27.3 C
ಪುತ್ತೂರು, ಬೆಳ್ತಂಗಡಿ
April 27, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಿಕ್ಷಣ ಸಂಸ್ಥೆ

ಉಜಿರೆ: ಎಸ್.ಡಿ.ಎಂ ಯಕ್ಷಗಾನ ಕಲಾಕೇಂದ್ರದ ವಿದ್ಯಾರ್ಥಿಗಳಿಂದ ಸೈಂಧವ ವಧೆ ತಾಳಮದ್ದಳೆ

ಉಜಿರೆ: ಎಸ್.ಡಿ.ಎಂ ಕಾಲೇಜಿನಲ್ಲಿ ಎಸ್.ಡಿ.ಎಂ ಯಕ್ಷಗಾನ ಕಲಾಕೇಂದ್ರ ಪ್ರಸ್ತುತ ಪಡಿಸಿದ ತಿಂಗಳ ತಿರುಳು – 25ನೇ ಕಾರ್ಯಕ್ರಮ “ಸೈಂಧವ ವಧೆ” ಕನ್ನಡ ಯಕ್ಷಗಾನ ತಾಳಮದ್ದಳೆ ಮಾ.12ರಂದು ನಡೆಯಿತು.

ಕಾರ್ಯಕ್ರಮದಲ್ಲಿ ಉಜಿರೆ ಎಸ್.ಡಿ.ಎಂ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ವಿಶ್ವನಾಥ ಪಿ., ವಿಶ್ರಾಂತ ಪ್ರಬಂಧಕರು ಮತ್ತು ಯಕ್ಷಗಾನ ಸಂಘಟಕರು, ಚಿಂತಕರಾದ ಶೇಖರ ಟಿ, ಎಸ್.ಡಿ.ಎಂ. ಕಾಲೇಜಿನ ಕುಲ ಸಚಿವರು ಶ್ರೀಧರ ಭಟ್, ಹಿರಿಯ ಲೆಕ್ಕ ಪತ್ರ ನಿರ್ವಾಕ ದಿವಾಕರ ಪಟವರ್ಧನ್, ಸಾಂಸ್ಕೃತಿಕ ಸಮಿತಿ ಮುಖ್ಯಸ್ಥ ಡಾ. ನಾಗಣ್ಣ ಡಿ.ಎ, ಯಕ್ಷಗುರು ಅರುಣ್ ಕುಮಾರ್ ಧರ್ಮಸ್ಥಳ ಉಪಸ್ಥಿತರಿದ್ದರು.

ಭಾಗವತರಾಗಿ ದೇವಿಪ್ರಸಾದ್ ಆಚಾರ್ಯ, ಚೆಂಡೆಯಲ್ಲಿ ಶ್ರೇಯಸ್ ಪಾಳಂದೆ, ಮದ್ದಳೆಯಲ್ಲಿ ಪುರಂದರ ನಾರಿಯ ಭಾಗವಹಿಸಿದರು. ಶ್ರೀಕೃಷ್ಣ ಪಾತ್ರಧಾರಿಯಾಗಿ ತೇಜಸ್, ಅಮೋಘ ಶಂಕರ (ಅರ್ಜುನ), ಅನನ್ಯ ಶೆಟ್ಟಿ (ಸುಭದ್ರೆ), ನಿರಂಜನ್ (ಕೌರವ) ವಿಭಿನ್ (ಸೈಂಧವ), ಸಂಜನ(ಧರ್ಮರಾಯ) ಮಿಥುನ್ ರಾಜ್(ದ್ರೋಣಾಚಾರ್ಯ), ಪ್ರೀತಲ್(ಶ್ರುತಾಯುಧ), ಸಹನಾ(ಭೂರಿಶ್ರವ), ಸುಮಂತ್(ಸಾತ್ಯಕಿ), ರವಿತೇಜು(ದುಶ್ಯಾಸನ), ಮನಸ್ವಿ(ಭೀಮಸೇನ), ಹರ್ಷಿಣಿ ದೂತನಾಗಿ ಪಾತ್ರ ನಿರ್ವಹಿಸಿದ್ದಾರೆ.

ಎಸ್.ಡಿ.ಎಂ ಯಕ್ಷಗಾನ ಕಲಾಕೇಂದ್ರದ 25ನೇ ಕಾರ್ಯಕ್ರಮದ ಸಂಭ್ರಮದ ಸಂದರ್ಭದಲ್ಲಿ ಯಕ್ಷಗಾನ ತಂಡದ ನಾಯಕನಾದ ಅಮೋಘ ಶಂಕರರವರನ್ನು ಸನ್ಮಾನಿಸಲಾಯಿತು.

ಸಿಂಚನ, ಮನಸ್ವಿ, ಯಶ್ಮಿತಾ, ವರ್ಷಿಣಿ, ಅನನ್ಯ ಶೆಟ್ಟಿ ಪ್ರಾರ್ಥಿಸಿದರು. ಸಾಕ್ಷ ನಿರೂಪಿಸಿ, ಸಹನ ಸ್ವಾಗತಿಸಿದರು. ಯಶ್ಮಿತಾ ವಂದಿಸಿದರು.

Related posts

ಮೂರು ಜನ ವಿಶೇಷ ಚೇತನರನ್ನು ಒಳಗೊಂಡ ಬಡ ಕುಟುಂಬಕ್ಕೆ ಧರ್ಮಸ್ಥಳ ಗ್ರಾಮ ಪಂಚಾಯತ್ ನಿಂದ ನೆರವು

Suddi Udaya

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯಲ್ಲಿ ಮಲೆಕುಡಿಯರಿಗೆ ಅವಕಾಶ ನೀಡದೆ ಇದ್ದಲ್ಲಿ ಕ್ಷೇತ್ರದಲ್ಲಿ ಚಾಕರಿ ಕೆಲಸ ಮತ್ತು ರಥ ಕಟ್ಟುವ ಕೆಲಸವನ್ನು ನಿಲ್ಲಿಸ ಬೇಕಾದೀತು: ಜಿಲ್ಲಾ ಮಲೆಕುಡಿಯ ಸಂಘ

Suddi Udaya

ಉಜಿರೆ: ಎಸ್.ಡಿ.ಎಂ. ಮಹಿಳಾ ಐಟಿಐಯಲ್ಲಿ ಏಡ್ಸ್ ಜಾಗೃತಿ ಕಾರ್ಯಕ್ರಮ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಗೆ ತ್ರೋಬಾಲ್ ಸ್ಪರ್ಧೆಯಲ್ಲಿ ಬಹುಮಾನ

Suddi Udaya

ಪಾರೆಂಕಿ ಮಾರಿಕಾಂಬ ದೇವಿ ಸನ್ನಿಧಿಯಲ್ಲಿ ಜಾತ್ರೋತ್ಸವ ಹಾಗೂ ಪರಿವಾರ ದೈವಗಳಿಗೆ ನೇಮೋತ್ಸವ

Suddi Udaya

ಸಂಜಯ್ ಗ್ಲೋಬಲ್ ಫೌಂಡೇಶನ್ ಬೆಳ್ತಂಗಡಿ ವತಿಯಿಂದ ಬೆಳ್ತಂಗಡಿಯಲ್ಲಿ ಇಫ್ತಾರ್ ಮೀಟ್.

Suddi Udaya
error: Content is protected !!