33.6 C
ಪುತ್ತೂರು, ಬೆಳ್ತಂಗಡಿ
March 14, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ದಿ ಟೈಮ್ಸ್ ಆಫ್ ಇಂಡಿಯಾ ಪತ್ರಿಕೆಯ ವಿಶೇಷ ವರದಿಗಾರ ಶ್ರೀನಿವಾಸ ಎಂ ಸಿದ್ದಪಡಿಸಿದ ಸಂಶೋಧನಾ ವರದಿ ಬಿಡುಗಡೆ

ಬೆಳ್ತಂಗಡಿ: ವಿಧಾನ ಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ ಕರ್ನಾಟಕ ಮಾಧ್ಯಮ ಅಕಾಡಮಿಯ 2025ನೇ ಸಾಲಿನ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ದಿ ಟೈಮ್ಸ್ ಆಫ್ ಇಂಡಿಯಾ ಪತ್ರಿಕೆಯ ವಿಶೇಷ ವರದಿಗಾರ ಶ್ರೀನಿವಾಸ ಎಂ ಸೇರಿದಂತೆ ಆರು ಪತ್ರಕರ್ತರು ಕರ್ನಾಟಕ ಮಾಧ್ಯಮ ಅಕಾಡಮಿ ಫೆಲೋಶಿಪ್ ಭಾಗವಾಗಿ ಸಿದ್ದಪಡಿಸಿರುವ ಸಂಶೋಧನಾ ವರದಿಗಳನ್ನು ಬಿಡುಗಡೆ ಮಾಡಿದರು.

ಕರ್ನಾಟಕ ಮಾಧ್ಯಮ ಅಕಾಡಮಿ ಅಧ್ಯಕ್ಷೆ ಆಯೇಶಾ ಖಾನಂ, ಕಾರ್ಯದರ್ಶಿ ಸಹನಾ ಎಂ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಮೂಲತಃ ತಾಲೂಕಿನ ಕನ್ಯಾಡಿ IIನ ದಿ.ರಾಮ ಬಾಳ್ತಿಲ್ಲಾಯ ಹಾಗೂ ಸುನಂದಾ ದಂಪತಿ ಪುತ್ರರಾದ ಇವರು ಉಜಿರೆಯ ಶ್ರೀ ಧ.ಮ. ಕಾಲೇಜು ಹಾಗೂ ಮಂಗಳೂರು ವಿಶ್ವ ವಿದ್ಯಾನಿಲಯದ ಹಳೆ ವಿದ್ಯಾರ್ಥಿಯಾಗಿದ್ದು, ಪ್ರಸ್ತುತ ಮೈಸೂರಿನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

Related posts

ಕೊಕ್ಕಡ ಗ್ರಾ.ಪಂ. ನಲ್ಲಿ ಉದ್ಯೋಗಕಾತರಿ ಯೋಜನೆಯಡಿ ಆರೋಗ್ಯ ತಪಾಸಣಾ ಶಿಬಿರ

Suddi Udaya

ಬೆಳ್ತಂಗಡಿ ಯುವಬಿಲ್ಲವ ವೇದಿಕೆ ನೇತೃತ್ವದಲ್ಲಿ ಯುವ ಚೈತನ್ಯ 2025 ವ್ಯಕ್ತಿತ್ವ ವಿಕಸನ ಕಾರ್ಯಾಗಾರ

Suddi Udaya

ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಅತ್ಯಧಿಕ ಅಂಕಗಳಿಸಿದ ಪ್ರಾರ್ಥನಾರಿಗೆ ಸನ್ಮಾನ

Suddi Udaya

ಅಯೋಧ್ಯೆಯಲ್ಲಿನ ಶ್ರೀ ರಾಮನ ಮಂದಿರವು ಸುಂದರವಾಗಿ ಮೂಡಿಬಂದಿದೆ: ಡಾ| ಡಿ ವೀರೇಂದ್ರ ಹೆಗ್ಗಡೆ

Suddi Udaya

ಉಜಿರೆ ಗ್ರಾ.ಪಂ.ಯಲ್ಲಿ ಸ್ವಚ್ಛ ಭಾರತ ಮಿಷನ್ ಯೋಜನೆಯ ಅನುಷ್ಠಾನದ ಅಧ್ಯಯನ ಪ್ರವಾಸ

Suddi Udaya

ಉಜಿರೆ  : ಎಸ್.ಡಿ.ಎಂ ಪ.ಪೂ. ವಸತಿ ಕಾಲೇಜಿನಲ್ಲಿ ‘ಕಾರ್ಗಿಲ್ ವಿಜಯ ದಿವಸ ಆಚರಣೆ’

Suddi Udaya
error: Content is protected !!