33.1 C
ಪುತ್ತೂರು, ಬೆಳ್ತಂಗಡಿ
March 13, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ: ಸಂತ್ರಸ್ತ ಕುಟುಂಬವನ್ನು ಭೇಟಿಯಾದ ವಿಮ್ ನಿಯೋಗ

ಬೆಳ್ತಂಗಡಿ: ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಏಳು ವರ್ಷದ ಅಪ್ರಾಪ್ತ ಬಾಲಕಿ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣದ ಹಿನ್ನೆಲೆಯಲ್ಲಿ ಸಂತ್ರಸ್ತ ಬಾಲಕಿಯ ಮನೆಗೆ ವಿಮೆನ್ ಇಂಡಿಯಾ ಮೂವ್ಮೆಂಟ್ ಬೆಳ್ತಂಗಡಿ ಕ್ಷೇತ್ರ ಸಮಿತಿ ನಿಯೋಗ ಭೇಟಿ ನೀಡಿ, ಕುಟುಂಬದವರಿಗೆ ಸಾಂತ್ವನ ತಿಳಿಸಿತು.

ಈ ಸಂದರ್ಭದಲ್ಲಿ ಮಾತನಾಡಿದ ವಿಮೆನ್ ಇಂಡಿಯಾ ಮೂವ್ಮೆಂಟ್ ಬೆಳ್ತಂಗಡಿ ಕ್ಷೇತ್ರ ಅಧ್ಯಕ್ಷೆ ಶಮಾ ಆಲಿ ಉಜಿರೆ, ವೇಣೂರಿನಲ್ಲಿ ನಡೆದ ಈ ಅಮಾನವೀಯ ಕೃತ್ಯ ಅತ್ಯಂತ ಖಂಡನೀಯವಾಗಿದ್ದು, ಇಂತಹ ಘಟನೆಗಳು ಮುಂದೆ ಯಾವುದೇ ಮಗುವಿಗೂ ಮರುಕಳಿಸಬಾರದು ಎಂದು ಹೇಳಿದರು.

ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯಾದ ಉತ್ತರ ಪ್ರದೇಶ ಮೂಲದ ನರೇಶ್‌ನ್ನು ತಕ್ಷಣ ಬಂಧಿಸಿದ ವೇಣೂರು ಪೊಲೀಸರ ಕ್ರಮವನ್ನು ಅವರು ಶ್ಲಾಘಿಸಿದ ಅವರು, ಇಂತಹ ಘೋರ ಕೃತ್ಯ ಎಸಗುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಂಡು ತೀವ್ರ ಶಿಕ್ಷೆ ವಿಧಿಸಬೇಕು, “ಇಂತಹ ದುಷ್ಟ ಶಕ್ತಿಗಳು ಮತ್ತೆ ಸಮಾಜದಲ್ಲಿ ತಲೆ ಎತ್ತದಂತೆ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ವಿಮೆನ್ ಇಂಡಿಯಾ ಮೂವ್ಮೆಂಟ್ ಬೆಳ್ತಂಗಡಿ ಕ್ಷೇತ್ರ ಸಮಿತಿ ನಿಯೋಗದಲ್ಲಿ ಕ್ಷೇತ್ರ ಕೋಶಾಧಿಕಾರಿ ಹಸೀನಾ ಬೆಳ್ತಂಗಡಿ, ಅಡ್ವೋಕೇಟ್ ಅಸ್ಮಾ ಬೆಳ್ತಂಗಡಿ, ಸಫ್ರಾ ಬೆಳ್ತಂಗಡಿ ಹಾಗೂ ರಫಾ ಸಂಜಯನಗರ ಉಪಸ್ಥಿತರಿದ್ದರು.

Related posts

ಕುಂಟಿನಿ ಮದ್ರಸದಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಮದ್ದಡ್ಕದಲ್ಲಿ ನ್ಯಾಯಬೆಲೆ ಅಂಗಡಿ ಶುಭಾರಂಭ

Suddi Udaya

ಉಜಿರೆ ಶ್ರೀಧ.ಮಂ. ಪದವಿಪೂರ್ವ ಕಾಲೇಜಿನಲ್ಲಿ ಸಂವಿಧಾನ ದಿನಾಚರಣೆ

Suddi Udaya

ಬೆಳ್ತಂಗಡಿ: ಶ್ರೀ ಗುರುದೇವ ಪ್ರ.ದ. ಕಾಲೇಜಿನಲ್ಲಿ ಬಿ.ಕಾ೦ ವಿದ್ಯಾರ್ಥಿಗಳಿಗೆ ಪ್ರಾಡಕ್ಟ್ ಲಾಂಚ್ ಸ್ಪರ್ಧೆ

Suddi Udaya

ಕಣಿಯೂರು ಮಹಾಶಕ್ತಿ ಕೇಂದ್ರದ ಚುನಾವಣಾ ಪೂರ್ವಭಾವಿ ಸಭೆ

Suddi Udaya

ಚಾರ್ಮಾಡಿ ಘಾಟ್ ನಲ್ಲಿ ತೂಫಾನ್ ಪಲ್ಟಿ

Suddi Udaya
error: Content is protected !!