27 C
ಪುತ್ತೂರು, ಬೆಳ್ತಂಗಡಿ
June 16, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಪೆರಿಂಜೆ: ಶ್ರೀ ಕ್ಷೇತ್ರ ಪಡ್ಡ್ಯಾರಬೆಟ್ಟ ಶ್ರೀ ಕೊಡಮಣಿತ್ತಾಯ ದೈವದ ವರ್ಷಾವಧಿ ಜಾತ್ರೋತ್ಸವ ಪ್ರಾರಂಭ

ಪೆರಿಂಜೆ: ಶ್ರೀ ಕ್ಷೇತ್ರ ಪಡ್ಡ್ಯಾರಬೆಟ್ಟ ಶ್ರೀ ಕೊಡಮಣಿತ್ತಾಯ ದೈವದ ವರ್ಷಾವಧಿ ಜಾತ್ರೆ ಹಾಗೂ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳು ಮಾ.14ರಂದು ಪ್ರಾರಂಭಗೊಂಡು ಮಾ.19ರವರೆಗೆ ಜರುಗಲಿರುವುದು.

ಮಾ.14ರಂದು ಮೀನ ಸಂಕ್ರಮಣ ದಿನ ಮಧ್ಯಾಹ್ನ ಪೆರಿಂಜ ಶ್ರೀ ಪುಷ್ಪದಂತ ಸ್ವಾಮಿ ಬಸದಿಯಲ್ಲಿ ದೇವರಿಗೆ ಪಂಚಾಮೃತಾಭಿಷೇಕ, ಶ್ರೀ ಅಮ್ಮನವರಿಗೆ ವರಹ ಪೂಜೆ, ರಾತ್ರಿ ಪಡ್ಡ್ಯೋಡಿಗುತ್ತಿನಲ್ಲಿ ಉಪಹಾರ, ಪಡ್ಡ್ಯೋಡಿಗುತ್ತಿನಿಂದ ಶ್ರೀ ಕೊಡಮಣಿತ್ತಾಯ ದೈವದ ಭಂಡಾರ ಇಳಿಯುವುದು, ಪಡ್ಡ್ಯಾರಬೆಟ್ಟಕ್ಕೆ ಆಗಮನ ಧ್ವಜಾರೋಹಣ, ಬಲಿ, ಚೆಂಡು ಜರುಗಲಿದೆ.

ಮಾ.15ರಂದು ಭೂತಬಲಿ ಉತ್ಸವ, ಮಾ.16ರಂದು ಅಂಬೋಡಿ, ಬಲಿ, ಉತ್ಸವ ಹೂವಿನ ಪೂಜೆ, ರಥಾರೋಹಣ, ಮಾ.17ರಂದು ವರ್ಷಾವಧಿ ಜಾತ್ರೋತ್ಸವ, ಮಧ್ಯಾಹ್ನ ರಥದಲ್ಲಿ ಮಹಾಪೂಜೆ, ರಥೋತ್ಸವ, ಹೂವಿನ ಪೂಜೆ, ಮಹಾ ಅನ್ನಸಂತರ್ಪಣೆ, ಕೊಡಮಣಿತ್ತಾಯ ದೈವದ ನೇಮೋತ್ಸವ ನಡೆಯಲಿದೆ.

ಮಾ.18ರಂದು ಧ್ವಜ ಅವರೋಹಣ, ಸಂಪ್ರೋಕ್ಷಣೆ ಪಡ್ಡ್ಯೋಡಿಗುತ್ತಿಗೆ ಭಂಡಾರ ಹಿಂದಿರುಗುವುದು, ಮಾ.19ರಂದು ರಾತ್ರಿ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಲಾಪಗಳು, ಹೂವಿನ ಪೂಜೆ, ಕೊಡಮಣಿತ್ತಾಯ ದೈವದ ಕುರುಸಂಬಿಲ ನೇಮ, ತುಲಾಭಾರ ಸೇವೆ ನಡೆಯಲಿದೆ. ರಾತ್ರಿ 8ರಿಂದ ದಕ್ಷಿಣ ಭಾರತದ ಹೆಸರಾಂತ ಕಲಾವಿದ ಗಾನಪ್ರವೀಣ ಬಳ್ಳಪ್ಪದವು ಯೋಗೀಶ ಶರ್ಮ ಮತ್ತು ಬಳಗದವರಿಂದ ನಾದ ತರಂಗ ಭಕ್ತಿ ಸಂಗೀತ ಕಾರ್ಯಕ್ರಮ ಜರುಗಲಿದೆ.

Related posts

ಲಾಯಿಲ ಶ್ರೀ ರಾಘವೇಂದ್ರ ಸ್ವಾಮಿಗಳ ಆರಾಧನಾ ಮಹೋತ್ಸವದ ಆಮಂತ್ರಣ ಪತ್ರ ಬಿಡುಗಡೆ

Suddi Udaya

ಧರ್ಮಸ್ಥಳ ಗ್ರಾ.ಪಂ ಗೆ ಎಸ್.ಐ.ಟಿ ಎಂಟ್ರಿ : ಕರ್ತವ್ಯ ನಿರ್ವಹಿಸುತ್ತಿದವರ ವಿವರ ಪಡೆದ ಎಸ್.ಐ.ಟಿ

Suddi Udaya

ಬೆಳ್ತಂಗಡಿ: ಮನೋಜ್ ಕಟ್ಟೆಮಾರ್ ರವರ ಹುಟ್ಟುಹಬ್ಬದ ಪ್ರಯುಕ್ತ ಅಖಿಲ ಕರ್ನಾಟಕ ರಾಜಕೇಸರಿ ಟ್ರಸ್ಟ್ ವತಿಯಿಂದ ಬೆಳ್ತಂಗಡಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಹಣ್ಣು ಹಂಪಲು ವಿತರಣೆ

Suddi Udaya

ಮೈಸೂರು ಜಿಲ್ಲೆಯ ಟಿ. ನರಸೀಪುರ ತಾಲೂಕಿನಲ್ಲಿ ನಡೆದ ಘಟನೆ: ನದಿಯಲ್ಲಿ ಕಾಲು ಜಾರಿ ಬಿದ್ದು ನಾವೂರಿನ ಯುವಕ ಮನ್ಸೂರ್ ಮೃತ್ಯು

Suddi Udaya

ಬೆಳ್ತಂಗಡಿ ಹಿಂದೂ ಸಂಗಮ ಆಯೋಜನಾ ಸಮಿತಿಯಿಂದ ಪ್ರಶಿಕ್ಷಣ ವರ್ಗ ಮತ್ತು ಆಮಂತ್ರಣ ಪತ್ರ ಬಿಡುಗಡೆ ಕಾರ್ಯಕ್ರಮ

Suddi Udaya

ಯೋಗ ಗುರು ಕುಶಾಲಪ್ಪ ಗೌಡರಿಗೆ ಕೆಎನ್ ಶೆಟ್ಟಿ ಸಂಸ್ಮರಣಾ ಪ್ರಶಸ್ತಿ

Suddi Udaya
error: Content is protected !!