July 27, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಿಕ್ಷಣ ಸಂಸ್ಥೆ

ಎಸ್.ಡಿ.ಎಂ ತಾಂತ್ರಿಕ ಮಹಾವಿದ್ಯಾಲಯ : ರಾಜ್ಯ ಮಟ್ಟದ ಅಧ್ಯಾಪಕರ ತರಬೇತಿ ಕಾರ್ಯಕ್ರಮ

ಉಜಿರೆ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತಾಂತ್ರಿಕ ಮಹಾವಿದ್ಯಾಲಯದ ಇನ್ಫರ್ಮೇಶನ್ ಸೈನ್ಸ್ ಅಂಡ್ ಎಂಜಿನಿಯರಿಂಗ್ (ISE) ವಿಭಾಗವು ‘ ಬ್ಲಾಕ್‌ಚೇನ್ ತಂತ್ರಜ್ಞಾನ ಮತ್ತು ಸೈಬರ್ ಭದ್ರತೆಗಳ ಇತ್ತೀಚಿನ ಬೆಳವಣಿಗೆಗಳು’ ವಿಷಯದ ಮೇಲೆ 5 ದಿನಗಳ ರಾಜ್ಯ ಮಟ್ಟದ ಅಧ್ಯಾಪಕರ ತರಬೇತಿ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸಿತು.

ತರಬೇತಿಯ ಉದ್ಘಾಟನಾ ಕಾರ್ಯಕ್ರಮವನ್ನು ವಿದ್ಯಾಲಯದ ಪ್ರಾಂಶುಪಾಲರಾದ ಡಾ. ಅಶೋಕ್ ಕುಮಾರ್ ಟಿ., ಅತಿಥಿಗಳಾದ ಧಾರವಾಡದ ಎಸ್.ಡಿ.ಎಂ ಕಾಲೇಜ್ ಆಫ್ ಇಂಜಿನಿಯರಿಂಗ್ ಟೆಕ್ನಾಲಜಿ CSE ವಿಭಾಗದ ಸಹ ಪ್ರಾಧ್ಯಾಪಕ ಡಾ. ರಾಜಶೇಖರಪ್ಪ ಮತ್ತು ಪ್ರೊ. ಆನಂದ ಪಶುಪತಿಮಠ ಸಮ್ಮುಖದಲ್ಲಿ ದೀಪ ಪ್ರಜ್ವಲಿಸುವ ಮೂಲಕ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಕಾಲೇಜಿನ ಇನ್ಫರ್ಮೇಶನ್ ಸೈನ್ಸ್ ಅಂಡ್ ಎಂಜಿನಿಯರಿಂಗ್ (ISE) ವಿಭಾಗದ ಮುಖ್ಯಸ್ಥ ಡಾ. ಜಿ.ಪಿ. ಹೆಗಡೆ ಉಪಸ್ಥಿತರಿದ್ದರು.

ಈ ವಿಶೇಷ ತರಬೇತಿ ಕಾರ್ಯಕ್ರಮದಲ್ಲಿ ಕಾಲೇಜಿನ 50 ಕ್ಕೂ ಅಧಿಕ ಜನ ಉಪನ್ಯಾಸಕರು ಸೇರಿದಂತೆ ವಿವಿಧ ಕಾಲೇಜಿನ ಸಹ ಪ್ರಾಧ್ಯಾಪಕರು ಭಾಗಿಯಾಗಿದ್ದರು. ಕಾರ್ಯಕ್ರಮದಲ್ಲಿ ಬ್ಲಾಕ್‌ಚೇನ್ ಹಾಗೂ ಸೈಬರ್ ಭದ್ರತೆಯ ಇತ್ತೀಚಿನ ಬೆಳವಣಿಗೆಗಳ ಬಗ್ಗೆ ಪ್ರಮುಖ ವಿಚಾರಗಳ ಅರಿವು ನೀಡಲಾಯಿತು. ಇದೇ ಸಂದರ್ಭದಲ್ಲಿ ವಿವಿಧ ಚಟುವಟಿಕೆಗಳ ಮೂಲಕ ತಂತ್ರಜ್ಞಾನದ ಅಗತ್ಯ ಕೌಶಲ್ಯಗಳನ್ನು ತಿಳಿಸಿಕೊಡಲಾಯಿತು.

Related posts

ಸುಲ್ಕೇರಿಯಲ್ಲಿ ಭಗವಾನ್ 1008 ಶ್ರೀ ನೇಮಿನಾಥ ಸ್ವಾಮಿ ಬಸದಿ ಧಾಮ ಸಂಪ್ರೋಕ್ಷಣ ಮಹೋತ್ಸವ

Suddi Udaya

ಪಡಂಗಡಿ ಓಡೀಲು ಶ್ರೀ ಮಹಾಲಿಂಗೇಶ್ವರ ಯಕ್ಷಗಾನ ಚಿಕ್ಕಮೇಳ ತಿರುಗಾಟ ಆರಂಭ

Suddi Udaya

ಅನಂತ ಫಡಕೆ ಮೆಮೋರಿಯಲ್ ಟ್ರಸ್ಟ್ ವತಿಯಿಂದ ಮುಂಡಾಜೆ ಉ.ಸ.ಹಿ.ಪ್ರಾ. ಶಾಲೆಗೆ ಶುದ್ಧ ಕುಡಿಯುವ ನೀರಿನ ಘಟಕ ಹಸ್ತಾಂತರ

Suddi Udaya

ಎಸ್ ಡಿ ಎಮ್ ಬೆಳ್ತಂಗಡಿ ಶಾಲೆಗೆ ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಸಂಘಟನಾ ಆಯುಕ್ತರ ಭೇಟಿ

Suddi Udaya

ಐಡಿಎಫ್ ಡಾಡ್ಜ್ ಬಾಲ್ ಫೇಡರೇಷನ್ ಕಪ್ 2024 ಪಂದ್ಯಾಟದಲ್ಲಿ ಅಭಿಶೃತ್ ಇಳಂತಿಲ ಇವರ ನಾಯಕತ್ವದ ಕರ್ನಾಟಕ ತಂಡಕ್ಕೆ ತೃತೀಯ ಪ್ರಶಸ್ತಿ

Suddi Udaya

ಬೆಳ್ತಂಗಡಿ ಖಾಸಗಿ ಬಸ್ ನಿಲ್ದಾಣದ ಸಮೀಪ ಮರಣಬಾವಿಯನ್ನು ನಾಚಿಸುವಂತೆ ಗುಂಡಿಗಳ ನಿರ್ಮಾಣ

Suddi Udaya
error: Content is protected !!