July 27, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ: ಸಂತ್ರಸ್ತ ಕುಟುಂಬವನ್ನು ಭೇಟಿಯಾದ ವಿಮ್ ನಿಯೋಗ

ಬೆಳ್ತಂಗಡಿ: ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಏಳು ವರ್ಷದ ಅಪ್ರಾಪ್ತ ಬಾಲಕಿ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣದ ಹಿನ್ನೆಲೆಯಲ್ಲಿ ಸಂತ್ರಸ್ತ ಬಾಲಕಿಯ ಮನೆಗೆ ವಿಮೆನ್ ಇಂಡಿಯಾ ಮೂವ್ಮೆಂಟ್ ಬೆಳ್ತಂಗಡಿ ಕ್ಷೇತ್ರ ಸಮಿತಿ ನಿಯೋಗ ಭೇಟಿ ನೀಡಿ, ಕುಟುಂಬದವರಿಗೆ ಸಾಂತ್ವನ ತಿಳಿಸಿತು.

ಈ ಸಂದರ್ಭದಲ್ಲಿ ಮಾತನಾಡಿದ ವಿಮೆನ್ ಇಂಡಿಯಾ ಮೂವ್ಮೆಂಟ್ ಬೆಳ್ತಂಗಡಿ ಕ್ಷೇತ್ರ ಅಧ್ಯಕ್ಷೆ ಶಮಾ ಆಲಿ ಉಜಿರೆ, ವೇಣೂರಿನಲ್ಲಿ ನಡೆದ ಈ ಅಮಾನವೀಯ ಕೃತ್ಯ ಅತ್ಯಂತ ಖಂಡನೀಯವಾಗಿದ್ದು, ಇಂತಹ ಘಟನೆಗಳು ಮುಂದೆ ಯಾವುದೇ ಮಗುವಿಗೂ ಮರುಕಳಿಸಬಾರದು ಎಂದು ಹೇಳಿದರು.

ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯಾದ ಉತ್ತರ ಪ್ರದೇಶ ಮೂಲದ ನರೇಶ್‌ನ್ನು ತಕ್ಷಣ ಬಂಧಿಸಿದ ವೇಣೂರು ಪೊಲೀಸರ ಕ್ರಮವನ್ನು ಅವರು ಶ್ಲಾಘಿಸಿದ ಅವರು, ಇಂತಹ ಘೋರ ಕೃತ್ಯ ಎಸಗುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಂಡು ತೀವ್ರ ಶಿಕ್ಷೆ ವಿಧಿಸಬೇಕು, “ಇಂತಹ ದುಷ್ಟ ಶಕ್ತಿಗಳು ಮತ್ತೆ ಸಮಾಜದಲ್ಲಿ ತಲೆ ಎತ್ತದಂತೆ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ವಿಮೆನ್ ಇಂಡಿಯಾ ಮೂವ್ಮೆಂಟ್ ಬೆಳ್ತಂಗಡಿ ಕ್ಷೇತ್ರ ಸಮಿತಿ ನಿಯೋಗದಲ್ಲಿ ಕ್ಷೇತ್ರ ಕೋಶಾಧಿಕಾರಿ ಹಸೀನಾ ಬೆಳ್ತಂಗಡಿ, ಅಡ್ವೋಕೇಟ್ ಅಸ್ಮಾ ಬೆಳ್ತಂಗಡಿ, ಸಫ್ರಾ ಬೆಳ್ತಂಗಡಿ ಹಾಗೂ ರಫಾ ಸಂಜಯನಗರ ಉಪಸ್ಥಿತರಿದ್ದರು.

Related posts

ಕಳಿಯ ಗ್ರಾ.ಪಂ. ಆಡಳಿತ ಮಂಡಳಿಯಿಂದ ಜಿಲ್ಲಾಧಿಕಾರಿ ಭೇಟಿ, ಪಂಚಾಯತ್ ವ್ಯಾಪ್ತಿಯಲ್ಲಿ ಜಾಗ ಗುರುತಿಸುವಿಕೆಗಾಗಿ ಮನವಿ ಸಲ್ಲಿಕೆ

Suddi Udaya

ಕಳೆಂಜ: ಮಾಪಳದಡ್ಡ ಚಂದ್ರಾವತಿರಿಗೆ ಶ್ರೀ ಕ್ಷೇ. ಧ.ಗ್ರಾ. ಯೋಜನೆಯಿಂದ ಮಾಶಾಸನ ಮಂಜೂರು ಪತ್ರ ವಿತರಣೆ

Suddi Udaya

ಮಾ.18-23: ಮಣ್ಣಿನ ಹರಕೆಯ ಪ್ರಖ್ಯಾತ ಕ್ಷೇತ್ರ ಸುರ್ಯ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ

Suddi Udaya

ನಿವೃತ್ತ ಉಪತಹಶೀಲ್ದಾರ್, ಪ್ರಗತಿಪರ ಕೃಷಿಕ, ನಾಳ ದೇವಸ್ಥಾನದ ಮಾಜಿ ಆಡಳಿತ ಮೊಕ್ತೇಸರ ಗುಂಡೂರಾವ್ ವಿಧಿವಶ

Suddi Udaya

ತಲೆಮರೆಸಿಕೊಂಡಿರುವ ವಿಠಲ್ ಗೌಡರ ಬಂಧನಕ್ಕಾಗಿ ಪೊಲೀಸರಿಂದ ಹುಡುಕಾಟ

Suddi Udaya

ಚಲಿಸುತ್ತಿದ್ದ ಬಸ್ಸಿನಿಂದ ಬಿದ್ದ ವಿದ್ಯಾರ್ಥಿನಿಯರು: ಬಸ್ ಚಾಲಕ ಮತ್ತು ನಿರ್ವಾಹಕನ ವಿರುದ್ಧ ಪ್ರಕರಣ ದಾಖಲು

Suddi Udaya
error: Content is protected !!