !!