24.3 C
ಪುತ್ತೂರು, ಬೆಳ್ತಂಗಡಿ
June 16, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜು

ನಾರಾವಿ ಸರಕಾರಿ ಪ್ರೌಢಶಾಲೆಯಲ್ಲಿ ಉಚಿತ ಟ್ಯೂಷನ್ ತರಬೇತಿ ಸಮಾರೋಪ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಗುರುವಾಯನಕೆರೆ, ನಾರಾವಿ ವಲಯದ ನಾರಾವಿ ಸರಕಾರಿ ಪ್ರೌಢ ಶಾಲೆಯಲ್ಲಿ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಉಚಿತ 3 ತಿಂಗಳ ಟ್ಯೂಷನ್ ತರಬೇತಿಯ ಸಮಾರೋಪ ಕಾರ್ಯಕ್ರಮ ನಡೆಯಿತು.

ಶಾಲಾಭಿವೃದ್ಧಿ ಸಮಿತಿ ಗೌರವ ಸದಸ್ಯ ಉದಯ ಹೆಗ್ಡೆ ಕಾರ್ಯಕ್ರಮ ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ತಾಲೂಕು ಕೇಂದ್ರ ಒಕ್ಕೂಟದ ಅಧ್ಯಕ್ಷ ಸದಾನಂದ ಬಂಗೇರ ವಹಿಸಿದ್ದರು.

ಈ ಸಂದರ್ಭದಲ್ಲಿ ನಾರಾವಿ ವಲಯದ ವಲಯಾಧ್ಯಕ್ಷರಾದ ಶೇಖರ್ ಹೆಗ್ಡೆ, ನಾರಾವಿ ಪ್ರೌಢ ಶಾಲೆಯ ಮುಖ್ಯೋಪಾಧ್ಯಾಯಿನಿ ಸುಶೀಲ, ಶಾಲಾ ನಾಯಕ ಪ್ರತೀಕ್ ಉಪಸ್ಥಿತರಿದ್ದರು.

ಟ್ಯೂಷನ್ ಕ್ಲಾಸ್ ತರಬೇತಿಯಲ್ಲಿ ಉತ್ತಮ ಅಂಕ ಗಳಿಸಿದ ಇಬ್ಬರು ವಿದ್ಯಾರ್ಥಿಗಳನ್ನು ಗುರುತಿಸಲಾಯಿತು. ಎಸ್‌ಎಸ್‌ಎಲ್‌ಸಿ ಎಲ್ಲಾ ವಿದ್ಯಾರ್ಥಿಗಳಿಗೆ ಪೆನ್ ನೀಡಿ ಮುಂದಿನ ಪಬ್ಲಿಕ್ ಪರೀಕ್ಷೆಗೆ ಶುಭ ಹಾರೈಕೆ ಮಾಡಲಾಯಿತು.

ಈ ಸಂದರ್ಭದಲ್ಲಿ ಅನಾರೋಗ್ಯ ಪೀಡಿತರಾದ ನಾರಾವಿ ಕಾರ್ಯಕ್ಷೇತ್ರದ ಸದಸ್ಯೆ ಲಲಿತ ಹೆಗ್ಡೆಯವರಿಗೆ ಶ್ರೀ ಕ್ಷೇತ್ರದಿಂದ ಡಾ|| ಹೆಗ್ಗಡೆಯವರು ಮಂಜೂರು ಮಾಡಿದ 25000 ಸಹಾಯಧನ ಕ್ರಿಟಿಕಲ್ ಫಂಡ್ ಮಂಜೂರಾತಿ ಪತ್ರವನ್ನು ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಶಾಲಾ ಸಹ ಶಿಕ್ಷಕರು, ಸೇವಪ್ರತಿನಿಧಿಗಳಾದ ರೇಷ್ಮಾ, ಹರಿಣಾಕ್ಷಿ ಉಪಸ್ಥಿತರಿದ್ದರು.

ಗುರುವಾಯನಕೆರೆ ತಾಲೂಕು ಸಮನ್ವಯಾಧಿಕಾರಿ ಸುಗುಣ ಸ್ವಾಗತಿಸಿದರು. ನಾರಾವಿ ವಲಯದ ಮೇಲ್ವಿಚಾರಕಿ ವಿಶಾಲ ಕೆ ಕಾರ್ಯಕ್ರಮ ನಿರೂಪಿಸಿದರು. ಆಶಾಲತಾ ವಂದಿಸಿದರು

Related posts

ಬರೆಂಗಾಯ ಮಹಮ್ಮಾಯಿ-ದೈವರಾಜ ಗುಳಿಗ ದೈವದ ಪ್ರತಿಷ್ಠೆ ಹಾಗೂ ನೇಮೋತ್ಸವ

Suddi Udaya

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಪ್ರಕರಣ ಹಾಗೂ ಬಂದೂಕು ಪತ್ತೆ ಪ್ರಕರಣ : ಇಂದು ಹೈಕೋರ್ಟ್ ನಲ್ಲಿ ವಿಚಾರಣೆ

Suddi Udaya

ಇಂದಬೆಟ್ಟು: ಕರುವಲ್ಲ ಕಲ್ಲಗುಂಡ ದೇವಸ್ಥಾನ ಹಾಗೂ ಬಂಗಾಡಿ ಹಾಡಿ ದೈವಗಳ ಕಾಣಿಕೆ ಡಬ್ಬಿ ಕಳ್ಳತನ

Suddi Udaya

ನಡ ಸ.ಹಿ.ಪ್ರಾ. ಶಾಲಾ ಶತಮಾನೋತ್ಸವ ಸಮಿತಿಯಿಂದ ಡಾ|| ಹೆಗ್ಗಡೆಯವರ ಭೇಟಿ

Suddi Udaya

ಹೊಸಂಗಡಿ-ಪುದುವೆಟ್ಟು ಗ್ರಾ.ಪಂ.ಗಳಲ್ಲಿ ತೆರವಾದ ತಲಾ ಒಂದು ಸ್ಥಾನಕ್ಕೆ ಉಪಚುನವಾಣೆ: ಹೊಸಂಗಡಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಆನಂದ ಬಂಗೇರ ಜಯ: ಪುದುವೆಟ್ಟಿನಲ್ಲಿ ಬಿಜೆಪಿ ಅಭ್ಯರ್ಥಿ ಜಯಲಕ್ಷ್ಮೀ ಜಯ

Suddi Udaya

ಉಜಿರೆಯಿಂದ ಸೋಮಂತಡ್ಕ ಪ್ರಯಾಣ ಸಂದರ್ಭ ಕಳೆದು ಹೋದ ರೂ.2. 80 ಲಕ್ಷ ಹಣವಿದ್ದ ಬ್ಯಾಗ್: ಕೊರಗಜ್ಜನ ಮೊರೆ ಹೋದ ಬ್ಯಾಗ್ ಕಳೆದು ಕೊಂಡ‌ ಲತೇಶ್ ಉಜಿರೆ

Suddi Udaya
error: Content is protected !!