July 27, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ: ಸಂತ್ರಸ್ತ ಕುಟುಂಬವನ್ನು ಭೇಟಿಯಾದ ವಿಮ್ ನಿಯೋಗ

ಬೆಳ್ತಂಗಡಿ: ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಏಳು ವರ್ಷದ ಅಪ್ರಾಪ್ತ ಬಾಲಕಿ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣದ ಹಿನ್ನೆಲೆಯಲ್ಲಿ ಸಂತ್ರಸ್ತ ಬಾಲಕಿಯ ಮನೆಗೆ ವಿಮೆನ್ ಇಂಡಿಯಾ ಮೂವ್ಮೆಂಟ್ ಬೆಳ್ತಂಗಡಿ ಕ್ಷೇತ್ರ ಸಮಿತಿ ನಿಯೋಗ ಭೇಟಿ ನೀಡಿ, ಕುಟುಂಬದವರಿಗೆ ಸಾಂತ್ವನ ತಿಳಿಸಿತು.

ಈ ಸಂದರ್ಭದಲ್ಲಿ ಮಾತನಾಡಿದ ವಿಮೆನ್ ಇಂಡಿಯಾ ಮೂವ್ಮೆಂಟ್ ಬೆಳ್ತಂಗಡಿ ಕ್ಷೇತ್ರ ಅಧ್ಯಕ್ಷೆ ಶಮಾ ಆಲಿ ಉಜಿರೆ, ವೇಣೂರಿನಲ್ಲಿ ನಡೆದ ಈ ಅಮಾನವೀಯ ಕೃತ್ಯ ಅತ್ಯಂತ ಖಂಡನೀಯವಾಗಿದ್ದು, ಇಂತಹ ಘಟನೆಗಳು ಮುಂದೆ ಯಾವುದೇ ಮಗುವಿಗೂ ಮರುಕಳಿಸಬಾರದು ಎಂದು ಹೇಳಿದರು.

ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯಾದ ಉತ್ತರ ಪ್ರದೇಶ ಮೂಲದ ನರೇಶ್‌ನ್ನು ತಕ್ಷಣ ಬಂಧಿಸಿದ ವೇಣೂರು ಪೊಲೀಸರ ಕ್ರಮವನ್ನು ಅವರು ಶ್ಲಾಘಿಸಿದ ಅವರು, ಇಂತಹ ಘೋರ ಕೃತ್ಯ ಎಸಗುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಂಡು ತೀವ್ರ ಶಿಕ್ಷೆ ವಿಧಿಸಬೇಕು, “ಇಂತಹ ದುಷ್ಟ ಶಕ್ತಿಗಳು ಮತ್ತೆ ಸಮಾಜದಲ್ಲಿ ತಲೆ ಎತ್ತದಂತೆ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ವಿಮೆನ್ ಇಂಡಿಯಾ ಮೂವ್ಮೆಂಟ್ ಬೆಳ್ತಂಗಡಿ ಕ್ಷೇತ್ರ ಸಮಿತಿ ನಿಯೋಗದಲ್ಲಿ ಕ್ಷೇತ್ರ ಕೋಶಾಧಿಕಾರಿ ಹಸೀನಾ ಬೆಳ್ತಂಗಡಿ, ಅಡ್ವೋಕೇಟ್ ಅಸ್ಮಾ ಬೆಳ್ತಂಗಡಿ, ಸಫ್ರಾ ಬೆಳ್ತಂಗಡಿ ಹಾಗೂ ರಫಾ ಸಂಜಯನಗರ ಉಪಸ್ಥಿತರಿದ್ದರು.

Related posts

ಎಸ್ಸೆಸ್ಸೆಲ್ಸಿ ಫಲಿತಾಂಶ: ಕನ್ನಡ ಮಾಧ್ಯಮ ಶಾಲೆಯಲ್ಲಿ ತಾಲೂಕಿಗೆ ಪ್ರಥಮ ಸ್ಥಾನ ಪಡೆದ ಮಹಮ್ಮದ್ ಶಹಝಾದ್ ಗೆ ಅಭಿನಂದನೆ

Suddi Udaya

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ಹಿಂದೂ ಸಂಘಟನೆಗಳಿಂದ ಇಂದು(ಮೇ 2) ದ.ಕ ಜಿಲ್ಲೆ ಬಂದ್ ಗೆ ಕರೆ

Suddi Udaya

ಬಿಜೆಪಿ ಪಕ್ಷದ ಅಭ್ಯರ್ಥಿ ಶಾಸಕ ಹರೀಶ್ ಪೂಂಜ ರವರಿಗೆ ಪ್ರಮಾಣಪತ್ರ ವಿತರಣೆ

Suddi Udaya

ಬೆಳ್ತಂಗಡಿ: ಶ್ರೀ ಧ.ಮಂ.ಆಂ.ಮಾ. ಶಾಲೆಯ ವಿದ್ಯಾರ್ಥಿಗಳಿಗೆ ಕುಷ್ಟರೋಗದ ನಿರ್ಮೂಲನೆ , ಕುಷ್ಟ ರೋಗವನ್ನು ಪತ್ತೆ ಹಚ್ಚುವ ಜಾಗೃತಿಯ ಬಗ್ಗೆ ಮಾಹಿತಿ ಕಾರ್ಯಾಗಾರ

Suddi Udaya

ಜಿಲ್ಲಾ ಮಟ್ಟದ ಇನ್ಸ್ ಪೈಯರ್ ಸ್ಪರ್ಧೆಗೆ ಉರುವಾಲು ಶ್ರೀ ಭಾರತೀ ವಿದ್ಯಾರ್ಥಿಗಳು ಆಯ್ಕೆ

Suddi Udaya

ಉಜಿರೆ ಶ್ರೀ. ಧ.ಮಂ. ವಸತಿ ಪದವಿ ಪೂರ್ವ ಕಾಲೇಜಿಗೆ ಶೇ.100 ಫಲಿತಾಂಶ

Suddi Udaya
error: Content is protected !!