26.1 C
ಪುತ್ತೂರು, ಬೆಳ್ತಂಗಡಿ
June 12, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಸಂಘ-ಸಂಸ್ಥೆಗಳು

ಕೆನರಾ ಬ್ಯಾಂಕಿನಿಂದ ದ.ಕ ಹಾಲು ಒಕ್ಕೂಟಕ್ಕೆ ದ್ರುವಸಾರಜನಕ ಜಾಡಿ ಕೊಡುಗೆ

ಬೆಳ್ತಂಗಡಿ: ರಾಸುಗಳಲ್ಲಿ ಗರ್ಭಧಾರಣೆ ಫಲಿತಾಂಶವನ್ನು ಹೆಚ್ಚಿಸಲು ಸಹಾಯಕವಾಗುವ ನಿಟ್ಟಿನಲ್ಲಿ ಕೆನರಾ ಬ್ಯಾಂಕ್, ಪ್ರಾದೇಶಿಕ ಕಚೇರಿಯಿಂದ ದ.ಕ ಹಾಲು ಒಕ್ಕೂಟದ ಕೃತಕ ಗರ್ಭಧಾರಣಾ ಕೇಂದ್ರಗಳಿಗೆ ದ್ರವಸಾರಜನಕ ಜಾಡಿಗಳನ್ನು ಬ್ಯಾಂಕಿನ ಕಾರ್ಪೊರೇಟ್ ಸಾಮಾಜಿಕ ಜವಾಬ್ದಾರಿ ನಿಧಿಯಿಂದ ಮಾ.13ರಂದು ಹಸ್ತಾಂತರಿಸಲಾಯಿತು.

ದ.ಕ ಹಾಲು ಒಕ್ಕೂಟದ ಅಧ್ಯಕ್ಷ ರವಿರಾಜ ಹೆಗ್ಡೆ ಮಾತನಾಡಿ ಕೆನರಾ ಬ್ಯಾಂಕಿನ ಈ ಕೊಡುಗೆಯು ಹೈನುಗಾರ ರೈತರಿಗೆ ಪ್ರಯೋಜನಕಾರಿಯಾಗಿದೆ. ಕೆನರಾ ಬ್ಯಾಂಕಿನ ಉದಾರ ಕೊಡುಗೆಗೆ ಬ್ಯಾಂಕಿಗೆ ಕೃತಜ್ಞತೆಯನ್ನು ಸಲ್ಲಿಸಿದರು.

ಕೆನರಾ ಬ್ಯಾಂಕಿನ ಪ್ರಾದೇಶಿಕ ಮುಖ್ಯಸ್ಥೆ ಲತಾ ಪಿ ಕುರುಪ್ ಮಾತನಾಡಿ ಬ್ಯಾಂಕ್ ತನ್ನ ಆದಾಯದಲ್ಲಿ ಒಂದು ಭಾಗವನ್ನು ಸಮಾಜಕ್ಕೆ ಹಂಚಲು ಹರ್ಷಿಸುತ್ತದೆ ಹಾಗೂ ಗ್ರಾಮೀಣ ಭಾಗದ ರೈತರಿಗೆ ಈ ಕೊಡುಗೆಯು ಬಹಳಷ್ಟು ಉಪಯುಕ್ತವಾಗುವುದು ತಮಗೆ ತೃಪ್ತಿಯನ್ನು ನೀಡಿದೆ ಎಂದರು.

ಒಕ್ಕೂಟದ ಉಪಾಧ್ಯಕ್ಷ ಉದಯ ಕೋಟ್ಯಾನ್ , ನಿರ್ದೇಶಕರುಗಳು, ವ್ಯವಸ್ಥಾಪಕ ನಿರ್ದೇಶಕ ವಿವೇಕ್ ಡಿ. ಮತ್ತು ವ್ಯವಸ್ಥಾಪಕ ಡಾ| ರವಿರಾಜ್ ಉಡುಪ ಉಪಸ್ಥಿತರಿದ್ದರು. ಕೆನರಾ ಬ್ಯಾಂಕಿನ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು. ಕೃತಕ ಗರ್ಭಧಾರಣ ಕಾರ್ಯಕರ್ತರಿಗೆ ಸಾಂಕೇತಿಕವಾಗಿ ದ್ರವಸಾರಜನಕ ಜಾಡಿಗಳನ್ನು ಹಸ್ತಾಂತರಿಸಲಾಯಿತು.

Related posts

ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಶಶಿರಾಜ್ ಶೆಟ್ಟಿ ಬಂಧನ ವಿರೋಧಿಸಿ ಬೆಳ್ತಂಗಡಿ ಬಿಜೆಪಿ ಮಂಡಲ ವತಿಯಿಂದ ಬೃಹತ್ ಪ್ರತಿಭಟನೆ

Suddi Udaya

ವೇಣೂರು ಐಟಿಐಯಲ್ಲಿ ರಾಷ್ಟ್ರೀಯ/ಬಹುರಾಷ್ಟ್ರೀಯ ಕಂಪನಿಗಳಿಂದ ಕ್ಯಾಂಪಸ್ ಸಂದರ್ಶನ

Suddi Udaya

ತಾ.ಪಂ ದಿಲ್ಲಿ ಯುವನಿಧಿ ಯೋಜನೆಯ ಫಲಾನುಭವಿಗಳ ನೈಜತೆಯ ಭೌತಿಕ ಪರಿಶೀಲನೆ

Suddi Udaya

ಕೊಲ್ಲಿ ದೇವಸ್ಥಾನದ ವಠಾರದಲ್ಲಿ ಸಂಗಮ ಕಲಾವಿದರು ಉಜಿರೆ ಇದರ 14ನೇ ವರ್ಷದ ವಾರ್ಷಿಕೋತ್ಸವ; ಸನ್ಮಾನ

Suddi Udaya

ನಾಲ್ಕೂರು: ಹೃದಯಾಘಾತದಿಂದ ಜಗದೀಶ್ ಪೂಜಾರಿ ಕುದ್ರೋಟ್ಟು ನಿಧನ

Suddi Udaya

ಗೇರುಕಟ್ಟೆ ಸ.ಪ.ಪೂ. ಕಾಲೇಜಿನ ಪ್ರಾಂಶುಪಾಲರು ವಿ. ಲಕ್ಷ್ಮೇ ಗೌಡ ಹೃದಯಾಘಾತದಿಂದ ನಿಧನ

Suddi Udaya
error: Content is protected !!