38.3 C
ಪುತ್ತೂರು, ಬೆಳ್ತಂಗಡಿ
March 13, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಿಕ್ಷಣ ಸಂಸ್ಥೆ

ಉಜಿರೆ: ಎಸ್.ಡಿ.ಎಂ ಯಕ್ಷಗಾನ ಕಲಾಕೇಂದ್ರದ ವಿದ್ಯಾರ್ಥಿಗಳಿಂದ ಸೈಂಧವ ವಧೆ ತಾಳಮದ್ದಳೆ

ಉಜಿರೆ: ಎಸ್.ಡಿ.ಎಂ ಕಾಲೇಜಿನಲ್ಲಿ ಎಸ್.ಡಿ.ಎಂ ಯಕ್ಷಗಾನ ಕಲಾಕೇಂದ್ರ ಪ್ರಸ್ತುತ ಪಡಿಸಿದ ತಿಂಗಳ ತಿರುಳು – 25ನೇ ಕಾರ್ಯಕ್ರಮ “ಸೈಂಧವ ವಧೆ” ಕನ್ನಡ ಯಕ್ಷಗಾನ ತಾಳಮದ್ದಳೆ ಮಾ.12ರಂದು ನಡೆಯಿತು.

ಕಾರ್ಯಕ್ರಮದಲ್ಲಿ ಉಜಿರೆ ಎಸ್.ಡಿ.ಎಂ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ವಿಶ್ವನಾಥ ಪಿ., ವಿಶ್ರಾಂತ ಪ್ರಬಂಧಕರು ಮತ್ತು ಯಕ್ಷಗಾನ ಸಂಘಟಕರು, ಚಿಂತಕರಾದ ಶೇಖರ ಟಿ, ಎಸ್.ಡಿ.ಎಂ. ಕಾಲೇಜಿನ ಕುಲ ಸಚಿವರು ಶ್ರೀಧರ ಭಟ್, ಹಿರಿಯ ಲೆಕ್ಕ ಪತ್ರ ನಿರ್ವಾಕ ದಿವಾಕರ ಪಟವರ್ಧನ್, ಸಾಂಸ್ಕೃತಿಕ ಸಮಿತಿ ಮುಖ್ಯಸ್ಥ ಡಾ. ನಾಗಣ್ಣ ಡಿ.ಎ, ಯಕ್ಷಗುರು ಅರುಣ್ ಕುಮಾರ್ ಧರ್ಮಸ್ಥಳ ಉಪಸ್ಥಿತರಿದ್ದರು.

ಭಾಗವತರಾಗಿ ದೇವಿಪ್ರಸಾದ್ ಆಚಾರ್ಯ, ಚೆಂಡೆಯಲ್ಲಿ ಶ್ರೇಯಸ್ ಪಾಳಂದೆ, ಮದ್ದಳೆಯಲ್ಲಿ ಪುರಂದರ ನಾರಿಯ ಭಾಗವಹಿಸಿದರು. ಶ್ರೀಕೃಷ್ಣ ಪಾತ್ರಧಾರಿಯಾಗಿ ತೇಜಸ್, ಅಮೋಘ ಶಂಕರ (ಅರ್ಜುನ), ಅನನ್ಯ ಶೆಟ್ಟಿ (ಸುಭದ್ರೆ), ನಿರಂಜನ್ (ಕೌರವ) ವಿಭಿನ್ (ಸೈಂಧವ), ಸಂಜನ(ಧರ್ಮರಾಯ) ಮಿಥುನ್ ರಾಜ್(ದ್ರೋಣಾಚಾರ್ಯ), ಪ್ರೀತಲ್(ಶ್ರುತಾಯುಧ), ಸಹನಾ(ಭೂರಿಶ್ರವ), ಸುಮಂತ್(ಸಾತ್ಯಕಿ), ರವಿತೇಜು(ದುಶ್ಯಾಸನ), ಮನಸ್ವಿ(ಭೀಮಸೇನ), ಹರ್ಷಿಣಿ ದೂತನಾಗಿ ಪಾತ್ರ ನಿರ್ವಹಿಸಿದ್ದಾರೆ.

ಎಸ್.ಡಿ.ಎಂ ಯಕ್ಷಗಾನ ಕಲಾಕೇಂದ್ರದ 25ನೇ ಕಾರ್ಯಕ್ರಮದ ಸಂಭ್ರಮದ ಸಂದರ್ಭದಲ್ಲಿ ಯಕ್ಷಗಾನ ತಂಡದ ನಾಯಕನಾದ ಅಮೋಘ ಶಂಕರರವರನ್ನು ಸನ್ಮಾನಿಸಲಾಯಿತು.

ಸಿಂಚನ, ಮನಸ್ವಿ, ಯಶ್ಮಿತಾ, ವರ್ಷಿಣಿ, ಅನನ್ಯ ಶೆಟ್ಟಿ ಪ್ರಾರ್ಥಿಸಿದರು. ಸಾಕ್ಷ ನಿರೂಪಿಸಿ, ಸಹನ ಸ್ವಾಗತಿಸಿದರು. ಯಶ್ಮಿತಾ ವಂದಿಸಿದರು.

Related posts

ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿ.ಶಿಕ್ಷಕ ರಕ್ಷಕ ಸಂಘದ ಪೋಷಕರ ಸಭೆ .

Suddi Udaya

ನಿಡ್ಲೆ: ನಿವೃತ್ತ ಶಿಕ್ಷಕ ರಾಮಣ್ಣ ಪೂಜಾರಿ ನಿಧನ

Suddi Udaya

ಕೊಕ್ಕಡ ಹಳ್ಳಿಗೇರಿ ಕಾಮಧೇನು ಗೋಶಾಲೆಗೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ | ಡಿ. ವೀರೇಂದ್ರ ಹೆಗ್ಗಡೆ ಹಾಗೂ ಇಸ್ಕಾನ್ ನ ಹರೀಶ್ ಭೇಟಿ

Suddi Udaya

ಬೆಳ್ತಂಗಡಿ:ಕಾಂಗ್ರೆಸ್ ನಿಂದ ಸಂವಿಧಾನ ,ಪ್ರಜಾಪ್ರಭುತ್ವ ,ಶಿಷ್ಟಾಚಾರ ವಿರೋಧಿ ನಡವಳಿಕೆ. ರಾಜ್ಯದ ಮಂತ್ರಿಗಳ ಸರ್ವಾಧಿಕಾರಿ ಧೋರಣೆ, ಹಿರಿಯಕ್ಕನ ಚಾಳಿ ಮನೆ ಮಂದಿಗೆಂಬಂತೆ ಇದು ತಳಮಟ್ಟಕ್ಕೂ ತಲುಪುತ್ತಿದೆ: ವಿಧಾನಪರಿಷತ್ ಶಾಸಕ ಕೆ. ಪ್ರತಾಪಸಿಂಹ ನಾಯಕ್ ಆರೋಪ

Suddi Udaya

ಹಳೆಕೋಟೆ ಮನೆಯಲ್ಲಿ ನಡೆದ ಬಂಗೇರರ ಅಂತಿಮ ವಿಧಿ-ವಿಧಾನ: ತಾಲೂಕು ಕ್ರೀಡಾಂಗಣದಲ್ಲಿ ಸಾರ್ವಜನಿಕ ದರ್ಶಕ್ಕೆ ಅವಕಾಶ: ವರ್ತಕರಿಂದ ಅಂಗಡಿ-ಮುಂಗಟ್ಟು ಬಂದ್ ಮಾಡಿ ಗೌರವ

Suddi Udaya

ಯುಟ್ಯೂಬರ್ ಸಮೀರ್ ಎಂ.ಡಿಗೆ ಮಂಗಳೂರಿನ ನ್ಯಾಯಾಲಯದಿಂದ ನಿರೀಕ್ಷಣಾ ಜಾಮೀನು

Suddi Udaya
error: Content is protected !!