25.4 C
ಪುತ್ತೂರು, ಬೆಳ್ತಂಗಡಿ
September 11, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ವೇಣೂರು: ಎಕ್ಸೆಲ್ ನ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಸುಮಂತ್ ಕುಮಾರ್ ಜೈನ್ ರಿಂದ ಮಾರ್ಗದರ್ಶನ

ವೇಣೂರು : ಇಲ್ಲಿನ ಎಕ್ಸೆಲ್ ಟೆಕ್ನೋ ಸ್ಕೂಲ್ ಇದರ 2025 -26 ನೇ ಸಾಲಿನ 10ನೇ ತರಗತಿಯ ವಿದ್ಯಾರ್ಥಿಗಳಿಗೆ ಸಂಸ್ಥೆಯ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಬಿ ಇವರು ಮಾ.13ರಂದು ಮಾರ್ಗದರ್ಶನ ಮಾಡಿದರು.

ಶಾಲೆಯ ವಿದ್ಯೋದಯ ಕ್ಯಾಂಪಸ್ ನಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಶಾರದಾ ಮಾತೆಗೆ ಪುಷ್ಪಾರ್ಚನೆ ಮಾಡಿ, ವಿದ್ಯಾರ್ಥಿಗಳಿಗೆ ಹಾಲ್ ಟಿಕೆಟ್ ವಿತರಿಸಿ ಮಾತನಾಡಿದ ಅವರು, 10ನೇ ತರಗತಿಯ ಪರೀಕ್ಷೆ ಎಂಬುದು ವಿದ್ಯಾರ್ಥಿ ಜೀವನದ ಸತ್ವ ಪರೀಕ್ಷೆಯ ಕಾಲ. ಮುಂದಿನ ಉನ್ನತ ವ್ಯಾಸಂಗಕ್ಕೆ ಇದೇ ಭದ್ರ ಅಡಿಪಾಯ. ಹಾಗಾಗಿ ಸಮಯವನ್ನು ಸದ್ವಿನಿಯೋಗ ಮಾಡಿಕೊಂಡು ಭವಿಷ್ಯವನ್ನು ರೂಪಿಸಿಕೊಳ್ಳಿ ಎಂದು ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಎಕ್ಸೆಲ್ ಟೆಕ್ನೋ ಸ್ಕೂಲ್ ಗುರುವಾಯನಕೆರೆ ಇದರ ಮುಖ್ಯ ಶಿಕ್ಷಕಿ ಸಹನಾ ಜೈನ್, ಶೈಕ್ಷಣಿಕ ನಿರ್ದೇಶಕಿ ನಿಶಾ ಪೂಜಾರಿ, ದಾಖಲಾತಿ ವಿಭಾಗದ ಮೋಹನ್ ಕಾನರ್ಪ ಮತ್ತು ಹರ್ಷಿತಾ, ಆಡಳಿತಾಧಿಕಾರಿ ಶಾಂತಿರಾಜ್ ಜೈನ್, ವೇಣೂರು ಎಕ್ಸೆಲ್ ಟೆಕ್ನೋ ಸ್ಕೂಲ್ ಇದರ ಮುಖ್ಯ ಶಿಕ್ಷಕಿ ಸುಜಾತ ಬಿ ಮತ್ತು ಎಲ್ಲಾ ಶಿಕ್ಷಕ ವೃಂದ ಉಪಸ್ಥಿತರಿದ್ದರು.

ವಿಜ್ಞಾನ ವಿಭಾಗದ ಶಿಕ್ಷಕಿ ಕಾವ್ಯಶ್ರೀ. ಎನ್ ಕಾರ್ಯಕ್ರಮವನ್ನು ಸಮಗ್ರವಾಗಿ ನಿರ್ವಹಿಸಿ, ದೈಹಿಕ ಶಿಕ್ಷಣ ಶಿಕ್ಷಕ ಪ್ರಸಾದ್ ಸಹಕರಿಸಿದರು.

Related posts

ಹೊಸಂಗಡಿ ಗ್ರಾಮ ಪಂಚಾಯತ್ ನ ನೂತನ ಅಧ್ಯಕ್ಷರಾಗಿ ಜಗದೀಶ್ ಹೆಗ್ಡೆ, ಉಪಾಧ್ಯಕ್ಷರಾಗಿ ಶಾಂತಾ ಕೃಷ್ಣಪ್ಪ ಅವಿರೋಧವಾಗಿ ಆಯ್ಕೆ

Suddi Udaya

ಗುರುವಾಯನಕೆರೆ: ಎನ್.ಇ.ಟಿ ನರ್ಸಿಂಗ್ ಕಾಲೇಜಿನ ಬಿಎಸ್‌ಸಿ ನರ್ಸಿಂಗ್ ವಿದ್ಯಾರ್ಥಿಗಳ ಲ್ಯಾಂಪ್ ಲೈಟಿಂಗ್ ಮತ್ತು ಪ್ರಮಾಣ ವಚನ ಸ್ವೀಕಾರ ಸಮಾರಂಭ

Suddi Udaya

ಜ.23-ಫೆ.1: ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಜಾತ್ರಾ ಮಹೋತ್ಸವ: ಶ್ರೀಕೃಷ್ಣ ಕಥಾಮೃತ, ಸಾಮೂಹಿಕ ವಿಷ್ಣು ಸಹಸ್ರನಾಮ ಪಠಣ, ಕಮ್ಮಟ ಭಜನೋತ್ಸವ, ಆಳ್ವಾಸ್ ಸಾಂಸ್ಕೃತಿಕ ವೈಭವ

Suddi Udaya

ಉಜಿರೆ: ಎಸ್. ಡಿ. ಎಂ. ವಸತಿ ಪದವಿ ಪೂರ್ವ ಕಾಲೇಜು ‘ವಿವಿಧ ಸಂಘಗಳ ಉದ್ಘಾಟನೆ’

Suddi Udaya

ಬೆದ್ರಬೆಟ್ಟು: ಜಲ್ಸತುಲ್ ಜಮೀಲ್ ಮಿಲಾದ್ 2024 ಪ್ರತಿಭಾ ಕಾರ್ಯಕ್ರಮ

Suddi Udaya

ಅಳದಂಗಡಿ: ಗುಡ್ ಫ್ಯೂಚರ್ ಶಾಲೆಯಲ್ಲಿ ಪ್ರತಿಭಾ ಪುರಸ್ಕಾರ

Suddi Udaya
error: Content is protected !!