26.1 C
ಪುತ್ತೂರು, ಬೆಳ್ತಂಗಡಿ
September 11, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಸಂಘ-ಸಂಸ್ಥೆಗಳು

ಕೆನರಾ ಬ್ಯಾಂಕಿನಿಂದ ದ.ಕ ಹಾಲು ಒಕ್ಕೂಟಕ್ಕೆ ದ್ರುವಸಾರಜನಕ ಜಾಡಿ ಕೊಡುಗೆ

ಬೆಳ್ತಂಗಡಿ: ರಾಸುಗಳಲ್ಲಿ ಗರ್ಭಧಾರಣೆ ಫಲಿತಾಂಶವನ್ನು ಹೆಚ್ಚಿಸಲು ಸಹಾಯಕವಾಗುವ ನಿಟ್ಟಿನಲ್ಲಿ ಕೆನರಾ ಬ್ಯಾಂಕ್, ಪ್ರಾದೇಶಿಕ ಕಚೇರಿಯಿಂದ ದ.ಕ ಹಾಲು ಒಕ್ಕೂಟದ ಕೃತಕ ಗರ್ಭಧಾರಣಾ ಕೇಂದ್ರಗಳಿಗೆ ದ್ರವಸಾರಜನಕ ಜಾಡಿಗಳನ್ನು ಬ್ಯಾಂಕಿನ ಕಾರ್ಪೊರೇಟ್ ಸಾಮಾಜಿಕ ಜವಾಬ್ದಾರಿ ನಿಧಿಯಿಂದ ಮಾ.13ರಂದು ಹಸ್ತಾಂತರಿಸಲಾಯಿತು.

ದ.ಕ ಹಾಲು ಒಕ್ಕೂಟದ ಅಧ್ಯಕ್ಷ ರವಿರಾಜ ಹೆಗ್ಡೆ ಮಾತನಾಡಿ ಕೆನರಾ ಬ್ಯಾಂಕಿನ ಈ ಕೊಡುಗೆಯು ಹೈನುಗಾರ ರೈತರಿಗೆ ಪ್ರಯೋಜನಕಾರಿಯಾಗಿದೆ. ಕೆನರಾ ಬ್ಯಾಂಕಿನ ಉದಾರ ಕೊಡುಗೆಗೆ ಬ್ಯಾಂಕಿಗೆ ಕೃತಜ್ಞತೆಯನ್ನು ಸಲ್ಲಿಸಿದರು.

ಕೆನರಾ ಬ್ಯಾಂಕಿನ ಪ್ರಾದೇಶಿಕ ಮುಖ್ಯಸ್ಥೆ ಲತಾ ಪಿ ಕುರುಪ್ ಮಾತನಾಡಿ ಬ್ಯಾಂಕ್ ತನ್ನ ಆದಾಯದಲ್ಲಿ ಒಂದು ಭಾಗವನ್ನು ಸಮಾಜಕ್ಕೆ ಹಂಚಲು ಹರ್ಷಿಸುತ್ತದೆ ಹಾಗೂ ಗ್ರಾಮೀಣ ಭಾಗದ ರೈತರಿಗೆ ಈ ಕೊಡುಗೆಯು ಬಹಳಷ್ಟು ಉಪಯುಕ್ತವಾಗುವುದು ತಮಗೆ ತೃಪ್ತಿಯನ್ನು ನೀಡಿದೆ ಎಂದರು.

ಒಕ್ಕೂಟದ ಉಪಾಧ್ಯಕ್ಷ ಉದಯ ಕೋಟ್ಯಾನ್ , ನಿರ್ದೇಶಕರುಗಳು, ವ್ಯವಸ್ಥಾಪಕ ನಿರ್ದೇಶಕ ವಿವೇಕ್ ಡಿ. ಮತ್ತು ವ್ಯವಸ್ಥಾಪಕ ಡಾ| ರವಿರಾಜ್ ಉಡುಪ ಉಪಸ್ಥಿತರಿದ್ದರು. ಕೆನರಾ ಬ್ಯಾಂಕಿನ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು. ಕೃತಕ ಗರ್ಭಧಾರಣ ಕಾರ್ಯಕರ್ತರಿಗೆ ಸಾಂಕೇತಿಕವಾಗಿ ದ್ರವಸಾರಜನಕ ಜಾಡಿಗಳನ್ನು ಹಸ್ತಾಂತರಿಸಲಾಯಿತು.

Related posts

ಗೋವಿಂದೂರು ಫ್ರೆಂಡ್ಸ್ ಪ್ರಯಾಣಿಕರ ತಂಗುದಾಣ ಉದ್ಘಾಟನೆ

Suddi Udaya

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿ ಗೌರವಾಧ್ಯಕ್ಷ, ಶಾಸಕ ಹರೀಶ್ ಪೂಂಜರವರಿಗೆ ಗೌರವಾರ್ಪಣೆ

Suddi Udaya

ಪ್ರೊ.ಎಸ್ ಪ್ರಭಾಕರ್ ನಿಧನಕ್ಕೆ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಸಂತಾಪ

Suddi Udaya

ಕರ್ನಾಟಕ ರಾಜ್ಯ ಪ್ಯಾರಾಮೆಡಿಕಲ್ ಬೋರ್ಡ್ ರ್‍ಯಾಂಕ್ ಪ್ರಕಟ: ಗೇರುಕಟ್ಟೆ ಮನ್ ಶರ್ ಪ್ಯಾರಾಮೆಡಿಕಲ್ ಕಾಲೇಜಿಗೆ DMIT ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ, ದ್ವಿತೀಯ, ತೃತೀಯ ಹಾಗೂ ಒಟ್ಟು 6 ರ್‍ಯಾಂಕ್

Suddi Udaya

ಪತ್ನಿ-ಮಗಳ ಮೇಲೆ ಪತಿಯಿಂದ ಮಾರಾಣಾಂತಿಕ ಹಲ್ಲೆ: ಇಬ್ಬರು ಆಸ್ಪತ್ರೆಗೆ ದಾಖಲು: ಪೊಲೀಸರ ತನಿಖೆ

Suddi Udaya

ತಾಲೂಕು ಯುವಜನ ಒಕ್ಕೂಟದಿಂದ ತಾಲೂಕು ಮಟ್ಟದ ಕೆಸರು ಗದ್ದೆ ಕ್ರೀಡಾಕೂಟ

Suddi Udaya
error: Content is protected !!