ಬೆಳ್ತಂಗಡಿ ಆತ್ಮಾನಂದ ಸರಸ್ವತಿ ಕೈಗಾರಿಕಾ ತರಬೇತಿ ಕೇಂದ್ರ (ಐ.ಟಿ.ಐ.) ಜಿಲ್ಲಾಡಿ ಮತ್ತು ಕೌಶಲ್ಯ ಅಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಮಂತ್ರಾಲಯ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ವಿಭಾಗೀಯ ಕಛೇರಿ ಮೈಸೂರು ಇದರ ಸಹಯೋಗದಲ್ಲಿ “ಬೃಹತ್ ಅಪ್ರೆಂಟಿಸ್ಶಿಪ್ ಮೇಳ ಹಾಗೂ ಬೃಹತ್ ಉದ್ಯೋಗ ಮೇಳ” ವು ಮಾ.17ರಂದು ಉಡುಪಿಯ ಅಮೃತ ಗಾರ್ಡನ್ ನಲ್ಲಿ ನಡೆಯಲಿದೆ ಎಂದು 1008 ಮಹಾಮಂಡಲೇಶ್ವರ ಕನ್ಯಾಡಿ ಶ್ರೀರಾಮ ಕ್ಷೇತ್ರದ ಪೀಠಾಧಿಪತಿ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಈ ಉದ್ಯೋಗ ಮೇಳದಲ್ಲಿ ಐಟಿಐ, ಡಿಪ್ಲೋಮಾ, ಡಿಗ್ರಿ, ಇಂಜಿನಿಯರ್ ಗೆ ಸಂಬಂಧಿತ ನಿರುದ್ಯೋಗಿಗಳಿಗೆ ಉತ್ತಮ ಅವಕಾಶವನ್ನು ಕಲ್ಪಿಸುವ ಯೋಜನೆಯನ್ನು ಪ್ರಧಾನ ಮಂತ್ರಿ ರಾಷ್ಟ್ರೀಯ ಅಪ್ರೆಂಟಿಶಿಪ್ ಮೇಳ ಮತ್ತು ಬೃಹತ್ ಉದ್ಯೋಗ ನಡೆಸುತ್ತಿದ್ದು, ನೂರಕ್ಕೂ ಹೆಚ್ಚು ಪ್ರತಿಷ್ಠಿತ ಕಂಪನಿಗಳು ಈ ಮೇಳದಲ್ಲಿ ಭಾಗವಹಿಸಲಿದೆ. ಕಳೆದ ವರ್ಷ 1200 ವಿದ್ಯಾರ್ಥಿಗಳಿಗೆ ಉದ್ಯೋಗವನ್ನು ಕಲ್ಪಿಸಲಾಗಿದೆ. ಈ ಬಾರಿ 3ರಿಂದ 4 ಸಾವಿರ ಉದ್ಯೋಗ ಆಕಾಂಕ್ಷಿಗಳು ಭಾಗವಹಿಸಲಿದ್ದಾರೆ. ಈ ಮೇಳದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಉದ್ಯೋಗ ಆಕಾಂಕ್ಷಿಗಳು ಸರಿಯಾದ ದಾಖಲೆಗಳೊಂದಿಗೆ ಭಾಗವಹಿಸಿ ಸದುಪಯೋಗ ಪಡೆದುಕೊಳ್ಳಿ ಎಂದು ತಿಳಿಸಿರುತ್ತಾರೆ.












