23.8 C
ಪುತ್ತೂರು, ಬೆಳ್ತಂಗಡಿ
August 1, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ದಿ ಟೈಮ್ಸ್ ಆಫ್ ಇಂಡಿಯಾ ಪತ್ರಿಕೆಯ ವಿಶೇಷ ವರದಿಗಾರ ಶ್ರೀನಿವಾಸ ಎಂ ಸಿದ್ದಪಡಿಸಿದ ಸಂಶೋಧನಾ ವರದಿ ಬಿಡುಗಡೆ

ಬೆಳ್ತಂಗಡಿ: ವಿಧಾನ ಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ ಕರ್ನಾಟಕ ಮಾಧ್ಯಮ ಅಕಾಡಮಿಯ 2025ನೇ ಸಾಲಿನ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ದಿ ಟೈಮ್ಸ್ ಆಫ್ ಇಂಡಿಯಾ ಪತ್ರಿಕೆಯ ವಿಶೇಷ ವರದಿಗಾರ ಶ್ರೀನಿವಾಸ ಎಂ ಸೇರಿದಂತೆ ಆರು ಪತ್ರಕರ್ತರು ಕರ್ನಾಟಕ ಮಾಧ್ಯಮ ಅಕಾಡಮಿ ಫೆಲೋಶಿಪ್ ಭಾಗವಾಗಿ ಸಿದ್ದಪಡಿಸಿರುವ ಸಂಶೋಧನಾ ವರದಿಗಳನ್ನು ಬಿಡುಗಡೆ ಮಾಡಿದರು.

ಕರ್ನಾಟಕ ಮಾಧ್ಯಮ ಅಕಾಡಮಿ ಅಧ್ಯಕ್ಷೆ ಆಯೇಶಾ ಖಾನಂ, ಕಾರ್ಯದರ್ಶಿ ಸಹನಾ ಎಂ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಮೂಲತಃ ತಾಲೂಕಿನ ಕನ್ಯಾಡಿ IIನ ದಿ.ರಾಮ ಬಾಳ್ತಿಲ್ಲಾಯ ಹಾಗೂ ಸುನಂದಾ ದಂಪತಿ ಪುತ್ರರಾದ ಇವರು ಉಜಿರೆಯ ಶ್ರೀ ಧ.ಮ. ಕಾಲೇಜು ಹಾಗೂ ಮಂಗಳೂರು ವಿಶ್ವ ವಿದ್ಯಾನಿಲಯದ ಹಳೆ ವಿದ್ಯಾರ್ಥಿಯಾಗಿದ್ದು, ಪ್ರಸ್ತುತ ಮೈಸೂರಿನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

Related posts

ಬೆಳ್ತಂಗಡಿ ಧರ್ಮಪ್ರಾಂತ್ಯದ ದ್ವಿತೀಯ ಧರ್ಮಾಧ್ಯಕ್ಷರಾಗಿ ಅತೀ ವಂದನೀಯ ಜೇಮ್ಸ್ ಪಟ್ಟೇರಿಲ್ ಪಟ್ಟಾಭಿಷೇಕ

Suddi Udaya

ವೈದ್ಯರ ನಿರ್ಲಕ್ಷ್ಯಕ್ಕೆ ವೇಣೂರಿನ ಗರ್ಭಿಣಿ ಮಹಿಳೆ ಕೋಮಸ್ಥಿತಿಯಲ್ಲಿ

Suddi Udaya

ನಿಟ್ಟಡೆ: ಬೀಯದಡಿ ನಿವಾಸಿ ಜಾನಕಿ ನಿಧನ

Suddi Udaya

ಸಂಚಾರಿಸುತ್ತಿದ್ದ ಬೈಕ್ ಮೇಲೆ ಕಾಡುಕೋಣ ದಾಳಿ: ಸವಾರನಿಗೆ ಗಾಯ

Suddi Udaya

ಉರುವಾಲು ಶ್ರೀ ಭಾರತೀ ವಿದ್ಯಾ ಸಂಸ್ಥೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಪಿಲ್ಯ ಗುಡ್ ಫ್ಯೂಚರ್ ಚೈಲ್ಡ್ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya
error: Content is protected !!