23.8 C
ಪುತ್ತೂರು, ಬೆಳ್ತಂಗಡಿ
August 1, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿವರದಿ

ಅಳದಂಗಡಿ ಸೊಸೈಟಿಯಿಂದ ಕಾಳುಮೆಣಸು ಮತ್ತು ಕಾಫಿ ಬೆಳೆಯ ಕೃಷಿ ಮಾಹಿತಿ ಹಾಗೂ ಸಂವಾದ: ಸುವರ್ಣ ಸಂಭ್ರಮ-2026 ಚಾಲನೆ,ಕೃಷಿ ತರಬೇತುದಾರರಿಗೆ ಸನ್ಮಾನ,ಸಾಧಕ ಕೃಷಿಕರಿಗೆ ಗೌರವಾರ್ಪಣೆ: ದ.ಕ. ಜಿಲ್ಲೆಯ ಕೃಷಿಕರು ಚಂಚಲ ಮನಸ್ಥಿತಿಯವರು: ಶಾಸಕ ಹರೀಶ್ ಪೂಂಜ

ಅಳದಂಗಡಿ: ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಸುವರ್ಣ ಸಂಭ್ರಮ 2026 ಚಾಲನೆಯೊಂದಿಗೆ ಕಾಳುಮೆಣಸು ಮತ್ತು ಕಾಫಿ ಬೆಳೆಯ ಕೃಷಿ ಮಾಹಿತಿ ಹಾಗೂ ಸಂವಾದ ಕಾರ್ಯಕ್ರಮ ಮಾ.15ರಂದು ಅಳದಂಗಡಿ ಕಟ್ಟೂರು ಶಂಕರ್ ಭಟ್ ರವರ ತೋಟದಲ್ಲಿ ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಶಾಸಕ ಹರೀಶ್‌ ಪೂಂಜರವರು ನೆರವೇರಿಸಿ ಮಾತನಾಡಿ ಧಕ್ಷಿಣ ಕನ್ನಡ ಜಿಲ್ಲೆಯ ಕೃಷಿಕರು ಚಂಚಲ ಮನಸ್ಥಿತಿಯವರು. ಯಾಕೆಂದರೆ ಭತ್ತ ಬೆಳೆದು ಬೆಲೆ ಕಡಿಮೆಯಾದಾಗ ಅಡಿಕೆ ಹಾಕಿದೆವು, ನಂತರ ಅಡಿಕೆ ಕಡಿದು ರಬ್ಬರು ಬೆಳೆದೆವು,ಹೀಗೆ ವೆನಿಲ್ಲಾ,ಕೋಕಾ,ಇನ್ನಿತರ ಬೆಳೆ ಬೆಳೆಯುತ್ತ ಇದ್ದೇವೆ. ಇದರಿಂದ ಕೃಷಿಕರು ಆರ್ಥಿಕವಾಗಿ ನಷ್ಟ ಅನುಭವಿದುವಂತಾಗುತ್ತದೆ. ಅಳದಂಗಡಿ ಸೊಸೈಟಿ ಕೃಷಿಕರಿಗೆ ಪೂರಕವಾಗಿ ಕೆಲಸ ಮಾಡುತ್ತಿದ್ದಾರೆ ಎಂದರು.

ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ರಾಕೇಶ್ ಹೆಗ್ಡೆ ಬಳಂಜ ಅವರು ಅಧ್ಯಕ್ಷತೆ ವಹಿಸಿದ್ದರು. ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ನಿರ್ದೇಶಕ ಕುಶಾಲಪ್ಪ ಗೌಡ ಸುವರ್ಣ ಸಂಭ್ರಮದ ಲೋಗೊ ಅನಾವರಣಗೊಳಿಸಿದರು.ಮುಖ್ಯ ಅತಿಥಿಗಳಾಗಿ ಸಹಕಾರ ಅಭಿವೃದ್ಧಿ ಅಧಿಕಾರಿ ಪ್ರತಿಮಾ ಬಿ.ವಿ., ಪ್ರಗತಿಪರ ಕೃಷಿಕ ಶಂಕರ ಭಟ್‌ ಕಟ್ಟೂರು ಭಾಗವಹಿಸಿದರು.ಐ.ಸಿ.ಎ.ಆರ್ ನಿವೃತ್ತ ಹಿರಿಯ ವಿಜ್ಞಾನಿ ಡಾ. ವೇಣುಗೋಪಾಲ್ ಕಾಳುಮೆಣಸು ನಾಟಿ, ಪೋಷಣೆ, ರೋಗ ನಿರ್ವಹಣೆಯ ಬಗ್ಗೆ ಮಾಹಿತಿ ನೀಡಿದರು‌. ದ.ಕ. ಜಿಲ್ಲಾ ಕಾಳುಮೆಣಸು ಹಾಗೂ ಕಾಫಿ ಬೆಳೆಗಾರ ಅಜಿತ್‌ ಪ್ರಸಾದ್ ರೈ ಕಾಯರ್ತಡಿ ದ.ಕ. ಜಿಲ್ಲೆಯಲ್ಲಿ ಅಡಿಕೆಗೆ ಪರ್ಯಾಯ ಹಾಗೂ ಮಿಶ್ರ ಬೆಳೆಯಾಗಿ ಲಾಭಾದಾಯಕ ಕಾಫಿ ಕೃಷಿ ಬಗ್ಗೆ ಮಾಹಿತಿ ನೀಡಿದರು.

ಪ್ರಗತಿಪರ ಕೃಷಿಕ ಅನಂತಕೃಷ್ಣ ಪಳ್ಳತ್ತಡ್ಕ ನೀರಾವರಿ, ಆಟೋಮೇಟಿಕ್ ಇರಿಗೇಷನ್ ಮತ್ತು ಫಟಿಗೇಷನ್ ಸಿಸ್ಟಂ ಬಗ್ಗೆ ತಿಳಿಸಿದರು.ಆಡಳಿತ ಮಂಡಳಿಯ ಉಪಾಧ್ಯಕ್ಷ ಜನಾರ್ಧನ,ಸಿಇಓ ಮೀರಾ, ನಿರ್ದೇಶಕರಾದ ಗುರುಪ್ರಸಾದ್ ಹೆಗ್ಡೆ,ವಿಶ್ವನಾಥ ಹೊಳ್ಳ,ಹೇಮಂತ್,ಕೊರಗಪ್ಪ,ದೇವಿಪ್ರಸಾಸ್ ಶೆಟ್ಟಿ, ದಿನೇಶ್ ಪಿ.ಕೆ,ದೇಜಪ್ಪ ಪೂಜಾರಿ,ಧರ್ಣಪ್ಪ,ಸುಂದರಿ,ಮಮತಾ,ವಲಯ ಮೇಲ್ವಿಚಾರಕ ಸುದರ್ಶನ್ ಉಪಸ್ಥಿತರಿದ್ದರು.ವಿಜಯ್ ಕುಮಾರ್ ಜೈನ್ ಕಾರ್ಯಕ್ರಮ ನಿರೂಪಿಸಿದರು.ಅಕ್ಷರ್ ಕೀರ್ತಿ ಪ್ರಾರ್ಥನೆಗೈದರು.

ಬಾಕ್ಸ್ರೈತರಿಗೆ ಪ್ರಯೋಜನ:ರಾಕೇಶ್ ಹೆಗ್ಡೆಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವತಿಯಿಂದ ಕಳೆದ ವರ್ಷ ಕೃಷಿಕರಿಗೆ ಪ್ರಯೋಜನವಾಗಲಿ ಎಂಬ ಸದುದ್ದೇಶದಿಂದ ಕಾಳುಮೆಣಸು ಮತ್ತು ಜಾಯಿಕಾಯಿ ಬೆಳೆಯ ಬಗ್ಗೆ ರೈತರಿಗೆ ತಿಳಿಸಿ,ಗಿಡ ವಿತರಿಸುವ ಕೆಲಸ ಮಾಡಲಾಗಿದೆ. ಈ ಬಾರಿ ಕಾಳು ಮೆಣಸು ಜೊತೆಗೆ ಕಾಫಿ ಬೆಳೆಯ ಬಗ್ಗೆ ಇಲ್ಲಿನ ಕೃಷಿಕರಿಗೆ ತಿಳಿಸುವ ಪ್ರಯತ್ನ ನಮ್ಮದಾಗಿದೆ.ವಿಶೇಷವಾಗಿ ಅಳದಂಗಡಿ ಸೊಸೈಟಿಯು 50ವರ್ಷದ ಸಂಭ್ರಮದಲ್ಲಿದ್ದು ಸುವರ್ಣ ಸಂಭ್ರಮಕ್ಕೆ ಚಾಲನೆ ಕೂಡ ನೀಡಲಾಗಿದೆ ಎಂದು ಅಳದಂಗಡಿ ಸಿಎ ಬ್ಯಾಂಕ್ ಅದ್ಯಕ್ಷ ರಾಕೇಶ್ ಹೆಗ್ಡೆ ತಿಳಿಸಿದ್ದಾರೆ.

Related posts

ಬೆಂಗಳೂರಿನ ಸಪ್ನ ಪುಸ್ತಕ ಮಳಿಗೆಯಲ್ಲಿ ಪದ್ಮಲತಾ ಮೋಹನ್ ನಿಡ್ಲೆ ಅವರ ಕಾದಂಬರಿ ‘ಮೃತ್ಯು ಚುಂಬನ’ ಕೃತಿ ಬಿಡುಗಡೆ

Suddi Udaya

ದ್ವಿತೀಯ ಪಿಯುಸಿ ಪರೀಕ್ಷೆ-2 ರ ಫಲಿತಾಂಶ ಪ್ರಕಟ: ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ರಾಜ್ಯಮಟ್ಟದಲ್ಲಿ ಹಲವು ರ್‍ಯಾಂಕ್ ಗಳು

Suddi Udaya

ಸುಲ್ಕೇರಿ ಶ್ರೀರಾಮ ಶಾಲೆಯಲ್ಲಿ ವಿಶ್ವ ಬಾಲಕಾರ್ಮಿಕ ವಿರೋಧಿ ದಿನಾಚಾರಣೆ

Suddi Udaya

ಪುಂಜಾಲಕಟ್ಟೆ ಕೆ ಪಿ ಎಸ್ ಪ್ರೌಢಶಾಲಾ ವಿಭಾಗ ವಿದ್ಯಾರ್ಥಿ ಪರಿಷತ್ ರಚನೆ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಗೆ ಶೇ. 98.61

Suddi Udaya

ಪೆರೋಡಿತ್ತಾಯಕಟ್ಟೆ ಸ.ಉ.ಪ್ರಾ. ಶಾಲೆಯಲ್ಲಿ ಮೆಟ್ರಿ ಕ್ ಮೇಳ

Suddi Udaya
error: Content is protected !!