29 C
ಪುತ್ತೂರು, ಬೆಳ್ತಂಗಡಿ
June 12, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ವೇಣೂರು: ಎಕ್ಸೆಲ್ ನ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಸುಮಂತ್ ಕುಮಾರ್ ಜೈನ್ ರಿಂದ ಮಾರ್ಗದರ್ಶನ

ವೇಣೂರು : ಇಲ್ಲಿನ ಎಕ್ಸೆಲ್ ಟೆಕ್ನೋ ಸ್ಕೂಲ್ ಇದರ 2025 -26 ನೇ ಸಾಲಿನ 10ನೇ ತರಗತಿಯ ವಿದ್ಯಾರ್ಥಿಗಳಿಗೆ ಸಂಸ್ಥೆಯ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಬಿ ಇವರು ಮಾ.13ರಂದು ಮಾರ್ಗದರ್ಶನ ಮಾಡಿದರು.

ಶಾಲೆಯ ವಿದ್ಯೋದಯ ಕ್ಯಾಂಪಸ್ ನಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಶಾರದಾ ಮಾತೆಗೆ ಪುಷ್ಪಾರ್ಚನೆ ಮಾಡಿ, ವಿದ್ಯಾರ್ಥಿಗಳಿಗೆ ಹಾಲ್ ಟಿಕೆಟ್ ವಿತರಿಸಿ ಮಾತನಾಡಿದ ಅವರು, 10ನೇ ತರಗತಿಯ ಪರೀಕ್ಷೆ ಎಂಬುದು ವಿದ್ಯಾರ್ಥಿ ಜೀವನದ ಸತ್ವ ಪರೀಕ್ಷೆಯ ಕಾಲ. ಮುಂದಿನ ಉನ್ನತ ವ್ಯಾಸಂಗಕ್ಕೆ ಇದೇ ಭದ್ರ ಅಡಿಪಾಯ. ಹಾಗಾಗಿ ಸಮಯವನ್ನು ಸದ್ವಿನಿಯೋಗ ಮಾಡಿಕೊಂಡು ಭವಿಷ್ಯವನ್ನು ರೂಪಿಸಿಕೊಳ್ಳಿ ಎಂದು ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಎಕ್ಸೆಲ್ ಟೆಕ್ನೋ ಸ್ಕೂಲ್ ಗುರುವಾಯನಕೆರೆ ಇದರ ಮುಖ್ಯ ಶಿಕ್ಷಕಿ ಸಹನಾ ಜೈನ್, ಶೈಕ್ಷಣಿಕ ನಿರ್ದೇಶಕಿ ನಿಶಾ ಪೂಜಾರಿ, ದಾಖಲಾತಿ ವಿಭಾಗದ ಮೋಹನ್ ಕಾನರ್ಪ ಮತ್ತು ಹರ್ಷಿತಾ, ಆಡಳಿತಾಧಿಕಾರಿ ಶಾಂತಿರಾಜ್ ಜೈನ್, ವೇಣೂರು ಎಕ್ಸೆಲ್ ಟೆಕ್ನೋ ಸ್ಕೂಲ್ ಇದರ ಮುಖ್ಯ ಶಿಕ್ಷಕಿ ಸುಜಾತ ಬಿ ಮತ್ತು ಎಲ್ಲಾ ಶಿಕ್ಷಕ ವೃಂದ ಉಪಸ್ಥಿತರಿದ್ದರು.

ವಿಜ್ಞಾನ ವಿಭಾಗದ ಶಿಕ್ಷಕಿ ಕಾವ್ಯಶ್ರೀ. ಎನ್ ಕಾರ್ಯಕ್ರಮವನ್ನು ಸಮಗ್ರವಾಗಿ ನಿರ್ವಹಿಸಿ, ದೈಹಿಕ ಶಿಕ್ಷಣ ಶಿಕ್ಷಕ ಪ್ರಸಾದ್ ಸಹಕರಿಸಿದರು.

Related posts

ಜ.27,30: ಕೊಕ್ಕಡ ಮಾಯಿಲಕೋಟೆ ಸೀಮೆ ಕ್ಷೇತ್ರದಲ್ಲಿ ನಾಗಪ್ರತಿಷ್ಠೆ ಮತ್ತು ವಾರ್ಷಿಕ ನೇಮೋತ್ಸವ

Suddi Udaya

ಕಾರು-ಬೈಕ್ ಡಿಕ್ಕಿ: ಬೈಕ್‌ ಸವಾರನಿಗೆ ಗಂಭೀರ ಗಾಯ

Suddi Udaya

ಅಧಿಕಾರಿಗಳಿಂದ ನಮಗೆ ಮಾನಸಿಕ ಹಿಂಸೆ : ಗಿರಿಯಪ್ಪ ಗೌಡ ನಾಗನಡ್ಕ ಆರೋಪ

Suddi Udaya

ಬಂದಾರು : ಪೆರ್ಲ-ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ ಶ್ರೀ ವರಮಹಾಲಕ್ಷ್ಮೀ ಪೂಜೆ

Suddi Udaya

ಗುರುವಾಯನಕೆರೆ ಮಯೂರ ಆರ್ಕೇಡ್‌ನಲ್ಲಿ ಬಾಲಕೃಷ್ಣ ಶೆಟ್ಟಿ ಮಾಲಕತ್ವದ “ನೇಸರ” ಸ್ಟುಡಿಯೋ & ವೀಡಿಯೋ ಶುಭಾರಂಭ

Suddi Udaya

ಗಾಯಕ ಶಶಿಧರ್ ಕೋಟೆಯವರಿಂದ ಜಗದೋದ್ಧಾರ ಶ್ರೀ ಜನಾರ್ದನ ಆಲ್ಬಮ್ ಸಾಂಗ್ ಬಿಡುಗಡೆ

Suddi Udaya
error: Content is protected !!