27.3 C
ಪುತ್ತೂರು, ಬೆಳ್ತಂಗಡಿ
April 27, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಿಕ್ಷಣ ಸಂಸ್ಥೆ

ಎಸ್.ಡಿ.ಎಂ ಸ್ವಾಯತ್ತ ಕಾಲೇಜು : ಬಿವೋಕ್ ವಿದ್ಯಾರ್ಥಿಗಳಿಂದ ಶೈಕ್ಷಣಿಕ ಭೇಟಿ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನ ಬಿವೋಕ್ ರಿಟೇಲ್ ಮತ್ತು ಸಪ್ಲೈ ಚೈನ್ ಮ್ಯಾನೇಜ್ಮೆಂಟ್‌ನ ವಿಭಾಗದ ವತಿಯಿಂದ ಸ್ಟಾರ್ಟಪ್ಸ್ ಇಂನ್ ಸೈಟ್ಸ್ ಎಕ್ಸ್ಪ್ಲೋರಿಂಗ್ ಇನ್ನೋವೇಶನ್ ಆಂಡ್ ಇನ್ ಕ್ಯೂಬಿಷನ್ ಕಾರ್ಯಕ್ರಮದಡಿಯಲ್ಲಿ ಮಂಗಳೂರಿನ ಸಹ್ಯಾದ್ರಿ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಅಂಡ್ ಮ್ಯಾನೇಜ್ಮೆಂಟ್‌ಗೆ ಪ್ರಾಯೋಗಿಕ ಅಧ್ಯಯನಕ್ಕಾಗಿ ವಿದ್ಯಾರ್ಥಿಗಳ ತಂಡ ಶೈಕ್ಷಣಿಕ ಭೇಟಿ ನೀಡಿದರು.

ಪ್ರಾಧ್ಯಾಪಕರೊಂದಿಗೆ ತೆರಳಿದ ತಂಡವು ಸಂಸ್ಥೆಯ ಇಂಕ್ಯೂಬೇಶನ್ ಸೆಂಟರ್‌ಗೆ ಭೇಟಿ ನೀಡಿ ಸ್ಟಾರ್ಟ್‌ಅಪ್ ಪರಿಸರ, ನವೀನತಾ ಪ್ರಕ್ರಿಯೆಗಳು ಮತ್ತು ವಿದ್ಯಾರ್ಥಿಗಳ ನೇತೃತ್ವದ ಉದ್ಯಮಶೀಲತಾ ಪ್ರಯತ್ನಗಳ ಬಗ್ಗೆ ಪ್ರಾಯೋಗಿಕ ಅರಿವು ಮತ್ತು ಅನುಭವವನ್ನು ಪಡೆದರು. ಇಂಕ್ಯೂಬೇಶನ್ ಮಾರ್ಗದರ್ಶಕರೊಂದಿಗೆ ಸಂವಾದ ನಡೆಸಿ, ನಡೆಯುತ್ತಿರುವ ಸ್ಟಾರ್ಟ್‌ಅಪ್ ಯೋಜನೆಗಳನ್ನು ಅವಲೋಕಿಸಿದರು.

ಕಾರ್ಯಕ್ರಮವು ವಿದ್ಯಾರ್ಥಿಗಳಿಗೆ ಉದ್ಯಮೋನ್ಮುಖ ಅಧ್ಯಯನದ ಮೌಲ್ಯಯುತ ಅನುಭವವನ್ನು ನೀಡಿದ್ದು, ನವೀನತೆ ಮತ್ತು ಇಂಕ್ಯೂಬೇಶನ್ ಕ್ರಮಗಳ ಬಗ್ಗೆ ಪ್ರಾಯೋಗಿಕ ಅರಿವು ಮತ್ತಷ್ಟು ಬಲಪಡಿಸಿತು ಎಂದು ವಿದ್ಯಾರ್ಥಿಗಳು ಅನಿಸಿಕೆಯನ್ನು ಹಂಚಿಕೊಂಡರು. ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಾಯೋಗಿಕ ಅಧ್ಯಯನ ಭೇಟಿಯನ್ನು ಬಿವೋಕ್ ವಿಭಾಗದ ಸಹಾಯಕ ಪ್ರಾಧ್ಯಾಪಕ ಪ್ರವೀಣ್ ಸಂಯೋಜಿಸಿದರು. ಭೇಟಿ ವೇಳೆ ಕಾಲೇಜಿನ ಇತರೆ ಉಪನ್ಯಾಸಕರು ಭಾಗಿಯಾಗಿದ್ದರು.

Related posts

ಶ್ರೀ ಭಗವದ್ಗೀತಾ ಸ್ಪರ್ಧೆ : ಉಜಿರೆಯ ಎಸ್.ಡಿ.ಎಂ ಪ.ಪೂ ಕಾಲೇಜಿನ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಭೆ

Suddi Udaya

ಕಣಿಯೂರು: ಮಲ್ಲಿಗೆ ಕೃಷಿ ಮಾಹಿತಿ ಹಾಗೂ ಗಿಡ ವಿತರಣಾ ಕಾರ್ಯಕ್ರಮ

Suddi Udaya

ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಣಕು ಸಂಸತ್ತು ಅಧಿವೇಶನ.

Suddi Udaya

ಮಾಲಾಡಿ: ಪುರಿಯ-ಕುರಿಯೋಡಿರಸ್ತೆ ಕಾಮಗಾರಿ ಸ್ಥಳಾಂತರಕ್ಕೆ ವಿರೋಧ: ಶೀಘ್ರ ಕಾಮಗಾರಿಗೆ ನಾಗರಿಕರ ಒತ್ತಾಯ

Suddi Udaya

ಗುರುವಾಯನಕೆರೆ ಸಮೀಪ ಬದ್ಯಾರುವಿನಲ್ಲಿ ಕಾರು- ಬೈಕ್ ನಡುವೆ ಭೀಕರ ರಸ್ತೆ ಅಪಘಾತ, ಬೈಕ್ ಸವಾರ ಗಂಭೀರ

Suddi Udaya
error: Content is protected !!