28.1 C
ಪುತ್ತೂರು, ಬೆಳ್ತಂಗಡಿ
September 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಪೆರಿಂಜೆ: ಶ್ರೀ ಕ್ಷೇತ್ರ ಪಡ್ಡ್ಯಾರಬೆಟ್ಟ ಶ್ರೀ ಕೊಡಮಣಿತ್ತಾಯ ದೈವದ ವರ್ಷಾವಧಿ ಜಾತ್ರೋತ್ಸವ ಪ್ರಾರಂಭ

ಪೆರಿಂಜೆ: ಶ್ರೀ ಕ್ಷೇತ್ರ ಪಡ್ಡ್ಯಾರಬೆಟ್ಟ ಶ್ರೀ ಕೊಡಮಣಿತ್ತಾಯ ದೈವದ ವರ್ಷಾವಧಿ ಜಾತ್ರೆ ಹಾಗೂ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳು ಮಾ.14ರಂದು ಪ್ರಾರಂಭಗೊಂಡು ಮಾ.19ರವರೆಗೆ ಜರುಗಲಿರುವುದು.

ಮಾ.14ರಂದು ಮೀನ ಸಂಕ್ರಮಣ ದಿನ ಮಧ್ಯಾಹ್ನ ಪೆರಿಂಜ ಶ್ರೀ ಪುಷ್ಪದಂತ ಸ್ವಾಮಿ ಬಸದಿಯಲ್ಲಿ ದೇವರಿಗೆ ಪಂಚಾಮೃತಾಭಿಷೇಕ, ಶ್ರೀ ಅಮ್ಮನವರಿಗೆ ವರಹ ಪೂಜೆ, ರಾತ್ರಿ ಪಡ್ಡ್ಯೋಡಿಗುತ್ತಿನಲ್ಲಿ ಉಪಹಾರ, ಪಡ್ಡ್ಯೋಡಿಗುತ್ತಿನಿಂದ ಶ್ರೀ ಕೊಡಮಣಿತ್ತಾಯ ದೈವದ ಭಂಡಾರ ಇಳಿಯುವುದು, ಪಡ್ಡ್ಯಾರಬೆಟ್ಟಕ್ಕೆ ಆಗಮನ ಧ್ವಜಾರೋಹಣ, ಬಲಿ, ಚೆಂಡು ಜರುಗಲಿದೆ.

ಮಾ.15ರಂದು ಭೂತಬಲಿ ಉತ್ಸವ, ಮಾ.16ರಂದು ಅಂಬೋಡಿ, ಬಲಿ, ಉತ್ಸವ ಹೂವಿನ ಪೂಜೆ, ರಥಾರೋಹಣ, ಮಾ.17ರಂದು ವರ್ಷಾವಧಿ ಜಾತ್ರೋತ್ಸವ, ಮಧ್ಯಾಹ್ನ ರಥದಲ್ಲಿ ಮಹಾಪೂಜೆ, ರಥೋತ್ಸವ, ಹೂವಿನ ಪೂಜೆ, ಮಹಾ ಅನ್ನಸಂತರ್ಪಣೆ, ಕೊಡಮಣಿತ್ತಾಯ ದೈವದ ನೇಮೋತ್ಸವ ನಡೆಯಲಿದೆ.

ಮಾ.18ರಂದು ಧ್ವಜ ಅವರೋಹಣ, ಸಂಪ್ರೋಕ್ಷಣೆ ಪಡ್ಡ್ಯೋಡಿಗುತ್ತಿಗೆ ಭಂಡಾರ ಹಿಂದಿರುಗುವುದು, ಮಾ.19ರಂದು ರಾತ್ರಿ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಲಾಪಗಳು, ಹೂವಿನ ಪೂಜೆ, ಕೊಡಮಣಿತ್ತಾಯ ದೈವದ ಕುರುಸಂಬಿಲ ನೇಮ, ತುಲಾಭಾರ ಸೇವೆ ನಡೆಯಲಿದೆ. ರಾತ್ರಿ 8ರಿಂದ ದಕ್ಷಿಣ ಭಾರತದ ಹೆಸರಾಂತ ಕಲಾವಿದ ಗಾನಪ್ರವೀಣ ಬಳ್ಳಪ್ಪದವು ಯೋಗೀಶ ಶರ್ಮ ಮತ್ತು ಬಳಗದವರಿಂದ ನಾದ ತರಂಗ ಭಕ್ತಿ ಸಂಗೀತ ಕಾರ್ಯಕ್ರಮ ಜರುಗಲಿದೆ.

Related posts

ಮಾಜಿ ಉಪ ಪ್ರಧಾನಿ, ಬಿಜೆಪಿ ಹಿರಿಯ ನಾಯಕ ಎಲ್.ಕೆ ಅಡ್ವಾಣಿ ರವರಿಗೆ ಭಾರತ ರತ್ನ ಗೌರವ

Suddi Udaya

ವಲಯ ಮಟ್ಟದ ಪ್ರತಿಭಾ ಕಾರಂಜಿ: ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಗೆ ಹಲವು ಪ್ರಶಸ್ತಿ

Suddi Udaya

ಕಾಶಿಪಟ್ಣ ಗ್ರಾಮವನ್ನು ಹರ್ ಘರ್ ಜಲ್ ಗ್ರಾಮ ಘೋಷಣೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಯು ಶೇಪ್ ವಾಕರ್ ವಿತರಣೆ

Suddi Udaya

ಫೆ.13: ವಿದ್ಯುತ್ ನಿಲುಗಡೆ

Suddi Udaya

ಮೊಗ್ರು: ಮುಗೇರಡ್ಕ – ಅಲೆಕ್ಕಿ ಶ್ರೀ ರಾಮ ಸೇವಾ ಟ್ರಸ್ಟ್ ಇದರ ಪೋಷಕರ ಹಾಗೂ ಶಿಕ್ಷಕರ ಚಿಂತನಾ ಸಭೆ

Suddi Udaya
error: Content is protected !!