26.1 C
ಪುತ್ತೂರು, ಬೆಳ್ತಂಗಡಿ
June 12, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಸಂಘ-ಸಂಸ್ಥೆಗಳು

ಕೆನರಾ ಬ್ಯಾಂಕಿನಿಂದ ದ.ಕ ಹಾಲು ಒಕ್ಕೂಟಕ್ಕೆ ದ್ರುವಸಾರಜನಕ ಜಾಡಿ ಕೊಡುಗೆ

ಬೆಳ್ತಂಗಡಿ: ರಾಸುಗಳಲ್ಲಿ ಗರ್ಭಧಾರಣೆ ಫಲಿತಾಂಶವನ್ನು ಹೆಚ್ಚಿಸಲು ಸಹಾಯಕವಾಗುವ ನಿಟ್ಟಿನಲ್ಲಿ ಕೆನರಾ ಬ್ಯಾಂಕ್, ಪ್ರಾದೇಶಿಕ ಕಚೇರಿಯಿಂದ ದ.ಕ ಹಾಲು ಒಕ್ಕೂಟದ ಕೃತಕ ಗರ್ಭಧಾರಣಾ ಕೇಂದ್ರಗಳಿಗೆ ದ್ರವಸಾರಜನಕ ಜಾಡಿಗಳನ್ನು ಬ್ಯಾಂಕಿನ ಕಾರ್ಪೊರೇಟ್ ಸಾಮಾಜಿಕ ಜವಾಬ್ದಾರಿ ನಿಧಿಯಿಂದ ಮಾ.13ರಂದು ಹಸ್ತಾಂತರಿಸಲಾಯಿತು.

ದ.ಕ ಹಾಲು ಒಕ್ಕೂಟದ ಅಧ್ಯಕ್ಷ ರವಿರಾಜ ಹೆಗ್ಡೆ ಮಾತನಾಡಿ ಕೆನರಾ ಬ್ಯಾಂಕಿನ ಈ ಕೊಡುಗೆಯು ಹೈನುಗಾರ ರೈತರಿಗೆ ಪ್ರಯೋಜನಕಾರಿಯಾಗಿದೆ. ಕೆನರಾ ಬ್ಯಾಂಕಿನ ಉದಾರ ಕೊಡುಗೆಗೆ ಬ್ಯಾಂಕಿಗೆ ಕೃತಜ್ಞತೆಯನ್ನು ಸಲ್ಲಿಸಿದರು.

ಕೆನರಾ ಬ್ಯಾಂಕಿನ ಪ್ರಾದೇಶಿಕ ಮುಖ್ಯಸ್ಥೆ ಲತಾ ಪಿ ಕುರುಪ್ ಮಾತನಾಡಿ ಬ್ಯಾಂಕ್ ತನ್ನ ಆದಾಯದಲ್ಲಿ ಒಂದು ಭಾಗವನ್ನು ಸಮಾಜಕ್ಕೆ ಹಂಚಲು ಹರ್ಷಿಸುತ್ತದೆ ಹಾಗೂ ಗ್ರಾಮೀಣ ಭಾಗದ ರೈತರಿಗೆ ಈ ಕೊಡುಗೆಯು ಬಹಳಷ್ಟು ಉಪಯುಕ್ತವಾಗುವುದು ತಮಗೆ ತೃಪ್ತಿಯನ್ನು ನೀಡಿದೆ ಎಂದರು.

ಒಕ್ಕೂಟದ ಉಪಾಧ್ಯಕ್ಷ ಉದಯ ಕೋಟ್ಯಾನ್ , ನಿರ್ದೇಶಕರುಗಳು, ವ್ಯವಸ್ಥಾಪಕ ನಿರ್ದೇಶಕ ವಿವೇಕ್ ಡಿ. ಮತ್ತು ವ್ಯವಸ್ಥಾಪಕ ಡಾ| ರವಿರಾಜ್ ಉಡುಪ ಉಪಸ್ಥಿತರಿದ್ದರು. ಕೆನರಾ ಬ್ಯಾಂಕಿನ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು. ಕೃತಕ ಗರ್ಭಧಾರಣ ಕಾರ್ಯಕರ್ತರಿಗೆ ಸಾಂಕೇತಿಕವಾಗಿ ದ್ರವಸಾರಜನಕ ಜಾಡಿಗಳನ್ನು ಹಸ್ತಾಂತರಿಸಲಾಯಿತು.

Related posts

ವಲಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ನಾಲ್ಕೂರು: ಗಾಳಿ ಮಳೆಗೆ ಬಾಕ್ಯರಡ್ಡದಲ್ಲಿ ಹಟ್ಟಿ ಕುಸಿತ

Suddi Udaya

ಉಜಿರೆಯ ಸುಲೋಚನಾ ಕರ್ನಾಟಕ ಬುಕ್ ಆಫ್ ರೆಕಾರ್ಡ್ ಪ್ರತಿಷ್ಠಿತ ಪ್ರಶಸ್ತಿಗೆ ಆಯ್ಕೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣ ಸ್ವಾಮಿ ಭೇಟಿ

Suddi Udaya

ಕಲ್ಲೇರಿಯಲ್ಲಿ ಕೌಶಲ್ಯ ಅಭಿವೃದ್ಧಿ ಉಚಿತ ಸ್ವ ಉದ್ಯೋಗ ತರಬೇತಿಯ ಸಮಾರೋಪ

Suddi Udaya

ರಾಷ್ಟ್ರೀಯ ನ್ಯಾಚುರೋಪಥಿ ಉತ್ಸವದಲ್ಲಿ ಎಸ್.ಡಿ.ಎಂ ನ್ಯಾಚುರೋಪಥಿ ಮತ್ತು ಯೋಗ ವಿಜ್ಞಾನ ಕಾಲೇಜಿಗೆ ಸಮಗ್ರ ಪ್ರಶಸ್ತಿ

Suddi Udaya
error: Content is protected !!