July 27, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಸಂಘ-ಸಂಸ್ಥೆಗಳು

ಕೆನರಾ ಬ್ಯಾಂಕಿನಿಂದ ದ.ಕ ಹಾಲು ಒಕ್ಕೂಟಕ್ಕೆ ದ್ರುವಸಾರಜನಕ ಜಾಡಿ ಕೊಡುಗೆ

ಬೆಳ್ತಂಗಡಿ: ರಾಸುಗಳಲ್ಲಿ ಗರ್ಭಧಾರಣೆ ಫಲಿತಾಂಶವನ್ನು ಹೆಚ್ಚಿಸಲು ಸಹಾಯಕವಾಗುವ ನಿಟ್ಟಿನಲ್ಲಿ ಕೆನರಾ ಬ್ಯಾಂಕ್, ಪ್ರಾದೇಶಿಕ ಕಚೇರಿಯಿಂದ ದ.ಕ ಹಾಲು ಒಕ್ಕೂಟದ ಕೃತಕ ಗರ್ಭಧಾರಣಾ ಕೇಂದ್ರಗಳಿಗೆ ದ್ರವಸಾರಜನಕ ಜಾಡಿಗಳನ್ನು ಬ್ಯಾಂಕಿನ ಕಾರ್ಪೊರೇಟ್ ಸಾಮಾಜಿಕ ಜವಾಬ್ದಾರಿ ನಿಧಿಯಿಂದ ಮಾ.13ರಂದು ಹಸ್ತಾಂತರಿಸಲಾಯಿತು.

ದ.ಕ ಹಾಲು ಒಕ್ಕೂಟದ ಅಧ್ಯಕ್ಷ ರವಿರಾಜ ಹೆಗ್ಡೆ ಮಾತನಾಡಿ ಕೆನರಾ ಬ್ಯಾಂಕಿನ ಈ ಕೊಡುಗೆಯು ಹೈನುಗಾರ ರೈತರಿಗೆ ಪ್ರಯೋಜನಕಾರಿಯಾಗಿದೆ. ಕೆನರಾ ಬ್ಯಾಂಕಿನ ಉದಾರ ಕೊಡುಗೆಗೆ ಬ್ಯಾಂಕಿಗೆ ಕೃತಜ್ಞತೆಯನ್ನು ಸಲ್ಲಿಸಿದರು.

ಕೆನರಾ ಬ್ಯಾಂಕಿನ ಪ್ರಾದೇಶಿಕ ಮುಖ್ಯಸ್ಥೆ ಲತಾ ಪಿ ಕುರುಪ್ ಮಾತನಾಡಿ ಬ್ಯಾಂಕ್ ತನ್ನ ಆದಾಯದಲ್ಲಿ ಒಂದು ಭಾಗವನ್ನು ಸಮಾಜಕ್ಕೆ ಹಂಚಲು ಹರ್ಷಿಸುತ್ತದೆ ಹಾಗೂ ಗ್ರಾಮೀಣ ಭಾಗದ ರೈತರಿಗೆ ಈ ಕೊಡುಗೆಯು ಬಹಳಷ್ಟು ಉಪಯುಕ್ತವಾಗುವುದು ತಮಗೆ ತೃಪ್ತಿಯನ್ನು ನೀಡಿದೆ ಎಂದರು.

ಒಕ್ಕೂಟದ ಉಪಾಧ್ಯಕ್ಷ ಉದಯ ಕೋಟ್ಯಾನ್ , ನಿರ್ದೇಶಕರುಗಳು, ವ್ಯವಸ್ಥಾಪಕ ನಿರ್ದೇಶಕ ವಿವೇಕ್ ಡಿ. ಮತ್ತು ವ್ಯವಸ್ಥಾಪಕ ಡಾ| ರವಿರಾಜ್ ಉಡುಪ ಉಪಸ್ಥಿತರಿದ್ದರು. ಕೆನರಾ ಬ್ಯಾಂಕಿನ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು. ಕೃತಕ ಗರ್ಭಧಾರಣ ಕಾರ್ಯಕರ್ತರಿಗೆ ಸಾಂಕೇತಿಕವಾಗಿ ದ್ರವಸಾರಜನಕ ಜಾಡಿಗಳನ್ನು ಹಸ್ತಾಂತರಿಸಲಾಯಿತು.

Related posts

ಬೆಳ್ತಂಗಡಿ ವರ್ತಕರ ಸಂಘದಿಂದ ವೃದ್ದಾಶ್ರಮಕ್ಕೆ ಭೇಟಿ,ಗೃಹೋಪಯೋಗಿ ವಸ್ತುಗಳ ಹಸ್ತಾಂತರ

Suddi Udaya

ದಯಾ ವಿಶೇಷ ಶಾಲೆಯಲ್ಲಿ ಶೈಕ್ಷಣಿಕ ವರ್ಷದ ಪೋಷಕರ ಸಭೆ

Suddi Udaya

ಶ್ರೀ ಕಾಳಿಕಾಂಬ ಯಕ್ಷ ಕಲಾ ಟ್ರಸ್ಟ್ ವತಿಯಿಂದ ತಾಳಮದ್ದಳೆ ಮತ್ತು ಕಲಾವಿದರಿಗೆ ನುಡಿ ನಮನ

Suddi Udaya

ಧರ್ಮಸ್ಥಳ ಗ್ರಾ.ಪಂ. ಪಿಡಿಒ ಉಮೇಶ್ ಕೆ. ಸೇವಾ ನಿವೃತ್ತಿ: ಧರ್ಮಸ್ಥಳ ಬೀಳ್ಕೊಡುಗೆ ಸಮಾರಂಭ ಸಮಿತಿಯಿಂದ ಬೀಳ್ಕೊಡುಗೆ

Suddi Udaya

ವೇಣೂರು: ನಿಯತಿ ನೃತ್ಯ ನಿಕೇತನ ವತಿಯಿಂದ ಭರತನಾಟ್ಯ ತರಗತಿ ಪ್ರಾರಂಭ

Suddi Udaya

ಮಹಾಕುಂಭಮೇಳದಲ್ಲಿ ಉಜಿರೆ ಎಸ್.ಡಿ.ಎಂ ಆಸ್ಪತ್ರೆಯ ಸಿಬ್ಬಂದಿಗಳಿಂದ ಪುಣ್ಯ ಸ್ನಾನ

Suddi Udaya
error: Content is protected !!