26.1 C
ಪುತ್ತೂರು, ಬೆಳ್ತಂಗಡಿ
September 11, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ: ಸಂತ್ರಸ್ತ ಕುಟುಂಬವನ್ನು ಭೇಟಿಯಾದ ವಿಮ್ ನಿಯೋಗ

ಬೆಳ್ತಂಗಡಿ: ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಏಳು ವರ್ಷದ ಅಪ್ರಾಪ್ತ ಬಾಲಕಿ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣದ ಹಿನ್ನೆಲೆಯಲ್ಲಿ ಸಂತ್ರಸ್ತ ಬಾಲಕಿಯ ಮನೆಗೆ ವಿಮೆನ್ ಇಂಡಿಯಾ ಮೂವ್ಮೆಂಟ್ ಬೆಳ್ತಂಗಡಿ ಕ್ಷೇತ್ರ ಸಮಿತಿ ನಿಯೋಗ ಭೇಟಿ ನೀಡಿ, ಕುಟುಂಬದವರಿಗೆ ಸಾಂತ್ವನ ತಿಳಿಸಿತು.

ಈ ಸಂದರ್ಭದಲ್ಲಿ ಮಾತನಾಡಿದ ವಿಮೆನ್ ಇಂಡಿಯಾ ಮೂವ್ಮೆಂಟ್ ಬೆಳ್ತಂಗಡಿ ಕ್ಷೇತ್ರ ಅಧ್ಯಕ್ಷೆ ಶಮಾ ಆಲಿ ಉಜಿರೆ, ವೇಣೂರಿನಲ್ಲಿ ನಡೆದ ಈ ಅಮಾನವೀಯ ಕೃತ್ಯ ಅತ್ಯಂತ ಖಂಡನೀಯವಾಗಿದ್ದು, ಇಂತಹ ಘಟನೆಗಳು ಮುಂದೆ ಯಾವುದೇ ಮಗುವಿಗೂ ಮರುಕಳಿಸಬಾರದು ಎಂದು ಹೇಳಿದರು.

ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯಾದ ಉತ್ತರ ಪ್ರದೇಶ ಮೂಲದ ನರೇಶ್‌ನ್ನು ತಕ್ಷಣ ಬಂಧಿಸಿದ ವೇಣೂರು ಪೊಲೀಸರ ಕ್ರಮವನ್ನು ಅವರು ಶ್ಲಾಘಿಸಿದ ಅವರು, ಇಂತಹ ಘೋರ ಕೃತ್ಯ ಎಸಗುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಂಡು ತೀವ್ರ ಶಿಕ್ಷೆ ವಿಧಿಸಬೇಕು, “ಇಂತಹ ದುಷ್ಟ ಶಕ್ತಿಗಳು ಮತ್ತೆ ಸಮಾಜದಲ್ಲಿ ತಲೆ ಎತ್ತದಂತೆ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ವಿಮೆನ್ ಇಂಡಿಯಾ ಮೂವ್ಮೆಂಟ್ ಬೆಳ್ತಂಗಡಿ ಕ್ಷೇತ್ರ ಸಮಿತಿ ನಿಯೋಗದಲ್ಲಿ ಕ್ಷೇತ್ರ ಕೋಶಾಧಿಕಾರಿ ಹಸೀನಾ ಬೆಳ್ತಂಗಡಿ, ಅಡ್ವೋಕೇಟ್ ಅಸ್ಮಾ ಬೆಳ್ತಂಗಡಿ, ಸಫ್ರಾ ಬೆಳ್ತಂಗಡಿ ಹಾಗೂ ರಫಾ ಸಂಜಯನಗರ ಉಪಸ್ಥಿತರಿದ್ದರು.

Related posts

ಬಳಂಜ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿ ಸದಸ್ಯರಿಂದ ಗಂಡಿಬಾಗಿಲು ಸಿಯೋನ್ ಅಶ್ರಮಕ್ಕೆ ಭೇಟಿ

Suddi Udaya

ವಾಲಿಬಾಲ್ ಪಂದ್ಯಾಟ: ಬೆಂದ್ರಾಳ ಸೈಂಟ್ ಸಾವಿಯೋ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಪ್ರಥಮ

Suddi Udaya

ಇಳಂತಿಲ ಗ್ರಾಮದ ಕಟ್ಟೆಚಾರು ನಿವಾಸಿ ಕುಶಾಲಪ್ಪ ಗೌಡ ನಿಧನ

Suddi Udaya

ಪುದುವೆಟ್ಟು: ಮಡ್ಯದಿಂದ ಹೊಳೆಯವರೆಗಿನ ಪಂಚಾಯತ್ ರಸ್ತೆಯ ಅತಿಕ್ರಮಣ: ಜೆಸಿಬಿ ಮೂಲಕ ಪೊಲೀಸ್ ರಕ್ಷಣೆಯೊಂದಿಗೆ ಗ್ರಾಮ ಪಂಚಾಯತ್ ನಿಂದ ತೆರವು ಕಾರ್ಯ

Suddi Udaya

ಕಳೆಂಜ: ನೆಕ್ಕಾರಾಜೆ ತಿಮ್ಮಪ್ಪ ಗೌಡ ನಾಪತ್ತೆ: ಶವ ಮನೆಯ ಸಮೀಪದ ತೋಡಿನಲ್ಲಿ ಪತ್ತೆ

Suddi Udaya

ಬರೆಂಗಾಯ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ ಹಾಗೂ ಮೊಸರು ಕುಡಿಕೆ ಉತ್ಸವ: ಧಾರ್ಮಿಕ ಸಭೆ, ಸನ್ಮಾನ

Suddi Udaya
error: Content is protected !!