26.1 C
ಪುತ್ತೂರು, ಬೆಳ್ತಂಗಡಿ
June 12, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ತಣ್ಣೀರುಪಂತ ರುದ್ರಗಿರಿ ಶ್ರೀ ಮೃತ್ಯುಂಜಯ ದೇವಸ್ಥಾನದ ಪ್ರತಿಷ್ಠಾ ದಿನ ಹಾಗೂ ವಾರ್ಷಿಕ ಜಾತ್ರೆ

ಬೆಳ್ತಂಗಡಿ: ತಣ್ಣೀರುಪಂತ ಗ್ರಾಮದ ರುದ್ರಗಿರಿ ಶ್ರೀ ಮೃತ್ಯುಂಜಯ ದೇವಸ್ಥಾನದ ಪ್ರತಿಷ್ಠಾ ದಿನ ಹಾಗೂ ವಾರ್ಷಿಕ ಜಾತ್ರೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ|| ಡಿ. ವೀರೇಂದ್ರ ಹೆಗ್ಗಡೆ ಹಾಗೂ ಕೀರ್ತಿಶೇಷ ಬ್ರಹ್ಮಶ್ರೀ ವೇದಮೂರ್ತಿ ಬಂಗಳಾಯಿ ಕೇಶವ ಜೋಗಿತ್ತಾಯರ ಶುಭಾಶೀರ್ವಾದಗಳೊಂದಿಗೆ ಬ್ರಹ್ಮಶ್ರೀ ನೀಲೇಶ್ವರ ಆಲಂಬಾಡಿ ಪದ್ಮನಾಭ ತಂತ್ರಿಗಳವರ ಮಾರ್ಗದರ್ಶನದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಮಾ.13 ಹಾಗೂ 14ರಂದು ನಡೆಯಲಿದೆ.

ಮಾ.13ರಂದು ಪ್ರಾರ್ಥನೆ, ಗಣಪತಿ ಹೋಮ, ಕಲಶಪೂಜೆ, ಶ್ರೀ ದೇವರುಗಳಿಗೆ ಕಲಶಾಭಿಷೇಕ, ನಾಗದೇವರಿಗೆ ಆಶ್ಲೇಷಾಬಲಿ, ತಂಬಿಲ, ದೈವಗಳಿಗೆ ತಂಬಿಲ ಸೇವೆ, ದುರ್ಗಾಪೂಜೆ, ರಂಗಪೂಜೆ, ದೇವರ ಬಲಿ ಹೊರಟು ಉತ್ಸವ, ವಸಂತಕಟ್ಟೆ ಪೂಜೆ, ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಿತು. ಸಂಜೆ ಮಾನಸ ಡ್ಯಾನ್ಸ್ ಕ್ರೀವ್ ಕಲ್ಲೇರಿ ಹಾಗೂ ಸ್ಥಳೀಯ ಮಕ್ಕಳಿಂದ ನೃತ್ಯ ವೈವಿಧ್ಯ ನಡೆಯಲಿದೆ.

ಮಾ.14ರಂದು ಗಣಪತಿ ಹೋಮ, ದೇವರ ಬಲಿ ಉತ್ಸವ, ದರ್ಶನಬಲಿ ಹಾಗೂ ಬಟ್ಟಲು ಕಾಣಿಕೆ, ಕಲಶಾಭಿಷೇಕ, ಮಹಾಪೂಜೆ, ಪಲ್ಲಪೂಜೆ, ಪ್ರಸಾದ ವಿತರಣೆ ಸಂಜೆ ನೇಮೋತ್ಸವ ನಡೆಯಲಿರುವುದು. ಜಾತ್ರೋತ್ಸವದ ಸಂದರ್ಭದಲ್ಲಿ ಮಧ್ಯಾಹ್ನ ಮತ್ತು ರಾತ್ರಿ ಅನ್ನಸಂತರ್ಪಣೆ ನಡೆಯುವುದಾಗಿ ಪ್ರಕಟಣೆ ತಿಳಿಸಿದೆ.

Related posts

ಗುರುವಾಯನಕೆರೆ ಎಕ್ಸೆಲ್ ಕಾಲೇಜು ಆದರ್ಶ ವಿದ್ಯಾಲಯ: ಡಾ. ಸುಬ್ರಹ್ಮಣ್ಯ ಭಟ್

Suddi Udaya

ಉಜಿರೆ :ಎಸ್.ಡಿ.ಎಂ ವಸತಿ ಪದವಿ ಪೂರ್ವ ಕಾಲೇಜಿನಿಂದ ಕಾರ್ಯಕ್ಷೇತ್ರ ವೀಕ್ಷಣಾ ಚಟುವಟಿಕೆ

Suddi Udaya

ಬೆಳ್ತಂಗಡಿ: ಜ್ಞಾನವಿಕಾಸ ಸಮನ್ವಯಾಧಿಕಾರಿಗಳ ಸಾಮರ್ಥ್ಯ ಅಭಿವೃದ್ಧಿ ತರಬೇತಿ

Suddi Udaya

ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಂಭ್ರಮ: ಉಗ್ರಾಹ ಮುಹೂರ್ತ, ವಿವಿಧ ಗ್ರಾಮಗಳಿಂದ ಆಗಮಿಸಿದ ತರಕಾರಿ, ಬೊಂಡ, ಅಕ್ಕಿ, ಅಡಿಕೆ, ತೆಂಗು ಸಮರ್ಪಣೆ,

Suddi Udaya

ಬೆಳ್ತಂಗಡಿಯಲ್ಲಿ ಅನುಗ್ರಹ ಟ್ರೈನಿಂಗ್ ಕಾಲೇಜು ಕ್ಯಾಂಪಸ್ ಉದ್ಘಾಟನೆ

Suddi Udaya

ಕಕ್ಯಪದವು ಎಲ್.ಸಿ.ಆರ್ ವಿದ್ಯಾಸಂಸ್ಥೆ ಪದವಿ ವಿಭಾಗದ ವಿದ್ಯಾರ್ಥಿ ಸಂಘದ ಚುನಾವಣೆ

Suddi Udaya
error: Content is protected !!