25.4 C
ಪುತ್ತೂರು, ಬೆಳ್ತಂಗಡಿ
September 11, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಿಕ್ಷಣ ಸಂಸ್ಥೆ

ಎಸ್.ಡಿ.ಎಂ ತಾಂತ್ರಿಕ ಮಹಾವಿದ್ಯಾಲಯ : ರಾಜ್ಯ ಮಟ್ಟದ ಅಧ್ಯಾಪಕರ ತರಬೇತಿ ಕಾರ್ಯಕ್ರಮ

ಉಜಿರೆ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತಾಂತ್ರಿಕ ಮಹಾವಿದ್ಯಾಲಯದ ಇನ್ಫರ್ಮೇಶನ್ ಸೈನ್ಸ್ ಅಂಡ್ ಎಂಜಿನಿಯರಿಂಗ್ (ISE) ವಿಭಾಗವು ‘ ಬ್ಲಾಕ್‌ಚೇನ್ ತಂತ್ರಜ್ಞಾನ ಮತ್ತು ಸೈಬರ್ ಭದ್ರತೆಗಳ ಇತ್ತೀಚಿನ ಬೆಳವಣಿಗೆಗಳು’ ವಿಷಯದ ಮೇಲೆ 5 ದಿನಗಳ ರಾಜ್ಯ ಮಟ್ಟದ ಅಧ್ಯಾಪಕರ ತರಬೇತಿ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸಿತು.

ತರಬೇತಿಯ ಉದ್ಘಾಟನಾ ಕಾರ್ಯಕ್ರಮವನ್ನು ವಿದ್ಯಾಲಯದ ಪ್ರಾಂಶುಪಾಲರಾದ ಡಾ. ಅಶೋಕ್ ಕುಮಾರ್ ಟಿ., ಅತಿಥಿಗಳಾದ ಧಾರವಾಡದ ಎಸ್.ಡಿ.ಎಂ ಕಾಲೇಜ್ ಆಫ್ ಇಂಜಿನಿಯರಿಂಗ್ ಟೆಕ್ನಾಲಜಿ CSE ವಿಭಾಗದ ಸಹ ಪ್ರಾಧ್ಯಾಪಕ ಡಾ. ರಾಜಶೇಖರಪ್ಪ ಮತ್ತು ಪ್ರೊ. ಆನಂದ ಪಶುಪತಿಮಠ ಸಮ್ಮುಖದಲ್ಲಿ ದೀಪ ಪ್ರಜ್ವಲಿಸುವ ಮೂಲಕ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಕಾಲೇಜಿನ ಇನ್ಫರ್ಮೇಶನ್ ಸೈನ್ಸ್ ಅಂಡ್ ಎಂಜಿನಿಯರಿಂಗ್ (ISE) ವಿಭಾಗದ ಮುಖ್ಯಸ್ಥ ಡಾ. ಜಿ.ಪಿ. ಹೆಗಡೆ ಉಪಸ್ಥಿತರಿದ್ದರು.

ಈ ವಿಶೇಷ ತರಬೇತಿ ಕಾರ್ಯಕ್ರಮದಲ್ಲಿ ಕಾಲೇಜಿನ 50 ಕ್ಕೂ ಅಧಿಕ ಜನ ಉಪನ್ಯಾಸಕರು ಸೇರಿದಂತೆ ವಿವಿಧ ಕಾಲೇಜಿನ ಸಹ ಪ್ರಾಧ್ಯಾಪಕರು ಭಾಗಿಯಾಗಿದ್ದರು. ಕಾರ್ಯಕ್ರಮದಲ್ಲಿ ಬ್ಲಾಕ್‌ಚೇನ್ ಹಾಗೂ ಸೈಬರ್ ಭದ್ರತೆಯ ಇತ್ತೀಚಿನ ಬೆಳವಣಿಗೆಗಳ ಬಗ್ಗೆ ಪ್ರಮುಖ ವಿಚಾರಗಳ ಅರಿವು ನೀಡಲಾಯಿತು. ಇದೇ ಸಂದರ್ಭದಲ್ಲಿ ವಿವಿಧ ಚಟುವಟಿಕೆಗಳ ಮೂಲಕ ತಂತ್ರಜ್ಞಾನದ ಅಗತ್ಯ ಕೌಶಲ್ಯಗಳನ್ನು ತಿಳಿಸಿಕೊಡಲಾಯಿತು.

Related posts

ವಲಯ ಮಟ್ಟದ ತ್ರೋಬಾಲ್ ಪಂದ್ಯಾಟ: ಶ್ರೀ ಭಾರತೀ ಆಂ.ಮಾ.ಪ್ರೌ. ಶಾಲೆಯ ಬಾಲಕಿಯರ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ನಾರಾವಿಯಲ್ಲಿ ‘ಸರ್ಕಾರದ ನಡೆ ಕಾರ್ಯಕರ್ತರ ಕಡೆ’ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದ ಪೂರ್ವಭಾವಿ ಸಭೆ

Suddi Udaya

ನಾವೂರು ಹಿ.ಪ್ರಾ. ಶಾಲೆಯಲ್ಲಿ ಶೈಕ್ಷಣಿಕ ಮಾಹಿತಿ ಕಾರ್ಯಾಗಾರ

Suddi Udaya

ಆದಿವಾಸಿಗಳ ಪ್ರಶ್ನೆಗಳಿಗೆ ಸರಕಾರದ ಸ್ಪಂದನೆ: ಬಜೆಟ್ ನ ಕೆಲವು ಅಂಶಗಳಿಗೆ ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ಸ್ವಾಗತ

Suddi Udaya

ಉಜಿರೆಯ ಎಸ್.ಡಿ.ಎಂ ಕಾಲೇಜಿನಲ್ಲಿ ‘ಭಾಸ್ಕರ ಪರ್ವ’: ಮೂರು ದಶಕಗಳ ವೃತ್ತಿ ಬದುಕಿಗೆ ಗೌರವದ ಬೀಳ್ಕೊಡುಗೆ

Suddi Udaya

ಉಜಿರೆ: ಹಳೆಪೇಟೆ ಯು.ಹೆಚ್ ಆಟೋ ಸಂಘದ ಮಹಾಸಭೆ: ಸಮಿತಿ ರಚನೆ

Suddi Udaya
error: Content is protected !!