23.8 C
ಪುತ್ತೂರು, ಬೆಳ್ತಂಗಡಿ
July 31, 2026
Uncategorized

ರಮ್ಜಾನ್ ಹಬ್ಬದ ಪ್ರಯುಕ್ತ ವೇಣೂರು ಆರಕ್ಷಕ ಠಾಣೆಯಲ್ಲಿ ಶಾಂತಿ ಸಭೆ

ವೇಣೂರು; ರಮ್ಜಾನ್ ಹಬ್ಬದ ಪ್ರಯುಕ್ತ ಶಾಂತಿ ಸಭೆಯನ್ನು ವೇಣೂರು ಆರಕ್ಷಕ ಠಾಣ ಉಪನಿರೀಕ್ಷಕ ಶ್ರೀ ಅಕ್ಷಯ ಡವಗಿ ರವರ ಅಧ್ಯಕ್ಷತೆಯಲ್ಲಿ ಮಾ 14 ರಂದು ನಡೆಯಿತು.

ವೇಣೂರು ಠಾಣಾ ವ್ಯಾಪ್ತಿಯ ಮಸೀದಿ ಆಡಳಿತ ಸಮಿತಿ ಮತ್ತು ಸಂಘ ಸಂಸ್ಥೆಗಳ ಪದಾಧಿಕಾರಿಗನ್ನುದ್ದೇಶಿಸಿ ಮಾತಾಡಿದ,ಠಾಣಾಧಿಕಾರಿ,ಕಾನೂನು ಮತ್ತು ಸುವ್ಯವಸ್ಥೆಯನ್ನು ಪಾಲಿಸಿ ಶಾಂತಿ ಸೌಹಾರ್ದತೆಯಿಂದ ಹಬ್ಬವನ್ನು ಆಚರಿಸುವಂತೆ ವಿನಂತಿಸಿದರು.ನಮ್ಮ ಠಾಣಾ ವ್ಯಾಪ್ತಿಯಲ್ಲಿ ಇಲ್ಲಿಯವರೆಗೆ ಅತ್ಯಂತ ಶಾಂತಿಯಿಂದ ಹಬ್ಬ ಹರಿದಿನಗಳ ಆಚರಣೆಯ ಇತಿಹಾಸವಿದ್ದರೋ,ಮುಂಜಾಗೃತಾ ಕ್ರಮವಾಗಿ ಈ ಸಭೆಯನ್ನು ಕರೆಯಲಾಗಿದ್ದು ಬಂದು ಸಲಹೆ ಸೂಚನೆ ನೀಡಿದ್ದಕ್ಕೆ ವಂದನೆಗಳು ಮುಂದೆಯೂ ನಿಮ್ಮಲ್ಲರ ಸಹಕಾರ ಇರಲಿ ಎಂದು ಹಬ್ಬಕ್ಕೆ ಶುಭ ಹಾರೈಸಿದರು.

ಎ ಎಸ್ ಐ, ಶ್ರೀ ವೆಂಕಟೇಶ್ ಮತ್ತು ಸಿಬಂದಿ ವರ್ಗ,ಪತ್ರಕರ್ತ ಎಚ್ ಮಹಮ್ಮದ್ ವೇಣೂರು,ಪಡ್ಡoದಡ್ಕ ಮಸೀದಿ ಆಡಳಿತ ಸಮಿತಿ ಅಧ್ಯಕ್ಷ ಇಸ್ಮಾಯಿಲ್ ಕೆ ಪೆರಿಂಜೆ, ಪೆರಿಂಜೆ ಮದರಸ ಸಮಿತಿ ಅಧ್ಯಕ್ಷ ಅಶ್ರಫ್ ಗಾಂಧಿನಗರ,ಪುಲಾಬೆ ಮಸೀದಿ ಆಡಳಿತ ಸಮಿತಿ ಅಧ್ಯಕ್ಷ ಅಲಿಯಬ್ಬ,ಕರಿಮನೇಲು ಶಾಂತಿ ನಗರ ಮದರಸ ಸಮಿತಿ ಅಧ್ಯಕ್ಷ ಪಿ.ಎಚ್ ಅಶ್ರಫ್ ,ಇಸ್ಮಾಯಿಲ್ ಉಳ್ತೂರು ಕೆಪಿ ಬಸೀರ್ , ಪುತ್ತುಮೋನು ಕಾಶಿಪಟ್ಣ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವ: ಸವ೯ಧಮ೯ ಸಮ್ಮೇಳನದ 93ನೇ ಅಧಿವೇಶನ ಉದ್ಘಾಟನೆ

Suddi Udaya

ಅಳದಂಗಡಿ: ಕಾಂಗ್ರೆಸ್ ಪಕ್ಷದ ಕಾರ್ಯಾಲಯ ಹಾಗೂ ಸೇವಾ ಸಿಂಧು ಕೇಂದ್ರದ ಉದ್ಘಾಟನೆ

Suddi Udaya

ಅ.4-5: ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಶ್ರವಣ ಮತ್ತು ಮಾತು ಪರಿಶೀಲನಾ ಶಿಬಿರ

Suddi Udaya

ನಾವೂರು ತಡೆಗೋಡೆ ನಿರ್ಮಾಣನೀರು ನಿಂತು ನಡೆದುಕೊಂಡು ಹೋಗುವುದಕ್ಕೆ ಸಮಸ್ಯೆ

Suddi Udaya

ಜು.31 ಬೆಳಾಲು ಶ್ರೀ ಧ.ಮಂ.ಪ್ರೌ. ಶಾಲೆಯ ಮುಖ್ಯ ಶಿಕ್ಷಕ ರಾಮಕೃಷ್ಣ ಭಟ್ ಚೊಕ್ಕಾಡಿ ಸೇವಾ ನಿವೃತ್ತಿ: ನಿವೃತ್ತಿಯಂದು ಶಿಷ್ಯರಿಂದ ಅಕ್ಷರದ ಗುರು ಕಾಣಿಕೆ

Suddi Udaya

ಡಾ. ಶಿವರಾಮ ಕಾರಂತ ಪ್ರಶಸ್ತಿಗೆ ಕಾಶಿಪಟ್ಣ ಗ್ರಾಮ ಪಂಚಾಯತ್ ಆಯ್ಕೆ

Suddi Udaya
error: Content is protected !!