July 27, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಸಂಘ-ಸಂಸ್ಥೆಗಳು

ಕೆನರಾ ಬ್ಯಾಂಕಿನಿಂದ ದ.ಕ ಹಾಲು ಒಕ್ಕೂಟಕ್ಕೆ ದ್ರುವಸಾರಜನಕ ಜಾಡಿ ಕೊಡುಗೆ

ಬೆಳ್ತಂಗಡಿ: ರಾಸುಗಳಲ್ಲಿ ಗರ್ಭಧಾರಣೆ ಫಲಿತಾಂಶವನ್ನು ಹೆಚ್ಚಿಸಲು ಸಹಾಯಕವಾಗುವ ನಿಟ್ಟಿನಲ್ಲಿ ಕೆನರಾ ಬ್ಯಾಂಕ್, ಪ್ರಾದೇಶಿಕ ಕಚೇರಿಯಿಂದ ದ.ಕ ಹಾಲು ಒಕ್ಕೂಟದ ಕೃತಕ ಗರ್ಭಧಾರಣಾ ಕೇಂದ್ರಗಳಿಗೆ ದ್ರವಸಾರಜನಕ ಜಾಡಿಗಳನ್ನು ಬ್ಯಾಂಕಿನ ಕಾರ್ಪೊರೇಟ್ ಸಾಮಾಜಿಕ ಜವಾಬ್ದಾರಿ ನಿಧಿಯಿಂದ ಮಾ.13ರಂದು ಹಸ್ತಾಂತರಿಸಲಾಯಿತು.

ದ.ಕ ಹಾಲು ಒಕ್ಕೂಟದ ಅಧ್ಯಕ್ಷ ರವಿರಾಜ ಹೆಗ್ಡೆ ಮಾತನಾಡಿ ಕೆನರಾ ಬ್ಯಾಂಕಿನ ಈ ಕೊಡುಗೆಯು ಹೈನುಗಾರ ರೈತರಿಗೆ ಪ್ರಯೋಜನಕಾರಿಯಾಗಿದೆ. ಕೆನರಾ ಬ್ಯಾಂಕಿನ ಉದಾರ ಕೊಡುಗೆಗೆ ಬ್ಯಾಂಕಿಗೆ ಕೃತಜ್ಞತೆಯನ್ನು ಸಲ್ಲಿಸಿದರು.

ಕೆನರಾ ಬ್ಯಾಂಕಿನ ಪ್ರಾದೇಶಿಕ ಮುಖ್ಯಸ್ಥೆ ಲತಾ ಪಿ ಕುರುಪ್ ಮಾತನಾಡಿ ಬ್ಯಾಂಕ್ ತನ್ನ ಆದಾಯದಲ್ಲಿ ಒಂದು ಭಾಗವನ್ನು ಸಮಾಜಕ್ಕೆ ಹಂಚಲು ಹರ್ಷಿಸುತ್ತದೆ ಹಾಗೂ ಗ್ರಾಮೀಣ ಭಾಗದ ರೈತರಿಗೆ ಈ ಕೊಡುಗೆಯು ಬಹಳಷ್ಟು ಉಪಯುಕ್ತವಾಗುವುದು ತಮಗೆ ತೃಪ್ತಿಯನ್ನು ನೀಡಿದೆ ಎಂದರು.

ಒಕ್ಕೂಟದ ಉಪಾಧ್ಯಕ್ಷ ಉದಯ ಕೋಟ್ಯಾನ್ , ನಿರ್ದೇಶಕರುಗಳು, ವ್ಯವಸ್ಥಾಪಕ ನಿರ್ದೇಶಕ ವಿವೇಕ್ ಡಿ. ಮತ್ತು ವ್ಯವಸ್ಥಾಪಕ ಡಾ| ರವಿರಾಜ್ ಉಡುಪ ಉಪಸ್ಥಿತರಿದ್ದರು. ಕೆನರಾ ಬ್ಯಾಂಕಿನ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು. ಕೃತಕ ಗರ್ಭಧಾರಣ ಕಾರ್ಯಕರ್ತರಿಗೆ ಸಾಂಕೇತಿಕವಾಗಿ ದ್ರವಸಾರಜನಕ ಜಾಡಿಗಳನ್ನು ಹಸ್ತಾಂತರಿಸಲಾಯಿತು.

Related posts

ಪಡoಗಡಿ-ಹಚ್ಚಾಡಿ -ಬಳಂಜ ಸಂಪರ್ಕ ಕಿರುಸೇತುವೆಯಲ್ಲಿ ತ್ಯಾಜ್ಯ ಶೇಖರಣೆ

Suddi Udaya

ನಾವೂರು ಗೋಪಾಲಕೃಷ್ಣ ದೇವಸ್ಥಾನದಲ್ಲಿ ವರಮಹಾಲಕ್ಷ್ಮೀ ಪೂಜೆ

Suddi Udaya

ಕೊಯ್ಯೂರು ಶಾಲೆಯ ಹಿರಿಯ ಸಹಶಿಕ್ಷಕಿ ನಿವೃತ್ತ ಶ್ರೀಮತಿ ರೆಜಿನಾ ಡಿಸಿಲ್ವ ರವರಿಗೆ ಬೀಳ್ಕೊಡುಗೆ ಸಮಾರಂಭ ಮತ್ತು ಗುರುವಂದನಾ ಕಾರ್ಯಕ್ರಮ

Suddi Udaya

ವೇಣೂರು- ಪೆರ್ಮುಡ ಸೂರ್ಯ ಚಂದ್ರ ಜೋಡುಕರೆ ಕಂಬಳ ಸಮಿತಿಯ ಗೌರವಾಧ್ಯಕ್ಷರಾಗಿ ರಕ್ಷಿತ್ ಶಿವರಾಂ ಆಯ್ಕೆ

Suddi Udaya

ಮಾ.10: ಅಂತರಾಷ್ಟ್ರೀಯ ಬಿಲ್ಲವರ ಮಹಾ ಸಮಾವೇಶ: ಕಳಿಯ ಗ್ರಾಮದ ಬಿಲ್ಲವರ ಪೂರ್ವಭಾವಿ ಸಭೆ

Suddi Udaya

ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ನಿಂದ ದಿ. ಪಿ. ವೆಂಕಟರಮಣ ರವರಿಗೆ ನುಡಿನಮನ

Suddi Udaya
error: Content is protected !!