26.1 C
ಪುತ್ತೂರು, ಬೆಳ್ತಂಗಡಿ
September 11, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಿಕ್ಷಣ ಸಂಸ್ಥೆ

ಎಸ್.ಡಿ.ಎಂ ತಾಂತ್ರಿಕ ಮಹಾವಿದ್ಯಾಲಯ : ರಾಜ್ಯ ಮಟ್ಟದ ಅಧ್ಯಾಪಕರ ತರಬೇತಿ ಕಾರ್ಯಕ್ರಮ

ಉಜಿರೆ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತಾಂತ್ರಿಕ ಮಹಾವಿದ್ಯಾಲಯದ ಇನ್ಫರ್ಮೇಶನ್ ಸೈನ್ಸ್ ಅಂಡ್ ಎಂಜಿನಿಯರಿಂಗ್ (ISE) ವಿಭಾಗವು ‘ ಬ್ಲಾಕ್‌ಚೇನ್ ತಂತ್ರಜ್ಞಾನ ಮತ್ತು ಸೈಬರ್ ಭದ್ರತೆಗಳ ಇತ್ತೀಚಿನ ಬೆಳವಣಿಗೆಗಳು’ ವಿಷಯದ ಮೇಲೆ 5 ದಿನಗಳ ರಾಜ್ಯ ಮಟ್ಟದ ಅಧ್ಯಾಪಕರ ತರಬೇತಿ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸಿತು.

ತರಬೇತಿಯ ಉದ್ಘಾಟನಾ ಕಾರ್ಯಕ್ರಮವನ್ನು ವಿದ್ಯಾಲಯದ ಪ್ರಾಂಶುಪಾಲರಾದ ಡಾ. ಅಶೋಕ್ ಕುಮಾರ್ ಟಿ., ಅತಿಥಿಗಳಾದ ಧಾರವಾಡದ ಎಸ್.ಡಿ.ಎಂ ಕಾಲೇಜ್ ಆಫ್ ಇಂಜಿನಿಯರಿಂಗ್ ಟೆಕ್ನಾಲಜಿ CSE ವಿಭಾಗದ ಸಹ ಪ್ರಾಧ್ಯಾಪಕ ಡಾ. ರಾಜಶೇಖರಪ್ಪ ಮತ್ತು ಪ್ರೊ. ಆನಂದ ಪಶುಪತಿಮಠ ಸಮ್ಮುಖದಲ್ಲಿ ದೀಪ ಪ್ರಜ್ವಲಿಸುವ ಮೂಲಕ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಕಾಲೇಜಿನ ಇನ್ಫರ್ಮೇಶನ್ ಸೈನ್ಸ್ ಅಂಡ್ ಎಂಜಿನಿಯರಿಂಗ್ (ISE) ವಿಭಾಗದ ಮುಖ್ಯಸ್ಥ ಡಾ. ಜಿ.ಪಿ. ಹೆಗಡೆ ಉಪಸ್ಥಿತರಿದ್ದರು.

ಈ ವಿಶೇಷ ತರಬೇತಿ ಕಾರ್ಯಕ್ರಮದಲ್ಲಿ ಕಾಲೇಜಿನ 50 ಕ್ಕೂ ಅಧಿಕ ಜನ ಉಪನ್ಯಾಸಕರು ಸೇರಿದಂತೆ ವಿವಿಧ ಕಾಲೇಜಿನ ಸಹ ಪ್ರಾಧ್ಯಾಪಕರು ಭಾಗಿಯಾಗಿದ್ದರು. ಕಾರ್ಯಕ್ರಮದಲ್ಲಿ ಬ್ಲಾಕ್‌ಚೇನ್ ಹಾಗೂ ಸೈಬರ್ ಭದ್ರತೆಯ ಇತ್ತೀಚಿನ ಬೆಳವಣಿಗೆಗಳ ಬಗ್ಗೆ ಪ್ರಮುಖ ವಿಚಾರಗಳ ಅರಿವು ನೀಡಲಾಯಿತು. ಇದೇ ಸಂದರ್ಭದಲ್ಲಿ ವಿವಿಧ ಚಟುವಟಿಕೆಗಳ ಮೂಲಕ ತಂತ್ರಜ್ಞಾನದ ಅಗತ್ಯ ಕೌಶಲ್ಯಗಳನ್ನು ತಿಳಿಸಿಕೊಡಲಾಯಿತು.

Related posts

ವೇಣೂರು: ಸಂಜೀವ ಪಿ ಹೆಗ್ಡೆ ನಿಧನ

Suddi Udaya

ಅಳದಂಗಡಿ: ಗುಡ್ ಫ್ಯೂಚರ್ ಶಾಲೆಯಲ್ಲಿ ಪ್ರತಿಭಾ ಪುರಸ್ಕಾರ

Suddi Udaya

ಚಾತುರ್ಮಾಸ್ಯ ವ್ರತಾಚರಣೆ ಕೈಗೊಂಡಿರುವ ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಆಶೀರ್ವಾದ ಪಡೆದ ಮೂರ್ತೆದಾರ ಸಹಕಾರ ಸಂಘದ ಅಧ್ಯಕ್ಷರು, ನಿರ್ದೇಶಕರು

Suddi Udaya

ಅಗ್ರಿಲೀಫ್ ಸಂಸ್ಥೆಯಲ್ಲಿ ಅಪರಾಧ ತಡೆ ಮತ್ತು ಮಾದಕ ದ್ರವ್ಯಗಳ ವ್ಯಸನದ ಕುರಿತು ಮಾಹಿತಿ ಕಾರ್ಯಕ್ರಮ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ.ಪೂ. ಕಾಲೇಜಿನ ವಾರ್ಷಿಕೋತ್ಸವ ‘ಆರೋಹಣಮ್

Suddi Udaya

ನಡ: ಭಾರಿ ಮಳೆಗೆ ಮನೆಯ ಗೋಡೆ ಕುಸಿತ, ಜನಸ್ನೇಹಿ ಸಂಘದ ಸದಸ್ಯರಿಂದ ಶ್ರಮದಾನ

Suddi Udaya
error: Content is protected !!