July 27, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಿಕ್ಷಣ ಸಂಸ್ಥೆ

ಎಸ್.ಡಿ.ಎಂ ಸ್ವಾಯತ್ತ ಕಾಲೇಜು : ಬಿವೋಕ್ ವಿದ್ಯಾರ್ಥಿಗಳಿಂದ ಶೈಕ್ಷಣಿಕ ಭೇಟಿ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನ ಬಿವೋಕ್ ರಿಟೇಲ್ ಮತ್ತು ಸಪ್ಲೈ ಚೈನ್ ಮ್ಯಾನೇಜ್ಮೆಂಟ್‌ನ ವಿಭಾಗದ ವತಿಯಿಂದ ಸ್ಟಾರ್ಟಪ್ಸ್ ಇಂನ್ ಸೈಟ್ಸ್ ಎಕ್ಸ್ಪ್ಲೋರಿಂಗ್ ಇನ್ನೋವೇಶನ್ ಆಂಡ್ ಇನ್ ಕ್ಯೂಬಿಷನ್ ಕಾರ್ಯಕ್ರಮದಡಿಯಲ್ಲಿ ಮಂಗಳೂರಿನ ಸಹ್ಯಾದ್ರಿ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಅಂಡ್ ಮ್ಯಾನೇಜ್ಮೆಂಟ್‌ಗೆ ಪ್ರಾಯೋಗಿಕ ಅಧ್ಯಯನಕ್ಕಾಗಿ ವಿದ್ಯಾರ್ಥಿಗಳ ತಂಡ ಶೈಕ್ಷಣಿಕ ಭೇಟಿ ನೀಡಿದರು.

ಪ್ರಾಧ್ಯಾಪಕರೊಂದಿಗೆ ತೆರಳಿದ ತಂಡವು ಸಂಸ್ಥೆಯ ಇಂಕ್ಯೂಬೇಶನ್ ಸೆಂಟರ್‌ಗೆ ಭೇಟಿ ನೀಡಿ ಸ್ಟಾರ್ಟ್‌ಅಪ್ ಪರಿಸರ, ನವೀನತಾ ಪ್ರಕ್ರಿಯೆಗಳು ಮತ್ತು ವಿದ್ಯಾರ್ಥಿಗಳ ನೇತೃತ್ವದ ಉದ್ಯಮಶೀಲತಾ ಪ್ರಯತ್ನಗಳ ಬಗ್ಗೆ ಪ್ರಾಯೋಗಿಕ ಅರಿವು ಮತ್ತು ಅನುಭವವನ್ನು ಪಡೆದರು. ಇಂಕ್ಯೂಬೇಶನ್ ಮಾರ್ಗದರ್ಶಕರೊಂದಿಗೆ ಸಂವಾದ ನಡೆಸಿ, ನಡೆಯುತ್ತಿರುವ ಸ್ಟಾರ್ಟ್‌ಅಪ್ ಯೋಜನೆಗಳನ್ನು ಅವಲೋಕಿಸಿದರು.

ಕಾರ್ಯಕ್ರಮವು ವಿದ್ಯಾರ್ಥಿಗಳಿಗೆ ಉದ್ಯಮೋನ್ಮುಖ ಅಧ್ಯಯನದ ಮೌಲ್ಯಯುತ ಅನುಭವವನ್ನು ನೀಡಿದ್ದು, ನವೀನತೆ ಮತ್ತು ಇಂಕ್ಯೂಬೇಶನ್ ಕ್ರಮಗಳ ಬಗ್ಗೆ ಪ್ರಾಯೋಗಿಕ ಅರಿವು ಮತ್ತಷ್ಟು ಬಲಪಡಿಸಿತು ಎಂದು ವಿದ್ಯಾರ್ಥಿಗಳು ಅನಿಸಿಕೆಯನ್ನು ಹಂಚಿಕೊಂಡರು. ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಾಯೋಗಿಕ ಅಧ್ಯಯನ ಭೇಟಿಯನ್ನು ಬಿವೋಕ್ ವಿಭಾಗದ ಸಹಾಯಕ ಪ್ರಾಧ್ಯಾಪಕ ಪ್ರವೀಣ್ ಸಂಯೋಜಿಸಿದರು. ಭೇಟಿ ವೇಳೆ ಕಾಲೇಜಿನ ಇತರೆ ಉಪನ್ಯಾಸಕರು ಭಾಗಿಯಾಗಿದ್ದರು.

Related posts

ಉಜಿರೆ ಶ್ರೀ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕ ಹಾಗೂ ಸ್ಥಳೀಯರಿಂದ ಮೂರ್ಚೆ ರೋಗದಿಂದ ಬಿದ್ದಿದ್ದ ಅಪರಿಚಿತ ವ್ಯಕ್ತಿಯ ರಕ್ಷಣೆ

Suddi Udaya

ಉಜಿರೆ ಹಳೆಪೇಟೆ ಸ.ಪ್ರೌ. ಶಾಲೆಯ ಹಿಂಬದಿಯಲ್ಲಿ ಮಣ್ಣು ಕುಸಿತ: ಶಾಸಕ ಹರೀಶ್ ಪೂಂಜ ಭೇಟಿ: ತಕ್ಷಣವೇ ಸರಿಪಡಿಸುವಂತೆ ಅಧಿಕಾರಿಗಳಿಗೆ ಸೂಚನೆ

Suddi Udaya

ಹೊಸಂಗಡಿ ಧರಣೇಂದ್ರ ಕುಮಾರ್ ವಿರುದ್ದ ಊರ್ವ ಪೊಲೀಸ್ ಠಾಣೆಗೆ ದೂರು

Suddi Udaya

ನಡ ಸ.ಪ.ಪೂ. ಕಾಲೇಜಿನ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ “ರಾಷ್ಟ್ರಪತಿ ಪದಕ” ಪುರಸ್ಕೃತ ವೀರಯೋಧ ಕ್ಯಾಪ್ಟನ್ ಎಂ.ವಿ. ಪ್ರಾಂಜಲ್ ಗೆ ನುಡಿನಮನ

Suddi Udaya

ಪಡ್ಡ೦ದಡ್ಕ ನುರುಲ್ ಹುದಾ ಮಸೀದಿ ಆದೀನದಲ್ಲಿರುವ ಮುನವಿರುಲ್ ಇಸ್ಲಾಂ ಮದರಸದ ರಕ್ಷಕರ ಸಭೆ

Suddi Udaya

ರೂ. 3ಕೋಟಿ ವೆಚ್ಚದಲ್ಲಿ ನಡ ಗ್ರಾಮದ ಪಡ್ಪು- ಕನ್ಯಾಡಿ- ಭೀಮಂಡೆ ಕಾಂಕ್ರೀಟಿಕರಣಗೊಳಿಸಿದ ರಸ್ತೆಯ ಉದ್ಘಾಟನೆ

Suddi Udaya
error: Content is protected !!