24.4 C
ಪುತ್ತೂರು, ಬೆಳ್ತಂಗಡಿ
April 30, 2026
Uncategorized

ರಮ್ಜಾನ್ ಹಬ್ಬದ ಪ್ರಯುಕ್ತ ವೇಣೂರು ಆರಕ್ಷಕ ಠಾಣೆಯಲ್ಲಿ ಶಾಂತಿ ಸಭೆ

ವೇಣೂರು; ರಮ್ಜಾನ್ ಹಬ್ಬದ ಪ್ರಯುಕ್ತ ಶಾಂತಿ ಸಭೆಯನ್ನು ವೇಣೂರು ಆರಕ್ಷಕ ಠಾಣ ಉಪನಿರೀಕ್ಷಕ ಶ್ರೀ ಅಕ್ಷಯ ಡವಗಿ ರವರ ಅಧ್ಯಕ್ಷತೆಯಲ್ಲಿ ಮಾ 14 ರಂದು ನಡೆಯಿತು.

ವೇಣೂರು ಠಾಣಾ ವ್ಯಾಪ್ತಿಯ ಮಸೀದಿ ಆಡಳಿತ ಸಮಿತಿ ಮತ್ತು ಸಂಘ ಸಂಸ್ಥೆಗಳ ಪದಾಧಿಕಾರಿಗನ್ನುದ್ದೇಶಿಸಿ ಮಾತಾಡಿದ,ಠಾಣಾಧಿಕಾರಿ,ಕಾನೂನು ಮತ್ತು ಸುವ್ಯವಸ್ಥೆಯನ್ನು ಪಾಲಿಸಿ ಶಾಂತಿ ಸೌಹಾರ್ದತೆಯಿಂದ ಹಬ್ಬವನ್ನು ಆಚರಿಸುವಂತೆ ವಿನಂತಿಸಿದರು.ನಮ್ಮ ಠಾಣಾ ವ್ಯಾಪ್ತಿಯಲ್ಲಿ ಇಲ್ಲಿಯವರೆಗೆ ಅತ್ಯಂತ ಶಾಂತಿಯಿಂದ ಹಬ್ಬ ಹರಿದಿನಗಳ ಆಚರಣೆಯ ಇತಿಹಾಸವಿದ್ದರೋ,ಮುಂಜಾಗೃತಾ ಕ್ರಮವಾಗಿ ಈ ಸಭೆಯನ್ನು ಕರೆಯಲಾಗಿದ್ದು ಬಂದು ಸಲಹೆ ಸೂಚನೆ ನೀಡಿದ್ದಕ್ಕೆ ವಂದನೆಗಳು ಮುಂದೆಯೂ ನಿಮ್ಮಲ್ಲರ ಸಹಕಾರ ಇರಲಿ ಎಂದು ಹಬ್ಬಕ್ಕೆ ಶುಭ ಹಾರೈಸಿದರು.

ಎ ಎಸ್ ಐ, ಶ್ರೀ ವೆಂಕಟೇಶ್ ಮತ್ತು ಸಿಬಂದಿ ವರ್ಗ,ಪತ್ರಕರ್ತ ಎಚ್ ಮಹಮ್ಮದ್ ವೇಣೂರು,ಪಡ್ಡoದಡ್ಕ ಮಸೀದಿ ಆಡಳಿತ ಸಮಿತಿ ಅಧ್ಯಕ್ಷ ಇಸ್ಮಾಯಿಲ್ ಕೆ ಪೆರಿಂಜೆ, ಪೆರಿಂಜೆ ಮದರಸ ಸಮಿತಿ ಅಧ್ಯಕ್ಷ ಅಶ್ರಫ್ ಗಾಂಧಿನಗರ,ಪುಲಾಬೆ ಮಸೀದಿ ಆಡಳಿತ ಸಮಿತಿ ಅಧ್ಯಕ್ಷ ಅಲಿಯಬ್ಬ,ಕರಿಮನೇಲು ಶಾಂತಿ ನಗರ ಮದರಸ ಸಮಿತಿ ಅಧ್ಯಕ್ಷ ಪಿ.ಎಚ್ ಅಶ್ರಫ್ ,ಇಸ್ಮಾಯಿಲ್ ಉಳ್ತೂರು ಕೆಪಿ ಬಸೀರ್ , ಪುತ್ತುಮೋನು ಕಾಶಿಪಟ್ಣ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.

Related posts

ಮಾಲಾಡಿ ಗ್ರಾ.ಪಂ ಅಧ್ಯಕ್ಷ ಪುನೀತ್ ಕುಮಾರ್ ನೇತೃತ್ವದಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಉಂಟಾಗಿರುವ ದೊಡ್ಡ ಗಾತ್ರದ ಹೊಂಡಗಳನ್ನು ಮುಚ್ಚುವ ಕೆಲಸ, ಸಾರ್ವಜನಿಕರಿಂದ ಮೆಚ್ಚುಗೆ

Suddi Udaya

ದೀಪಾವಳಿ ಗೋ ಪೂಜೆ ಪ್ರಯುಕ್ತ ಡಾ| ಡಿ. ವೀರೇಂದ್ರ ಹೆಗ್ಗಡೆ ದಂಪತಿಯಿಂದ ಗೋವುಗಳಿಗೆ ಉಪಾಹಾರ

Suddi Udaya

ಉಜಿರೆ ಗ್ರಾ.ಪಂ. ಗೆ ಕೇಂದ್ರ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಅಧಿಕಾರಿಗಳು ಭೇಟಿ

Suddi Udaya

ಶ್ರೀ ಕ್ಷೇತ್ರ ತೆಕ್ಕಾರಿಗೆ ಮಾಣಿಲ ಶ್ರೀ ಭೇಟಿ

Suddi Udaya

ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ದಾಖಲಾತಿ ಪ್ರಕ್ರಿಯೆ ಆರಂಭ

Suddi Udaya

ಬೆಳ್ತಂಗಡಿ ವಿಷ್ಣು ಸೇಲ್ಸ್ ನಲ್ಲಿ ದೀಪಾವಳಿ ಪ್ರಯುಕ್ತ ವಿಶೇಷ ಮಾರಾಟ

Suddi Udaya
error: Content is protected !!