August 1, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜು

ನಾರಾವಿ ಸರಕಾರಿ ಪ್ರೌಢಶಾಲೆಯಲ್ಲಿ ಉಚಿತ ಟ್ಯೂಷನ್ ತರಬೇತಿ ಸಮಾರೋಪ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಗುರುವಾಯನಕೆರೆ, ನಾರಾವಿ ವಲಯದ ನಾರಾವಿ ಸರಕಾರಿ ಪ್ರೌಢ ಶಾಲೆಯಲ್ಲಿ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಉಚಿತ 3 ತಿಂಗಳ ಟ್ಯೂಷನ್ ತರಬೇತಿಯ ಸಮಾರೋಪ ಕಾರ್ಯಕ್ರಮ ನಡೆಯಿತು.

ಶಾಲಾಭಿವೃದ್ಧಿ ಸಮಿತಿ ಗೌರವ ಸದಸ್ಯ ಉದಯ ಹೆಗ್ಡೆ ಕಾರ್ಯಕ್ರಮ ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ತಾಲೂಕು ಕೇಂದ್ರ ಒಕ್ಕೂಟದ ಅಧ್ಯಕ್ಷ ಸದಾನಂದ ಬಂಗೇರ ವಹಿಸಿದ್ದರು.

ಈ ಸಂದರ್ಭದಲ್ಲಿ ನಾರಾವಿ ವಲಯದ ವಲಯಾಧ್ಯಕ್ಷರಾದ ಶೇಖರ್ ಹೆಗ್ಡೆ, ನಾರಾವಿ ಪ್ರೌಢ ಶಾಲೆಯ ಮುಖ್ಯೋಪಾಧ್ಯಾಯಿನಿ ಸುಶೀಲ, ಶಾಲಾ ನಾಯಕ ಪ್ರತೀಕ್ ಉಪಸ್ಥಿತರಿದ್ದರು.

ಟ್ಯೂಷನ್ ಕ್ಲಾಸ್ ತರಬೇತಿಯಲ್ಲಿ ಉತ್ತಮ ಅಂಕ ಗಳಿಸಿದ ಇಬ್ಬರು ವಿದ್ಯಾರ್ಥಿಗಳನ್ನು ಗುರುತಿಸಲಾಯಿತು. ಎಸ್‌ಎಸ್‌ಎಲ್‌ಸಿ ಎಲ್ಲಾ ವಿದ್ಯಾರ್ಥಿಗಳಿಗೆ ಪೆನ್ ನೀಡಿ ಮುಂದಿನ ಪಬ್ಲಿಕ್ ಪರೀಕ್ಷೆಗೆ ಶುಭ ಹಾರೈಕೆ ಮಾಡಲಾಯಿತು.

ಈ ಸಂದರ್ಭದಲ್ಲಿ ಅನಾರೋಗ್ಯ ಪೀಡಿತರಾದ ನಾರಾವಿ ಕಾರ್ಯಕ್ಷೇತ್ರದ ಸದಸ್ಯೆ ಲಲಿತ ಹೆಗ್ಡೆಯವರಿಗೆ ಶ್ರೀ ಕ್ಷೇತ್ರದಿಂದ ಡಾ|| ಹೆಗ್ಗಡೆಯವರು ಮಂಜೂರು ಮಾಡಿದ 25000 ಸಹಾಯಧನ ಕ್ರಿಟಿಕಲ್ ಫಂಡ್ ಮಂಜೂರಾತಿ ಪತ್ರವನ್ನು ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಶಾಲಾ ಸಹ ಶಿಕ್ಷಕರು, ಸೇವಪ್ರತಿನಿಧಿಗಳಾದ ರೇಷ್ಮಾ, ಹರಿಣಾಕ್ಷಿ ಉಪಸ್ಥಿತರಿದ್ದರು.

ಗುರುವಾಯನಕೆರೆ ತಾಲೂಕು ಸಮನ್ವಯಾಧಿಕಾರಿ ಸುಗುಣ ಸ್ವಾಗತಿಸಿದರು. ನಾರಾವಿ ವಲಯದ ಮೇಲ್ವಿಚಾರಕಿ ವಿಶಾಲ ಕೆ ಕಾರ್ಯಕ್ರಮ ನಿರೂಪಿಸಿದರು. ಆಶಾಲತಾ ವಂದಿಸಿದರು

Related posts

ಮಿತ್ತಬಾಗಿಲು ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸ ವರ್ಗ ಕಾರ್ಯಕ್ರಮ

Suddi Udaya

ಯಕ್ಷಧ್ರುವ ಪಟ್ಲ ಫೌಂಡೇಶನ್ ದಶಮಾನೋತ್ಸವಕ್ಕೆ ಉದ್ಯಮಿ ಶಶಿಧರ್ ಶೆಟ್ಟಿ ಬರೋಡರಿಂದ ರೂ.1 ಕೋಟಿ ದೇಣಿಗೆ

Suddi Udaya

ಬೆಳ್ತಂಗಡಿ ಸಿರಿ ಸಂಸ್ಥೆಗೆ ಪತ್ರಕರ್ತ ವಸಂತ ಗಿಳಿಯಾರ್ ಭೇಟಿ

Suddi Udaya

ವಾಣಿ ಪದವಿಪೂರ್ವ ಕಾಲೇಜಿನ ಬಾಲಕಿಯರು ಪ್ರತಿನಿಧಿಸಿದ ದಕ್ಷಿಣ ಕನ್ನಡ ಜಿಲ್ಲೆಯ ತ್ರೋಬಾಲ್ ತಂಡಕ್ಕೆ ರಾಜ್ಯಮಟ್ಟದಲ್ಲಿ ಪ್ರಥಮ ಸ್ಥಾನ

Suddi Udaya

ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಪಟ್ರಮೆ ಗ್ರಾಮ ಪಂಚಾಯತ್ ಬಳಿ ಬಿಜೆಪಿ ಪ್ರತಿಭಟನೆ

Suddi Udaya

ಜಿಪಿಟಿ ಶಿಕ್ಷಕ ಮೋಹನ್ ರಾಷ್ಟ್ರ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!