33.1 C
ಪುತ್ತೂರು, ಬೆಳ್ತಂಗಡಿ
March 13, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಸಂಘ-ಸಂಸ್ಥೆಗಳು

ಕೆನರಾ ಬ್ಯಾಂಕಿನಿಂದ ದ.ಕ ಹಾಲು ಒಕ್ಕೂಟಕ್ಕೆ ದ್ರುವಸಾರಜನಕ ಜಾಡಿ ಕೊಡುಗೆ

ಬೆಳ್ತಂಗಡಿ: ರಾಸುಗಳಲ್ಲಿ ಗರ್ಭಧಾರಣೆ ಫಲಿತಾಂಶವನ್ನು ಹೆಚ್ಚಿಸಲು ಸಹಾಯಕವಾಗುವ ನಿಟ್ಟಿನಲ್ಲಿ ಕೆನರಾ ಬ್ಯಾಂಕ್, ಪ್ರಾದೇಶಿಕ ಕಚೇರಿಯಿಂದ ದ.ಕ ಹಾಲು ಒಕ್ಕೂಟದ ಕೃತಕ ಗರ್ಭಧಾರಣಾ ಕೇಂದ್ರಗಳಿಗೆ ದ್ರವಸಾರಜನಕ ಜಾಡಿಗಳನ್ನು ಬ್ಯಾಂಕಿನ ಕಾರ್ಪೊರೇಟ್ ಸಾಮಾಜಿಕ ಜವಾಬ್ದಾರಿ ನಿಧಿಯಿಂದ ಮಾ.13ರಂದು ಹಸ್ತಾಂತರಿಸಲಾಯಿತು.

ದ.ಕ ಹಾಲು ಒಕ್ಕೂಟದ ಅಧ್ಯಕ್ಷ ರವಿರಾಜ ಹೆಗ್ಡೆ ಮಾತನಾಡಿ ಕೆನರಾ ಬ್ಯಾಂಕಿನ ಈ ಕೊಡುಗೆಯು ಹೈನುಗಾರ ರೈತರಿಗೆ ಪ್ರಯೋಜನಕಾರಿಯಾಗಿದೆ. ಕೆನರಾ ಬ್ಯಾಂಕಿನ ಉದಾರ ಕೊಡುಗೆಗೆ ಬ್ಯಾಂಕಿಗೆ ಕೃತಜ್ಞತೆಯನ್ನು ಸಲ್ಲಿಸಿದರು.

ಕೆನರಾ ಬ್ಯಾಂಕಿನ ಪ್ರಾದೇಶಿಕ ಮುಖ್ಯಸ್ಥೆ ಲತಾ ಪಿ ಕುರುಪ್ ಮಾತನಾಡಿ ಬ್ಯಾಂಕ್ ತನ್ನ ಆದಾಯದಲ್ಲಿ ಒಂದು ಭಾಗವನ್ನು ಸಮಾಜಕ್ಕೆ ಹಂಚಲು ಹರ್ಷಿಸುತ್ತದೆ ಹಾಗೂ ಗ್ರಾಮೀಣ ಭಾಗದ ರೈತರಿಗೆ ಈ ಕೊಡುಗೆಯು ಬಹಳಷ್ಟು ಉಪಯುಕ್ತವಾಗುವುದು ತಮಗೆ ತೃಪ್ತಿಯನ್ನು ನೀಡಿದೆ ಎಂದರು.

ಒಕ್ಕೂಟದ ಉಪಾಧ್ಯಕ್ಷ ಉದಯ ಕೋಟ್ಯಾನ್ , ನಿರ್ದೇಶಕರುಗಳು, ವ್ಯವಸ್ಥಾಪಕ ನಿರ್ದೇಶಕ ವಿವೇಕ್ ಡಿ. ಮತ್ತು ವ್ಯವಸ್ಥಾಪಕ ಡಾ| ರವಿರಾಜ್ ಉಡುಪ ಉಪಸ್ಥಿತರಿದ್ದರು. ಕೆನರಾ ಬ್ಯಾಂಕಿನ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು. ಕೃತಕ ಗರ್ಭಧಾರಣ ಕಾರ್ಯಕರ್ತರಿಗೆ ಸಾಂಕೇತಿಕವಾಗಿ ದ್ರವಸಾರಜನಕ ಜಾಡಿಗಳನ್ನು ಹಸ್ತಾಂತರಿಸಲಾಯಿತು.

Related posts

ಹೊಸಂಗಡಿ: ಬಡಕೋಡಿ ನಿವಾಸಿ ಶ್ರೀಮತಿ ಸುಶೀಲ ನಿಧನ

Suddi Udaya

ಗೇರುಕಟ್ಟೆ ಸರ್ಕಾರಿ ಪ್ರೌಢ ಶಾಲೆಯಲ್ಲಿ ವಿಶೇಷ ಚೇತನರ ಬಗ್ಗೆ ಸಂವಾದ ಕಾರ್ಯಕ್ರಮ

Suddi Udaya

ಲಾಯಿಲ ಗ್ರಾಮ ಪಂಚಾಯತ್ ನಲ್ಲಿ ಮಕ್ಕಳ ಹಕ್ಕುಗಳ ಗ್ರಾಮ ಸಭೆ

Suddi Udaya

ಅಳದಂಗಡಿ ಶ್ರೀ‌ ಸತ್ಯಸಾರಮುಪ್ಪಣ್ಯ ದೈವಸ್ಥಾನಕ್ಕೆ ನಟ ವಿಜಯ ರಾಘವೇಂದ್ರ ಭೇಟಿ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯದ ಪಾಲನಾ ಸಮಿತಿಯಿಂದ ನೂತನವಾಗಿ ಆಯ್ಕೆಗೊಂಡ ಧರ್ಮಾಧ್ಯಕ್ಷರಿಗೆ ಸ್ವಾಗತ

Suddi Udaya

ಬೆಳ್ತಂಗಡಿ ಮಾಸ್ಟರ್ಸ್ ಕೋಚಿಂಗ್ ಕ್ಲಾಸ್ ನಲ್ಲಿ ಶಿಕ್ಷಕರ ದಿನಾಚರಣೆ

Suddi Udaya
error: Content is protected !!